ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ
Team Udayavani, Oct 27, 2020, 10:43 PM IST
ಸಾಂದರ್ಭಿಕ ಚಿತ್ರ
ಉಪ್ಪಿನಂಗಡಿ: ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ಅಡಿಕೆ ವ್ಯಾಪಾರಿಯೋರ್ವರ ಮೇಲೆ ಚೂರಿಯಿಂದ ತಿವಿದು 4 ಲಕ್ಷ ರೂ.ಗೂ ಅಧಿಕ ಹಣವನ್ನು ದರೋಡೆಗೈದ ಘಟನೆ ಮಂಗಳವಾರ ಪೆರ್ನೆ ಸಮೀಪದ ಪದೆಬರಿಯಲ್ಲಿ ನಡೆದಿದೆ.
ಪದೆಬರಿ ನಿವಾಸಿ ದೀಪಕ್ ಶೆಟ್ಟಿ (49) ಅವರು ಪೆರ್ನೆಯಲ್ಲಿ ಅಡಿಕೆ ವ್ಯಾಪಾರಿಯಾಗಿದ್ದು, ಮಂಗಳವಾರ ಅಡಿಕೆ ಮಾರಾಟದ ಹಣದೊಂದಿಗೆ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ದರೋಡೆ ನಡೆದಿದೆ. ಚೂರಿಯಿಂದ ತಿವಿಯಲ್ಪಟ್ಟ ದೀಪಕ್ ಶೆಟ್ಟಿ ತಲೆ, ಹೊಟ್ಟೆಗೆ ಏಟು ತಗಲಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ನಾಲ್ವರು ದರೋಡೆಕೋರರ ತಂಡ ಬೈಕ್ನಲ್ಲಿ ಬಂದು ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ. ಅಡಿಕೆ ಮಾರಾಟದ ಹಣ ಅವರ ಕೈ ಸೇರಿದ ಕುರಿತು ಖಚಿತ ಮಾಹಿತಿ ಪಡೆದವರೇ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ