ಉಪ್ಪಿನಂಗಡಿ: ಕಾಲು ಜಾರಿ ನೀರಿಗೆ ಬಿದ್ದು ಬಾಲಕ ಸಾವು
Team Udayavani, Mar 13, 2023, 6:05 AM IST
ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರವಿವಾರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.
ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ| ಮಹಮ್ಮದ್ ತಾಹೀರ್ ಅವರ ಮಗ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಮಹಮ್ಮದ್ ಸಲ್ಮಾನ್ (16) ಮೃತ ಬಾಲಕ. ಈತ ತನ್ನ ಸೋದರ ಸಂಬಂಧಿ ಬಾಲಕ ಮಹಮ್ಮದ್ ಇರ್ಫಾರ್ (16) ಜತೆಗೂಡಿ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದು, ನದಿಯಲ್ಲಿ ಸ್ನಾನ ಮಾಡುವ ಬಯಕೆಯಿಂದ ಬಿಳಿಯೂರಿನ ಅಣೆಕಟ್ಟಿನ ಬಳಿ ನದಿಗಿಳಿದಾತ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಈತನ ಜತೆಗಿದ್ದ ಮಹಮ್ಮದ್ ಇರ್ಫಾರ್ ರಕ್ಷಿಸಲ್ಪಟ್ಟಿದ್ದಾನೆ.
ಬಡ ಕುಟುಂಬದ ಆಶಾಕಿರಣ
ಮೃತ ಮಹಮ್ಮದ್ ಸಲ್ಮಾನ್ನದ್ದು ಬಡಕುಟುಂಬವಾಗಿದ್ದು, ಆತನ ತಂದೆ ವರ್ಷದ ಹಿಂದೆ ಸಾವನ್ನಪ್ಪಿದ್ದರು. ತಾಯಿ ಅನಾರೋಗ್ಯಪೀಡಿತರಾಗಿದ್ದು, ತನ್ನ ಕಿರಿಯ ಸಹೋದರನೊಂದಿಗೆ ಬಂಧುಗಳ ಸಹಕಾರದೊಂದಿಗೆ ಜೀವನ ನಡೆಸುತ್ತಿದ್ದಾರೆ. ಪ್ರಸಕ್ತ ಮಾಣಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಓದುತ್ತಿದ್ದ ಈತ ಮುಂಬರುವ ಪಬ್ಲಿಕ್ ಪರೀಕ್ಷೆಗೆ ಸಿದ್ಧತೆಯನ್ನು ಮಾಡಿಕೊಂಡಿದ್ದ. ರವಿವಾರವೂ ಮನೆ ಪಾಠಕ್ಕೆ ಹಾಜರಾಗಿ ಮಧ್ಯಾಹ್ನ ಮನೆಗೆ ಬಂದಾತ ಮಧ್ಯಾಹ್ನದ ಊಟವನ್ನೂ ಮಾಡದೆ ಬುಡೋಳಿಯ ದೊಡ್ಡಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋದಾತ ಅಲ್ಲಿಂದ ಪೆರ್ನೆಯಲ್ಲಿನ ಚಿಕ್ಕಮ್ಮನ ಮನೆಗೆ ಬಂದಿದ್ದ. ವಿಧಿಯ ಲೀಲೆಗೆ ಸಿಲುಕಿ ನದಿಯಲ್ಲಿನ ಸ್ನಾನದ ನೆಪದಲ್ಲಿ ಸಾವಿಗೆ ಸಿಲುಕುವ ಮೂಲಕ ಕುಟುಂಬದ ಆಶಾಕಿರಣವೊಂದು ಕಣ್ಮರೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ