ಲಾರಿ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು
Team Udayavani, Apr 3, 2023, 6:00 AM IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಪೊನ್ನಪ್ಪನ್ (61) ಅವರ ಮೇಲೆ ಲಾರಿಯೊಂದು ಚಲಿಸಿದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ.
ಮೃತ ಪೊನ್ನಪ್ಪನ್ ಕೇರಳ ಮೂಲದವರಾಗಿದ್ದು, ಅವರು 25 ವರ್ಷಗಳಿಂದ ಗುಂಡ್ಯ ಪರಿಸರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಹೊಟೇಲ್ಗಳಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಜೀವನ ಸಾಗಿಸುತ್ತಿದ್ದ ಅವರು ರವಿವಾರ ಮುಂಜಾನೆ 4.30ರ ಸುಮಾರಿಗೆ ಗುಂಡ್ಯ ಚೆಕ್ ಪೋಸ್ಟ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೆಂಗಳೂರಿನಿಂದ ಮಂಗಳೂರಿನತ್ತ ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ ಲಾರಿಯ ಚಾಲಕ ನಿರ್ಲಕ್ಷ್ಯತನದಿಂದ ಲಾರಿಯನ್ನು ಚಲಾಯಿಸಿ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.
ಘಟನೆಯ ಬಳಿಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದ ಲಾರಿ ಚಾಲಕನನ್ನು ಬೆನ್ನಟ್ಟಿದ ನೆಲ್ಯಾಡಿ ಹೊರಠಾಣಾ ಪೊಲೀಸರು ಉಪ್ಪಿನಂಗಡಿಯ ಪಂಜಳ ಎಂಬಲ್ಲಿ ಲಾರಿಯನ್ನು ಚಾಲಕ ಸಹಿತ ವಶಕ್ಕೆ ಪಡೆದರು. ಲಾರಿ ಚಾಲಕನನ್ನು ಬೆಂಗಳೂರು ಮೂಲದ ಅಜಯ್ ಎಂದು ತಿಳಿಯಲಾಗಿದೆ.
ಘಟನೆಯ ಬಗ್ಗೆ ಎಂ.ಕೆ. ಪೌಲೋಸ್ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ