ಮಹಾಕಾಳಿ ಅಮ್ಮನವರ ಮೆಚ್ಚಿ ಉತ್ಸವ


Team Udayavani, Mar 17, 2019, 6:35 AM IST

17-marc1h-8.jpg

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇಗುಲದ ಮಹಾಕಾಳಿ ದೇವಿಯ ಮೆಚ್ಚಿ ಉತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಡಗರದೊಂದಿಗೆ ಶುಕ್ರವಾರ ರಾತ್ರಿ ನಡೆಯಿತು.

ರಥಬೀದಿಯ ದೈವಾರಾಧಕರ ಕಟ್ಟೆಯಲ್ಲಿ ನಲಿಕೆ ಮನೆತನದವರಿಂದ ರಚಿಸಲಾದ ಶ್ರೀ ದೇವಿಯ ಮುಡಿ ಅಣಿಗಳನ್ನು ಪ್ರಾರಂಪರಿಕ ವಿಧಿ ವಿಧಾನಗಳೊಂದಿಗೆ ಶ್ರೀ ದೇವಿಯ ಸನ್ನಿಧಿಗೆ ತಂದಿರಿಸಿದ ಬಳಿಕ ಮೆಚ್ಚಿಯ ನಡಾವಳಿಗೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಶ್ರೀ ದೇವಿಯ ಮುಡಿಗೆ ಮಲ್ಲಿಗೆ ಹೂವನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಮಹಾಕಾಳಿ ದೇವಿಯ ಗುಡಿಯಲ್ಲಿ ಭಕ್ತರು ಶ್ರೀ ದೇವಿಗೆ ಕುಂಕುಮಾರ್ಚನೆ ಸೇವೆ ಸಲ್ಲಿಸಿದರು.

ಮಹಾಕಾಳಿ ನೇಮದ ಅಂಗವಾಗಿ ಇಲ್ಲಿನ ಕಾಳಿಕಾಂಬಾ ಭಜನ ಮಂಡಳಿಯ ಆಶ್ರಯದಲ್ಲಿ 5,000ಕ್ಕೂ ಹೆಚ್ಚು ಮಂದಿಗೆ ಪಾರಂಪರಿಕ ಸೋಜಿ ವಿತರಣೆಯನ್ನು ನಡೆಸಲಾಯಿತು. ದೇಗುಲದ ವತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಲಿಮಾರ ರಘುನಾಥ ರೈ, ಕಾರ್ಯ ನಿರ್ವಹಣಾಧಿಕಾರಿ ಹರಿಶ್ಚಂದ್ರ, ಸಮಿತಿ ಸದಸ್ಯರಾದ ಡಾ| ರಾಜಾರಾಮ ಕೆ.ಬಿ., ರಾಧಾಕೃಷ್ಣ ನಾೖಕ್‌, ಪ್ರಕಾಶ್‌ ರೈ ಬೆಳ್ಳಿಪ್ಪಾಡಿ, ಸೋಮನಾಥ, ಅರ್ತಿಲ ಕೃಷ್ಣರಾವ್‌, ಸವಿತಾ ಹರೀಶ್‌, ಅನಿತಾ ಕೆ., ಗಣ್ಯರಾದ ಕರುಣಾಕರ ಸುವರ್ಣ, ಧನ್ಯಕುಮಾರ್‌ ರೈ, ಪ್ರಶಾಂತ್‌ ಶಿವಾಜಿನಗರ, ಯತೀಶ್‌ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ, ರಾಮಚಂದ್ರ ಮಣಿಯಾಣಿ, ಭಾಸ್ಕರ್‌ ಆಚಾರ್ಯ, ಕೆ. ಸುಧಾಕರ ಶೆಟ್ಟಿ, ಚಂದ್ರಹಾಸ ಹೆಗ್ಡೆ, ವಿಜಯ ಕುಮಾರ್‌ ಕಲ್ಲಳಿಕೆ, ಸುಂದರ ಗೌಡ, ಬಿ.ಕೆ. ಆನಂದ, ಕೈಲಾರ್‌ ರಾಜ್‌ ಗೋಪಾಲ ಭಟ್‌, ಪುಷ್ಪಕರ್‌ ನಾಯಕ್‌, ಸುಧಾಕರ ಶೆಟ್ಟಿ, ಎಂ. ವರದರಾಜ್‌, ವಿನಿತ್‌ ಶಗ್ರಿತ್ತಾಯ, ಕೆ. ಜಗದೀಶ್‌ ಶೆಟ್ಟಿ ಭಾಗವಹಿಸಿದ್ದರು.

ದೈವಗಳ ನೇಮ
ಶ್ರೀ ದೇವರ ಗುಡಿಯ ಮುಂಭಾಗದಲ್ಲಿ ಎಣ್ಣೆಬೂಳ್ಯ ಪಡೆದು ದೇಗುಲದ ನೇಮದ ಗದ್ದೆಯಲ್ಲಿ ನೇಮ-ನಡಾವಳಿಗಳು ನಡೆದವು. ಬಳಿಕ ದೇಗುಲದಲ್ಲಿನ ಪರಿವಾರ ದೈವಗಳ ನೇಮ ಶನಿವಾರ ನಸುಕಿನ ವೇಳೆ ನಡೆಯಿತು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.