ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲೇ ಘನತ್ಯಾಜ್ಯ ರಾಶಿ


Team Udayavani, May 16, 2019, 6:00 AM IST

16

ಉಪ್ಪಿನಂಗಡಿ: ಘನತ್ಯಾಜ್ಯ ಘಟಕಕ್ಕೆ ನಿವೇಶನ ಕೊರತೆಯಿಂದ ಹೆದ್ದಾರಿ ಬದಿ ಸುರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಗ್ರಾಮ ಪಂಚಾಯತ್‌ ಸವಿ ಸ್ತಾರವಾಗಿದ್ದು, 20ಕ್ಕೂ ಮಿಕ್ಕ ಸದಸ್ಯರಿದ್ದು, ವರ್ಷವೊಂದಕ್ಕೆ 10 ಕೋಟಿಗೂ ಮಿಕ್ಕ ಮಿತಿ ಮುಟ್ಟುವಂತಾಗಿದೆ. ಕುಡಿಯುವ ನೀರು, ದಾರಿ ದೀಪ, ರಸ್ತೆಗಳ ಅಭಿವೃದ್ಧಿಗೆ ಕಾಳಜಿ ವಹಿಸಿದ್ದರೂ ಘನತ್ಯಾಜ್ಯ ವಿಲೇವಾರಿ ಗೊತ್ತುಗುರಿ ಕಳೆದುಕೊಂಡಂತಾಗಿದೆ.

ಬದಲಿ ಜಾಗವಿಲ್ಲ
ಉಪ್ಪಿನಂಗಡಿ ಅತೀ ದೊಡ್ಡ ಪಂಚಾಯತ್‌ ಎನ್ನುವ ಹೆಗ್ಗಳಿಕೆ ಇದ್ದರೂ ತ್ಯಾಜ್ಯ ಘಟಕಕ್ಕೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಈಗಾಗಲೇ ಹಿರ್ತಡ್ಕ ಮಠ ಎನ್ನುವಲ್ಲಿ ಘಟಕಕ್ಕಾಗಿ ಜಾಗವನ್ನು ಮಂಜೂರುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆದರೆ ಆಸುಪಾಸಿನ ವ್ಯಕ್ತಿಯೋರ್ವರು ತಡೆಯಾಜ್ಞೆ ತಂದಿದ್ದು, ಬದಲಿ ಜಾಗ ಇಲ್ಲದಾಗಿದೆ.

ಈ ಹಿಂದೆ ಉಪ್ಪಿನಂಗಡಿ ಹಾಗೂ ಹಿರೇಬಂಡಾಡಿ ಪ್ರದೇಶದಲ್ಲಿ ಪಂಚಾ ಯತ್‌ಗೆ ಸೇರಿದ ನಿರ್ವೇಶನದಲ್ಲಿ ಪ್ರತ್ಯೇಕ ಡಂಪಿಂಗ್‌ ಯಾರ್ಡ್‌ ರಚಿಸಲಾಗಿತ್ತು. ಇದಕ್ಕೆ ಆಸುಪಾಸಿನ ನಾಗರಿಕರು ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ನೀಡಿ ರದ್ದುಗೊಳಿಸಿದ್ದು, ಸ್ಥಳೀಯ ಪಂ.ಗೆ ದಿಕ್ಕು ತೋಚದಂತಾಗಿದೆ. ಹೆದ್ದಾರಿ ಬದಿ ಸುರಿಯುವ ಅನಿವಾರ್ಯತೆ ಮೂಡಿದೆ. ಗ್ರಾಮದಲ್ಲಿ ಸರಕಾರಿ ಗೋಮಾಳ ನಿವೇಶನವಿದ್ದರೂ ಸಾರ್ವಜನಿಕ ಸೇವೆಯ ಘನತ್ಯಾಜ್ಯ ನಿರ್ವಹಣೆಗೆ ಅದು ಸಿಗದಿರುವುದು ವಿಪರ್ಯಾಸ.

ಪಂಚಾಯತ್‌ ಹಲವು ಬಾರಿ ವಿವಿಧ ಆಯಾಮಗಳಲ್ಲಿ ಪ್ರತ್ಯೇಕ ಸ್ಥಳಕ್ಕಾಗಿ ವ್ಯವಸ್ಥೆಗೆ ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಪ್ಲಾಸ್ಟಿಕ್‌ ಸಹಿತ ಘನ ತ್ಯಾಜ್ಯ ವಸ್ತುಗಳ ಪುಡಿಗೈಯುವ ಮೂಲಕ ಬದಲಿ ವ್ಯವಸ್ಥೆ ಯಂತ್ರ ಖರೀದಿಸಲು ಕನಿಷ್ಠ 60 ಲಕ್ಷ ರೂ. ವೆಚ್ಚವಿದ್ದು, ಅಷ್ಟೊಂದು ಹಣ ಜೋಡಣೆಗೆ ಬಜೆಟ್‌ನಲ್ಲಿ ಅವಕಾಶವಿಲ್ಲ. ಅದಕ್ಕಾಗಿ ವರ್ತಕರ, ಜನಪ್ರತಿನಿಧಿಗಳ ಸಹಕಾರವಿದ್ದರೆ ಹಾದಿ ಸುಗಮವಾಗಲಿದೆ ಎಂದು ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುಲ್‌ ರಹಿಮಾನ್‌ ಹೇಳಿದ್ದಾರೆ.

ಕಾಳಜಿ ವಹಿಸಿ
ಘನತ್ಯಾಜ್ಯ ಘಟಕ ರಚಿಸಲು ಗ್ರಾಮಸ್ಥರ, ಸಂಘಸಂಸ್ಥೆ, ಜನಪ್ರತಿನಿಧಿ, ಅಧಿಕಾರಿಗಳ ಸಹಕಾರ ಕೋರಿ ವಿಶೇಷ ಸಭೆ ಕರೆದು ಪ್ರತ್ಯೇಕ ಜಾಗ ಗುರುತಿಸುವ ಮೂಲಕ ಗ್ರಾಮಸ್ಥರ ಆರೋಗ್ಯದ ಕಡೆ ಕಾಳಜಿ ವಹಿಸಬೇಕು ಎಂದು ಗೋಪಾಲ ಹೆಗ್ಡೆ ಹೇಳಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.