ಊರುಬೈಲು ಸೇತುವೆ: ದಿಮ್ಮಿಗಳ ತೆರವು
Team Udayavani, Jul 26, 2019, 5:00 AM IST
ಜಿ.ಪಂ. ದುರಸ್ತಿ ಮಾಡಿದ್ದ ಸೇತುವೆಗೆ ಮತ್ತೆ ಹಾನಿ
ಅರಂತೋಡು: ಕೆಲವು ದಿನಗಳ ಹಿಂದೆ ಕೊಡಗಿನಲ್ಲಿ ಸುರಿದ ಮಳೆಯ ಪರಿಣಾಮವಾಗಿ ಊರುಬೈಲು ಸೇತುವೆಯ ಅಡಿಯಲ್ಲಿ ಸಿಲುಕಿ ಹಾಕಿ ಕೊಂಡ ಮರದ ದಿಮ್ಮಿಗಳನ್ನು ಹಾಗೂ ಪೊದೆಗಳನ್ನು ಊರವರು ಶ್ರಮದಾನದ ಮೂಲಕ ತೆರವುಗೊಳಿಸಿದರು.
ಕಳೆದ ವರ್ಷದ ಕೊಡಗಿನ ಭೀಕರ ಜಲಪ್ರಳಯದಲ್ಲಿ ಹಾನಿಗೀಡಾದ ಊರು ಬೈಲು ಸೇತುವೆಯನ್ನು ಜಿಲ್ಲಾಡಳಿತ ತಾತ್ಕಾ ಲಿಕವಾಗಿ ದುರಸ್ತಿಗೊಳಿಸಿ, ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿತ್ತು. ಮೂರ್ನಾಲ್ಕು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಮತ್ತೂಮ್ಮೆ ಮರದ ದಿಮ್ಮಿಗಳು ಕೊಚ್ಚಿಕೊಂಡು ಬಂದಿದ್ದು, ಊರುಬೈಲು ಸೇತುವೆ ಭಾಗಶಃ ಹಾನಿಗೀಡಾಗಿತ್ತು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರಾದ ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಎಸ್. ಅನಂತ ಅವರ ಮುಂದಾಳುತ್ವದಲ್ಲಿ ಸ್ಥಳೀಯ ಶ್ರೀ ಭಗವಾನ್ ಸಂಘದ ಸದಸ್ಯರು ಹಾಗೂ ಯುವಕರು ಶ್ರಮದಾನ ಮಾಡಿ, ಸೇತುವೆಯನ್ನು ದುರಸ್ತಿಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಚೆಂಬು ಗ್ರಾ.ಪಂ. ಸದಸ್ಯ ಮನೋಹರ್ ಎನ್.ಸಿ. ಪಂಚಾಯತ್ ವತಿಯಿಂದ ಜೆಸಿಬಿ ವ್ಯವಸ್ಥೆ ಮಾಡಿಕೊಡುವ ಮೂಲಕ ಸಹಕರಿಸಿದರು. ಮಕ್ಕಳು, ಊರವರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು