ಉಜಿರ್‌ಬೆಟ್ಟು: ಬರಡು ಭೂಮಿಯಲ್ಲಿ ಕೃಷಿ ಕ್ರಾಂತಿ; ಬಂಗೇರ್‌ಕಟ್ಟೆ ನಿವಾಸಿಯಿಂದ ಮಾದರಿ ಕಾರ್ಯ


Team Udayavani, Jul 25, 2020, 3:37 PM IST

ಉಜಿರ್‌ಬೆಟ್ಟು: ಬರಡು ಭೂಮಿಯಲ್ಲಿ ಕೃಷಿ ಕ್ರಾಂತಿ; ಬಂಗೇರ್‌ಕಟ್ಟೆ ನಿವಾಸಿಯಿಂದ ಮಾದರಿ ಕಾರ್ಯ

ಉಪ್ಪಿನಂಗಡಿ: ಶ್ರಮಜೀವಿಗಳಿಬ್ಬರು ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಅಗೆದು ಅಡಿಕೆ ಗಿಡ ಮತ್ತು ಗದ್ದೆ ನಾಟಿಯೊಂದಿಗೆ ಕೃಷಿ ಕ್ರಾಂತಿ ಮಾಡಿ ಊರಿಗೆ ಮಾದರಿಯಾಗಿದ್ದಾರೆ. ಕರಾಯ ಗ್ರಾಮದ ಉಜಿರ್‌ಬೆಟ್ಟು ಎಂಬಲ್ಲಿ ಬಂಗೇರ್‌ಕಟ್ಟೆ ನಿವಾಸಿ ಯೂಕೂಬ್‌ಯವರ 1.74 ಎಕ್ರೆ ಮುರ ಕಲ್ಲಿನಿಂದ ಕೂಡಿದ್ದ ಕೃಷಿಗೆ ಯೋಗ್ಯವಲ್ಲದ ಬಂಜರು ಭೂಮಿ ಇದೀಗ ಕೃಷಿ ಯೋಗ್ಯ ಭೂಮಿಯಾಗಿ ಪರಿವರ್ತನೆಗೊಂಡಿದೆ. ಯಾಕೂಬ್‌ ಅವರು ತಣ್ಣೀರುಪಂಥ ಗ್ರಾಮದ ಉರ್ನಡ್ಕ ನಿವಾಸಿ ಆದಂ ಅಲ್‌ ಮದೀನ ಅವರ ಸಹಕಾರದೊಂದಿಗೆ ಕೆಂಪು ಕಲ್ಲು ತೆಗೆದು ಮತ್ತೆ ಮಣ್ಣು ಹಾಕಿ ಸಮತಟ್ಟು ಮಾಡಿ ಕೃಷಿ ಮಾಡಿದ್ದಾರೆ.

1.74 ಎಕ್ರೆ ಭೂಮಿಯಲ್ಲಿ ಅರ್ಧ ಎಕ್ರೆಯಲ್ಲಿ ಉಳುಮೆ ಮಾಡಿ ನೇಜಿ ನಾಟಿ ಮಾಡುತ್ತೇವೆ. ಉಳಿದ ಜಾಗದಲ್ಲಿ ಈಗಾಗಲೇ 450 ಅಡಿಕೆ ಗಿಡ ನೆಡಲಾಗಿದೆ, ಇನ್ನೂ 500 ಗಿಡ ನೆಡುವುದಕ್ಕೆ ತಯಾರಿ ನಡೆಸುತ್ತಿದ್ದೇವೆ ಎಂದು ಯಾಕೂಬ್‌ ತಿಳಿಸಿದ್ದಾರೆ. ಮುರ ಕಲ್ಲಿನಿಂದ ಕೂಡಿದ್ದ ಬಂಜರು ಭೂಮಿಯನ್ನು ಕೃಷಿ ಇಲಾಖೆಯವರಿಗೆ ತೋರಿಸಿ ಮಾಹಿತಿ ಕೇಳಿದ್ದೆವು. ಮೇಲಿನ ಹಂತದಲ್ಲಿರುವ ಕೆಂಪು ಕಲ್ಲುಗಳನ್ನು ತೆಗೆದರೆ ಕೃಷಿಗೆ ಬಳಸಬಹುದು ಎಂದು ಕೃಷಿ ಇಲಾಖೆಯವರು ಮಾಹಿತಿ ನೀಡಿದರು. ಈ ಬಗ್ಗೆ ಅವರಿಂದ ದೃಢೀಕರಣ ಪಡೆದುಕೊಂಡು ಬಳಿಕ ಗಣಿ ಇಲಾಖೆಯಿಂದ ಕೆಂಪು ಕಲ್ಲು ತೆಗೆಯಲು ಅನುಮತಿಗೆ ಮನವಿ ಸಲ್ಲಿಸಿದೆವು. ಗಣಿ ಇಲಾಖೆಯವರು ಪರಿಶೀಲನೆ ನಡೆಸಿ ಕಲ್ಲು ತೆಗೆಯುವುದಕ್ಕೆ ಅನುಮತಿ ನೀಡಿದರು. ಸರಕಾರ ನಿಗದಿಪಡಿಸಿದ ರಾಜಧನ ಕಟ್ಟಿ ಕಾನೂನು ಪ್ರಕಾರ ಕಲ್ಲುಗಳನ್ನು ತೆಗೆದು ಬಳಿಕ ಸಮತಟ್ಟು ಮಾಡಿ ಕೃಷಿಗೆ ಯೋಗ್ಯ ಭೂಮಿಯನ್ನಾಗಿಸಲು ಸಾಧ್ಯವಾಯಿತು ಎಂದು ಅಲ್‌ ಮದೀನ ಆದಂ ತಿಳಿಸಿದ್ದಾರೆ.  ಭತ್ತದ ವಿಶಿಷ್ಟ ನಾಟಿ ವೀಕ್ಷಿಸಲು ಪಂ. ಆಡಳಿತಾಧಿಕಾರಿ ಶೇಷಗಿರಿ ನಾಯಕ್‌ ಹಾಗೂ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇಚ್ಛಾಶಕ್ತಿ ಇದ್ದರೆ ಸಾಧನೆ
ಈ ಜಾಗ ಮುರ ಕಲ್ಲಿನಿಂದ ಕೂಡಿತ್ತು. ಹಡಿಲು ಬಿಡುವುದಕ್ಕೆ ಮನಸ್ಸು ಇರಲಿಲ್ಲ. ಕೃಷಿ ಇಲಾಖೆಯವರಿಂದ ಸಲಹೆ ಪಡೆದು ಗೆಳೆಯ ಆದಂ ಅಲ್‌ ಮದೀನ ಅವರ ಸಹಾಯ ಪಡೆದುಕೊಂಡು ಕೃಷಿ ಯೋಗ್ಯ ಭೂಮಿಯಾಗಿ ಪರಿವರ್ತಿಸಿದೆವು. ಇಚ್ಛಾಶಕ್ತಿ ಇದ್ದರೆ ಸಾಧನೆ ಮಾಡಬಹುದು. ಇದರಲ್ಲಿ ಯಶಸ್ಸು ಆಗುವ ಭರವಸೆ ಹೊಂದಿದ್ದೇವೆ.
 -ಯೂಕೂಬ್‌ ಬಂಗೇರ್‌ಕಟ್ಟೆ ಕೃಷಿ ಸಾಧಕರು

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.