ಬದುಕಿನ ಬವಣೆಗೆ ಪುರಾಣವೇ ದೀವಿಗೆ: ಡಾ| ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ 51ನೇ ಪುರಾಣ ಕಾವ್ಯ ವಾಚನ -ಪ್ರವಚನ ಪ್ರಾರಂಭ

Team Udayavani, Jul 18, 2022, 1:08 AM IST

ಬದುಕಿನ ಬವಣೆಗೆ ಪುರಾಣವೇ ದೀವಿಗೆ: ಡಾ| ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ನಮ್ಮ ಬದುಕಿನ ಎಲ್ಲ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಪುರಾಣ ಗಳಿಂದ ಸೌಹಾರ್ದಯುತ ಪರಿಹಾರ ದೊರೆಯುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ರವಿವಾರ ಹಮ್ಮಿಕೊಂಡ 51ನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನೇಕ ಮಂದಿ ಭಕ್ತರು ತಮ್ಮ ಶಾಪ-ತಾಪ ಪರಿಹಾರಕ್ಕಾಗಿ ಕೌಟುಂಬಿಕ ಸಮಸ್ಯೆಗಳ ಇತ್ಯರ್ಥಕ್ಕಾಗಿ ಧರ್ಮಸ್ಥಳಕ್ಕೆ ಬರುತ್ತಾರೆ. ಮಹಿಳೆಯರು, ಹಿರಿಯರು, ನೊಂದವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆದುದರಿಂದ ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಪುರಾಣಕಾವ್ಯ ವಾಚನ -ಪ್ರವಚನ ಉದ್ಘಾಟಿಸಿದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವ ಸ್ಥಾನದ ಲಕ್ಷ್ಮೀ
ನಾರಾಯಣ ಆಸ್ರಣ್ಣರು ಮಾತನಾಡಿ, ಲೋಕದ ಹಿತವೇ ಶ್ರದ್ಧಾ- ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕ ರಾಗಿ, ಸಭ್ಯ – ಸುಸಂಸ್ಕೃತ ನಾಗರಿಕರಾಗಿ ಬಾಳಬೇಕೆಂಬುದು. ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂ ಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಮುಂದುವರಿದ ಭಾಗವಾಗಿ ಮುಂದೆ ಎಲ್ಲ ತೀರ್ಥ ಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕು ಎಂದು ಆಶಿಸಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಕಲಾವಿದ ಕೆ.ಗೋವಿಂದ ಭಟ್‌ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದ ತಮ್ಮ ಸವåಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣರು ಮತ್ತು ನಿವೃತ್ತ ಕಲಾವಿದ ಕೆ.ಗೋವಿಂದ ಭಟ್‌ ಅವರನ್ನು ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮ್ಮಾನಿಸಿದರು. ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್‌ ಸ್ವಾಗತಿಸಿದರು. ಶ್ರೀನಿವಾಸ ರಾವ್‌ ಧರ್ಮಸ್ಥಳ ವಂದಿಸಿದರು.

ಸೆ. 17ರ ವರೆಗೆ ವಾಚನ – ಪ್ರವಚನ
ಪ್ರತಿಯೊಬ್ಬರಿಗೂ ಜ್ಞಾನದಾಹವಿರಬೇಕು. ಧರ್ಮಸ್ಥಳದಲ್ಲಿ ಭಕ್ತರ ಜ್ಞಾನದಾಹ ನಿವಾರಣೆಗಾಗಿ ವಸ್ತು ಸಂಗ್ರಹಾಲಯ, ಕಾರು ಮ್ಯೂಸಿಯಂ, ಉದ್ಯಾನವನ, ತಾಳೆಗರಿ ಸಂಗ್ರಹ ಮೊದಲಾದ ಸೌಲಭ್ಯಗಳನ್ನು ಒದಗಿಸಲಾಗಿದೆ. ಸೆ. 17ರ ವರೆಗೆ ಪ್ರತಿದಿನ ಸಂಜೆ 6.30ರಿಂದ 8ರ ವರೆಗೆ ಧರ್ಮಸ್ಥಳದಲ್ಲಿ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ ಎಂದು ಡಾ|ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.