ಪಡ್ಡಂದಡ್ಕ: ಜಾಂಡೀಸ್ಗೆ ಯುವಕ ಬಲಿ
Team Udayavani, Oct 27, 2022, 9:18 PM IST
ವೇಣೂರು: ಜಾಂಡೀಸ್ ಜ್ವರದಿಂದ ಬಳಲುತ್ತಿದ್ದ ಪಡ್ಡಂದಡ್ಕ ಕಜೆಮನೆ ನಿವಾಸಿ ಕಿಶೋರ್ ಆಚಾರ್ಯ (22) ಅ.26ರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೃಷ್ಣಯ್ಯ ಮತ್ತು ಪದ್ಮಾವತಿ ದಂಪತಿಯ ಪುತ್ರ ಕಿಶೋರ್ ಆಚಾರ್ಯ ಅವರಿಗೆ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆದಿದ್ದರು. ಆದರೆ ಅ. 26ರಂದು ಜ್ವರ ಮತ್ತೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಾಂಡೀಸ್ ಎಂದು ಖಚಿತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಕಿಶೋರ್ ವೇಣೂರು ಪಾರ್ಶ್ವನಾಥ ಪ್ರಿಂಟರ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಂದೆ, ತಾಯಿ, ಮೂವರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ