ವಿಜಯನಗರ ನೂತನ ಜಿಲ್ಲೆ: ಪುತ್ತೂರಿಗೆ ಹೊಸ ನಿರೀಕ್ಷೆ

ಗ್ರಾಮಾಂತರ ಜಿಲ್ಲಾ ಕೇಂದ್ರಕ್ಕೆ ಆಗ್ರಹ ; ತಾಲೂಕು ಕೇಂದ್ರವಾಗಿ 93 ವರ್ಷ ಪೂರ್ಣ

Team Udayavani, Nov 23, 2020, 6:55 AM IST

ವಿಜಯನಗರ ನೂತನ ಜಿಲ್ಲೆ: ಪುತ್ತೂರಿಗೆ ಹೊಸ ನಿರೀಕ್ಷೆ

ಪುತ್ತೂರು: ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ನೂತನ ಜಿಲ್ಲಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ಗ್ರಾಮಾಂತರ ಜಿಲ್ಲಾ ಕೇಂದ್ರದ ಬೇಡಿಕೆ ಈಡೇರಿಕೆಗೆ ಕಾಯುತ್ತಿರುವ ಪುತ್ತೂರಿನ ನಿರೀಕ್ಷೆ ಈಡೇರಬೇಕು ಎಂಬ ಆಗ್ರಹಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮೂರು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಚುನಾವಣ ಪ್ರಚಾರ ಸಂದರ್ಭದಲ್ಲಿ ತಾನು ಮುಖ್ಯಮಂತ್ರಿಯಾದರೆ ಪುತ್ತೂರನ್ನು ಜಿಲ್ಲೆಯನ್ನಾಗಿ ಘೋಷಿಸುವುದಾಗಿ ಹೇಳಿರುವುದು ಕೂಡ ಜಿಲ್ಲಾ ಕೇಂದ್ರದ ನಿರೀಕ್ಷೆಗೆ ಪೂರಕವೆನಿಸಿದೆ. ಅವರು ಮುಖ್ಯಮಂತ್ರಿಯಾಗಿ ವರ್ಷ ಕಳೆದಿದ್ದು, ಜಿಲ್ಲಾ ಕೇಂದ್ರ ರೂಪಿಸಬೇಕು ಎಂಬ ಆಗ್ರಹ ಮತ್ತಷ್ಟು ಕೇಳಿ ಬರುತ್ತಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲೂ ಪ್ರಸಿದ್ಧ
ಬ್ರಿಟಿಷ್‌ ಕಾಲದ ಸೌತ್‌ ಕೆನರಾ ಜಿಲ್ಲೆಯಲ್ಲಿ ಪುತ್ತೂರು ತಾಲೂಕು ಕೇಂದ್ರವಾಗಿತ್ತು. ದಾಖಲೆಗಳ ಪ್ರಕಾರ ನೆರೆ ಭೀತಿಯ ಕಾರಣದಿಂದ 1927ರಲ್ಲಿ ಉಪ್ಪಿನಂಗಡಿ ತಾಲೂಕು ಕೇಂದ್ರವನ್ನು ಪುತ್ತೂರಿಗೆ ವರ್ಗಾಯಿಸಲಾಗಿತ್ತು. ಅಂದರೆ ಪುತ್ತೂರು ತಾಲೂಕು ಕೇಂದ್ರವಾಗಿ 93 ವರ್ಷಗಳು ತುಂಬಿವೆ. ದ.ಕ. ಜಿಲ್ಲಾ ಕೇಂದ್ರ ಮಂಗಳೂರಿನಿಂದ 56 ಕಿ.ಮೀ. ದೂರದಲ್ಲಿರುವ ಪುತ್ತೂರು ಸಾಹಿತ್ಯಿಕ, ಸಾಂಸ್ಕೃತಿಕ, ರಾಜಕೀಯ, ಕೃಷಿ, ಶಿಕ್ಷಣ, ಕ್ರೀಡೆ ಇತ್ಯಾದಿ ಕ್ಷೇತ್ರಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದೆ.

ಕೇಂದ್ರ ಸ್ಥಾನ
ಕೇರಳದ ಗಡಿ, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ, ವಿಟ್ಲ ಗಡಿ ಭಾಗಕ್ಕೆ ಅಂಟಿಕೊಂಡಿರುವ ಪುತ್ತೂರು ತಾಲೂಕು ಮಾಣಿ- ಮೈಸೂರು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ. ಪ್ರಗತಿ ಹಾಗೂ ಸಂಪರ್ಕದ ದೃಷ್ಟಿಯಲ್ಲಿ ಮಂಗಳೂರು ಅನಂತರದ ಸ್ಥಾನದಲ್ಲಿರುವ ಪುತ್ತೂರು ಗ್ರಾಮಾಂತರ ಜಿಲ್ಲೆಯಾಗಲು ಎಲ್ಲ ಅರ್ಹತೆ ಹೊಂದಿದೆ. ಹೈಟೆಕ್‌ ಬಸ್‌ ನಿಲ್ದಾಣ, ಕೆಎಸ್‌ಆರ್‌ಟಿಸಿ ವಿಭಾಗೀಯ ಕೇಂದ್ರ, ಮಹಿಳಾ ಠಾಣೆ, ಮಹಿಳಾ ಕಾಲೇಜು, ಮಿನಿ ವಿಧಾನಸೌಧ, ನಗರಸಭೆ, ನ್ಯಾಯಾಲಯ ಕಟ್ಟಡ, ಸರಕಾರಿ ಮೆಡಿಕಲ್‌ ಕಾಲೇಜಿಗೆ 40 ಎಕರೆ ಸ್ಥಳ ಮೀಸಲು, ಪೊಲೀಸ್‌ ತರಬೇತಿ ಕೇಂದ್ರ ಸ್ಥಾಪನೆಗೆ ಪ್ರಯತ್ನ ಇತ್ಯಾದಿ ಜಿಲ್ಲಾ ಕೇಂದ್ರದ ಬೇಡಿಕೆಗೆ ಪೂರಕ ಎಂದೇ ಪರಿಭಾವಿಸಲಾಗಿದೆ.

ರಾಮನಗರಕ್ಕಿಂತ ಹಿರಿದು
ಈ ಹಿಂದೆ ರಚಿಸಲಾದ ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಿಂತ ಅಧಿಕ ವಿಸ್ತೀರ್ಣ, ಜನಸಂಖ್ಯೆಯನ್ನು ಪ್ರಸ್ತಾವಿತ ಪುತ್ತೂರು ಜಿಲ್ಲಾ ವ್ಯಾಪ್ತಿ ಹೊಂದಿದೆ ಎನ್ನುವುದು ಜಿಲ್ಲಾ ಕೇಂದ್ರದ ಬೇಡಿಕೆಗೆ ಇರುವ ಮುಖ್ಯ ಸಂಗತಿ. ರಾಮನಗರ ಜಿಲ್ಲೆಯ ಒಟ್ಟು ವಿಸ್ತೀರ್ಣ 3,575.58 ಚದರ ಕಿ.ಮೀ., ಜನಸಂಖ್ಯೆ 10.5 ಲಕ್ಷ ಇದೆ. ಚಿಕ್ಕಬಳ್ಳಾಪುರ ಜಿಲ್ಲೆ 10 ಲಕ್ಷ ಜನಸಂಖ್ಯೆ ಮತ್ತು 4,100 ಚದರ ಕಿ.ಮೀಟರ್‌ ವಿಸ್ತೀರ್ಣ ಹೊಂದಿದೆ. 2011ರ ಜನಗಣತಿ ಪ್ರಕಾರ ಪುತ್ತೂರು ಜಿಲ್ಲಾ ವ್ಯಾಪ್ತಿಗೆ ಸೇರಬಹುದಾದ ಐದು ತಾಲೂಕುಗಳ ಒಟ್ಟು ಜನಸಂಖ್ಯೆ 10.15 ಲಕ್ಷ ಇದೆ. ಈ ಅಂಕಿ-ಅಂಶವನ್ನು ಪರಿಗಣಿಸಿದರೆ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಸ್ತೀರ್ಣ ಮತ್ತು ಜನಸಂಖ್ಯೆಗಿಂತ ಪ್ರಸ್ತಾವಿತ ಪುತ್ತೂರು ಜಿಲ್ಲೆ ದೊಡ್ಡದಿದೆ. ಪುತ್ತೂರು ತಾಲೂಕನ್ನು ಆವರಿಸಿರುವ ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳವನ್ನು ಸೇರಿಸಿ ಪುತ್ತೂರನ್ನು ಜಿಲ್ಲಾ ಕೇಂದ್ರವನ್ನಾಗಿ ರೂಪಿಸಬಹುದು.

ಎಸ್‌ಪಿ ಕಚೇರಿ ಸ್ಥಳಾಂತರ ಚುರುಕು
ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಗೆ ಒಳಪಟ್ಟ ಎಸ್‌ಪಿ ಕಚೇರಿ ಯನ್ನು ಪುತ್ತೂರಿಗೆ ಸ್ಥಳಾಂತ ರಿಸಬೇಕೆಂಬ ಕೂಗು ಕೇಳಿ ಬಂದಿತ್ತು. ವಿ.ಎಸ್‌.ಆಚಾರ್ಯ ಗೃಹ ಸಚಿವರಾಗಿದ್ದ ಅವಧಿಯಲ್ಲಿ ಈ ಬಗ್ಗೆ ಪ್ರಯತ್ನ ನಡೆದಿತ್ತು. ಕಮಿಷ ನರೇಟ್‌ ವ್ಯಾಪ್ತಿ ಇರುವುದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಕಡಬ, ಸುಳ್ಯದಲ್ಲಿ. ಹಾಗಾಗಿ ಪುತ್ತೂರಿಗೆ ವರ್ಗಾಯಿ ಸಬೇಕು ಎನ್ನುವ ಬೇಡಿಕೆ ಇದ್ದು, ಶಾಸಕ ಸಂಜೀವ ಮಠಂದೂರು ಅವರ ಪ್ರಯತ್ನಕ್ಕೆ ಪೂರಕ ಸ್ಪಂದನೆ ವ್ಯಕ್ತವಾಗಿದೆ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.