ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗೆ ಕತ್ತಿಯಿಂದ ಹಲ್ಲೆಗೈದು ಕೊಲೆಗೆ ಯತ್ನ; ಗಂಭೀರ ಗಾಯ
Team Udayavani, Jul 12, 2022, 5:40 PM IST
ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ವ್ಯಕ್ತಿಯೊಬ್ಬನಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕದ ಪುಣಚ ಸಹಕಾರಿ ಸಂಘದ ಅಡ್ಯನಡ್ಕ ಶಾಖೆ ಮುಂಭಾಗ ಮಂಗಳವಾರ ನಡೆದಿದೆ.
ಘಟನೆಯಿಂದ ಗಂಭೀರ ಗಾಯಗೊಂಡವರನ್ನು ಕೊಲ್ಲಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.
ಸದ್ಯ ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ. ಹಲ್ಲೆ ನಡೆಸಿದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಉಡುಪಿ ಸಂತೆಕಟ್ಟೆ ಬಳಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ