ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Team Udayavani, Jan 6, 2023, 10:35 AM IST
ವಿಟ್ಲ: ಕೇಪು ಗ್ರಾಮದ ಸಾರಡ್ಕದ ಕೃಷಿತೋಟದಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದಾಗ ಹಲಸಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ.
ಬೆಳ್ತಗಂಡಿ ಮಚ್ಚಿನ ಭುಜಂಗಬೆಟ್ಟು ನಿವಾಸಿ ಕೇಶವ ನಾಯ್ಕ (56) ಮೃತಪಟ್ಟವರು.
ಕೇಪು ಗ್ರಾಮದ ಸಾರಡ್ಕದಲ್ಲಿ ಕೃಷಿಕರೊಬ್ಬರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕೇಶವ, ಹಲಸಿನ ಮರ ಏರಿ ಕಾಳು ಮೆಣಸು ಕೊಯ್ಯುವ ವೇಳೆ ಆಕಸ್ಮಿಕವಾಗಿ ಜಾರಿ ಕೆಳಗೆ ನೆಲಕ್ಕೆ ಬಿದ್ದಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಿದಾಗ ವೈದ್ಯರು ಮೃತರಾಗಿರುವ ಬಗ್ಗೆ ದೃಢೀಕರಿಸಿದ್ದಾರೆ.
ಈ ಬಗ್ಗೆ ಸಹೋದರ ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು