ವಿಟ್ಲ ಪ.ಪಂಚಾಯತ್ ಇನ್ನು ಖಾಲಿ ಖಾಲಿ : ಮುಖ್ಯಾಧಿಕಾರಿ ಕೋಟೆಕಾರಿಗೆ ವರ್ಗಾವಣೆ
Team Udayavani, Feb 24, 2022, 10:16 PM IST
ವಿಟ್ಲ: ಸರಕಾರದ ಆದೇಶದಂತೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾಲಿನಿ ಅವರನ್ನು ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ವರ್ಗಾವಣೆ ಮಾಡಲಾಗಿದೆ. ಮಾಲಿನಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೆಚ್ಚುವರಿ ಪ್ರಭಾರ ಜವಾಬ್ದಾರಿ ಇರುತ್ತದೆ.
ವಿಟ್ಲ ಖಾಲಿ ಖಾಲಿ :
ವಿಟ್ಲ ಪ.ಪಂ.ಮುಖ್ಯಾಧಿಕಾರಿ ಹುದ್ದೆಯೊಂದು ಬಿಟ್ಟರೆ ಉಳಿದೆಲ್ಲವೂ ಖಾಲಿಯೇ ಆಗಿತ್ತು. ಕಳೆದ ಆರೇಳು ವರ್ಷಗಳಿಂದ ವಿಟ್ಲ ಪ.ಪಂ.ಸ್ಥಿತಿ ಶೋಚನೀಯವೇ ಆಗಿತ್ತು. ಈಗ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ.
ಕಂದಾಯ ಅಧಿಕಾರಿ, ಎಂಜಿನಿಯರ್, ಆರೋಗ್ಯಾಧಿಕಾರಿ ಹುದ್ದೆಗಳು ಖಾಲಿಯಾಗಿವೆ. ಆರಂಭದಿಂದಲೇ ಆರೋಗ್ಯಾಧಿಕಾರಿ ಹುದ್ದೆ ಖಾಲಿಯಾಗಿಯೇ ಇತ್ತು. ಮುಖ್ಯಾಧಿಕಾರಿ ಹುದ್ದೆ ಮಾತ್ರ ನಿನ್ನೆವರೆಗೆ ಭರ್ತಿಯಾಗಿತ್ತು. ಇಂದಿನಿಂದ ಅದೂ ಪ್ರಭಾರ ಜವಾಬ್ದಾರಿಯಲ್ಲಿ ನಡೆಯುವಂತಾಗಿದೆ.
ಚುನಾವಣೆ ನಡೆದು ಎರಡು ತಿಂಗಳು ಕಳೆದರೂ ಜನಪ್ರತಿನಿಧಿಗಳಿಗೆ ಅಧಿಕಾರ ಪಡೆಯಲಾಗಲಿಲ್ಲ. ಅಧಿಕಾರಿಗಳಿಗೆ ಆಡಳಿತ ಯಂತ್ರ ಕಾರ್ಯಾಚರಿಸದೇ ಇರುವುದು ಹಲವು ತೊಡಕುಗಳಿಗೆ ಕಾರಣವಾಗಿದೆ. ನಾಗರಿಕರು ತಮ್ಮ ಆವಶ್ಯಕತೆಗಳನ್ನು ಪೂರೈಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಈ ನಡುವೆ ಸಿಬಂದಿಗಳ ಕಡಿತ ಭಾರೀ ಹೊಡೆತವನ್ನು ನೀಡಲಿದೆ. ಈ ತನಕ ಪ್ರತೀದಿನ ಮುಖ್ಯಾಧಿಕಾರಿ ಹಾಜರಾಗಿ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಇನ್ನೂ ಅದೂ ಇಲ್ಲ ಎಂದು ನಾಗರಿಕರು ಆಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ