ವಿಟ್ಲ: ಮಾದಕ ವಸ್ತು ಸೇವನೆ; ಇಬ್ಬರ ಬಂಧನ
Team Udayavani, Jan 7, 2023, 9:23 PM IST
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನ ನಿವಾಸಿ ಕಬೀರ್ (30) ಬಂಧಿತಆರೋಪಿಗಳು.
ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಶನಿವಾರ ಬೆಳಗ್ಗೆ ಕೊಳ್ನಾಡು ಗ್ರಾಮದ ಬೊಳ್ಪಾದೆ ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭ ಅಮಲಿನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು.
ತತ್ ಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಕಳುಹಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳರಾಗಿದೆ.
ಸಿಬಂದಿ ಹೇಮರಾಜ್ ಹಾಗೂ ಇಲಾಖಾ ಜೀಪ್ ಚಾಲಕ ಅಶೋಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್