ಅಧಿಕಾರಿಗಳ ಗೈರು: ಹೊರನಡೆದ ಬಿಜೆಪಿ ಸದಸ್ಯರು


Team Udayavani, Feb 28, 2019, 6:33 AM IST

28-february-6.jpg

ವಿಟ್ಲ: ವಿಟ್ಲ ಪ.ಪಂ. ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳು ಗೈರು ಹಾಜರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ಸದಸ್ಯರು ಸಭೆಯನ್ನು ಬಹಿಷ್ಕರಿಸಿದರು ಮತ್ತು ಸಾಮಾನ್ಯ ಸಭೆ ಮುಂದೂಡಿದ ಘಟನೆ ಸಂಭವಿಸಿತು.

ಬುಧವಾರ ಬೆಳಗ್ಗೆ 11ಕ್ಕೆ ವಿಟ್ಲ ಪ.ಪಂ.ನ ಫೆಬ್ರವರಿ ತಿಂಗಳ ಸಾಮಾನ್ಯ ಸಭೆಯನ್ನು ಅಧ್ಯಕ್ಷೆ ದಮಯಂತಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಈ ಸಭೆಗೆ ಪಂ. ಮುಖ್ಯಾಧಿಕಾರಿ ಮಾಲಿನಿ ಅವರನ್ನು ಹೊರತುಪಡಿಸಿ ಕಂದಾಯ ನಿರೀಕ್ಷಕರು, ಎಂಜಿನಿಯರ್‌ ಹಾಜರಾಗಿರಲಿಲ್ಲ. ಸಭೆ ಆರಂಭಗೊಳ್ಳುತ್ತಿದ್ದಂತೆ ಮಾಜಿ ಅಧ್ಯಕ್ಷ ಅರುಣ್‌ ಎಂ. ವಿಟ್ಲ, ಸದಸ್ಯ ಶ್ರೀಕೃಷ್ಣ, ರವಿಪ್ರಕಾಶ್‌ ಅವರು ಅಧಿಕಾರಿಗಳು ಹಾಜರಾಗದಿರಲು ಕಾರಣವೇನು ಪ್ರಶ್ನಿಸಿದರು. ದೂರವಾಣಿ ಕರೆ ಮಾಡಿ ಸಾಮಾನ್ಯ ಸಭೆಗೆ ಆಗಮಿಸಬೇಕೆಂದು ಹೇಳಲಾಗಿತ್ತು. ಚುನಾವಣೆ ಹಿನ್ನೆಲೆಯಲ್ಲಿ
ಜಿಲ್ಲಾಧಿಕಾರಿ ಕಚೇರಿಗೆ ತೆರಳಿರುವುದರಿಂದ ಅವರು ಆಗಮಿಸಿಲ್ಲ ಎಂದು ಅಧ್ಯಕ್ಷರು ತಿಳಿಸಿದರು.

ಬಿಜೆಪಿ ಸದಸ್ಯರ ಅಸಮಾಧಾನ
ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಅಧಿಕಾರಿಗಳು ಇಲ್ಲದಿದ್ದರೆ ಸಭೆ ನಡೆಸುವುದು ಹೇಗೆ? ಸಮಸ್ಯೆ ಯಾರಲ್ಲಿ ಹೇಳುವುದು? ಅವರು ಬಂದ ಬಳಿಕವೇ ಸಭೆ ನಡೆಸಬೇಕು ಎಂದು ಆಗ್ರಹಿಸಿದರು. ಕಳೆದ ಅವಧಿಯಲ್ಲಿ ಎಂಜಿನಿಯರ್‌, ಕಂದಾಯ ಅಧಿಕಾರಿಗಳು ಇಲ್ಲದೆ ಒಂದೂ ಸಭೆ ಕರೆದಿರಲಿಲ್ಲ. ಇದೀಗ ಅವರು ಗೈರು ಹಾಜರಿದ್ದರೂ ಸಭೆ ಕರೆಯಲಾಗಿದೆ. ಅಧಿಕಾರಿಗಳು ಕಚೇರಿಯಲ್ಲಿ ಸಿಗುತ್ತಿಲ್ಲ. ಸಭೆಯಲ್ಲಿ ಆದರೂ ಸಿಗಲಿ ಎಂಬುದು ನಮ್ಮ ಬೇಡಿಕೆ ಆಗಿದೆ. ಎಂಜಿನಿಯರ್‌ಗೆ ಸದಸ್ಯರು ಕರೆ ಮಾಡಿದರೂ ಅವರು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಅರ್ಧ ಗಂಟೆ ವರೆಗೆ ನಾವು ಕಾಯುತ್ತೇವೆ ಅದರೊಳಗಡೆ ಅಧಿಕಾರಿಗಳು ಬಾರದಿದ್ದಲ್ಲಿ ಸಭೆ ಮುಂದೂಡಬೇಕು ಎಂದು ಹೇಳಿ ಬಿಜೆಪಿ ಸದಸ್ಯರು ಹೊರನಡೆದರು.

ಮಾ. 1ರಂದು ಸಭೆ 
ಸಭೆ ನಡೆಸಲು ಕೋರಂ ಸಮಸ್ಯೆ ಎದುರಾಗಿ, ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಅಧಿಕಾರಿಗಳಿಗೆ ಕರೆ ಮಾಡಿ ಮಾತುಕತೆ ನಡೆಸಿದರು. ಚುನಾವಣೆ ಕರ್ತವ್ಯದಲ್ಲಿದ್ದೇವೆ ಎಂದು ಅವರು ಹೇಳಿದ ಬಳಿಕ ಸಭೆಯನ್ನು ರದ್ದುಗೊಳಿಸಿದರು.  ಮಾ.1ರಂದು ಅಪರಾಹ್ನ 3 ಗಂಟೆಗೆ ಸಭೆ ನಡೆಸಲು ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.