ಬಿಜೆಪಿಯ ಕಮಲ ಚಿಹ್ನೆಯ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿ:ಪುತ್ತೂರಿನಲ್ಲಿ ಯೋಗಿ ಕರೆ


Team Udayavani, May 7, 2023, 6:08 PM IST

1-a-ssad

ಪುತ್ತೂರು : ಬಿಜೆಪಿಯು ತನ್ನ ಸಾಮಾನ್ಯ ಕಾರ್ಯಕರ್ತನ ರೂಪದಲ್ಲಿ ಆಶಾ ತಿಮ್ಮಪ್ಪ ಗೌಡ ಅವರನ್ನು ಪುತ್ತೂರು ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ಹಾಗಾಗಿ ಮತದಾರ ಯಾವುದೇ ಗೊಂದಲಕ್ಕೆ ಒಳಗಾಗದೆ ಅವರನ್ನು ಭಾರೀ ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದರು.
ಪುತ್ತೂರಿನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಅದ್ದೂರಿ ರೋಡ್‌ಶೋ ನಡೆಸಿ, ಕಿಲ್ಲೆ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಕ್ಷದ ಕಮಲ ಚಿಹ್ನೆಯಡಿ ಸ್ಪರ್ಧಿಸುವವರೇ ನಮ್ಮ ಅಧಿಕೃತ ಅಭ್ಯರ್ಥಿ. ಅವರ ಗೆಲುವೇ ಪಕ್ಷದ, ಹಿಂದುತ್ವದ ಗೆಲುವು ಎಂದ ಯೋಗಿ, ಪಕ್ಷ, ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತೆ ಆಶಾ ತಿಮ್ಮಪ್ಪ ಅವರನ್ನು ಗೆಲ್ಲಿಸುವಂತೆ ಮತದಾರರ ಬಳಿ ವಿನಂತಿಸಿದರು.

ತುಳುನಾಡಿಗೆ ನಮನ
ಪುತ್ತೂರಿನ ಮುತ್ತಿನಂತಹ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಯೋಗಿ ಆದಿತ್ಯನಾಥ್‌ ಪರಶುರಾಮ ಸೃಷ್ಟಿಯ ತುಳುನಾಡಿಗೆ ಮೊದಲಾಗಿ ವಂದನೆ ಸಲ್ಲಿಸುತ್ತೇನೆ. ಅಯೋಧ್ಯೆಯ ಪುಣ್ಯದ ಭೂಮಿಯಿಂದ ಕರ್ನಾಟಕಕ್ಕೆ ಬಂದಿದ್ದೇನೆ. ಉತ್ತರಪ್ರದೇಶದಲ್ಲಿರುವ ಅಯೋಧ್ಯೆಗೂ ಕರ್ನಾಟಕಕ್ಕೂ ಬಹಳ ಪ್ರಾಚೀನ ಕಾಲದಿಂದಲೂ ನಿಕಟ ಸಂಬಂಧವಿದೆ ಎಂದು ಸ್ಮರಿಸಿದರು.

ಬಜರಂಗಿ ಸ್ಮರಣೆ ಕಾಂಗ್ರೆಸ್‌ಗೆ ಟಾಂಗ್‌
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ನಿರ್ಮಾಣ ಆಗುತ್ತಿದೆ. ಶ್ರೀರಾಮ ಭಕ್ತ ಹನುಮಂತನ ಹುಟ್ಟೂರು ಕರ್ನಾಟಕವೇ ಆಗಿದ್ದು ಹನುಮನ ಮೂಲ ನೆಲೆಯ ಪುನರುತ್ಥಾನದ ಕಾರ್ಯ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಕಾಂಗ್ರೆಸ್‌ ಪಕ್ಷವು ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿದೆ. ಭಜರಂಗದಳ ಸಂಘಟನೆಯನ್ನೇ ನಿಷೇಧಿಸುತ್ತೇವೆ ಎಂದು ಹೇಳುತ್ತಿದೆ. ತನ್ಮೂಲಕ ಆ ಪಕ್ಷವು ರಾಷ್ಟ್ರದ್ರೋಹಿಗಳಿಗೆ ಬೆಂಬಲ ಸೂಚಿಸುತ್ತಿದ್ದು ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಡಬಲ್‌ ಎಂಜಿನ್‌ ಸರಕಾರದಿಂದ ಅಭಿವೃದ್ಧಿ
ಪ್ರಧಾನಿ ಮೋದಿಯ ಆಡಳಿತದಲ್ಲಿ ದೇಶ ಸುಭಿಕ್ಷ, ಸುರಕ್ಷಿತವಾಗಿದೆ. ವಿಶ್ವದಲ್ಲಿಯು ಗುರುತಿಸಲ್ಪಟ್ಟಿದೆ. ಡಬಲ್‌ ಎಂಜಿನ್‌ ಸರಕಾರ ಇಂದಿನ ಅವಶ್ಯಕ. ಆದ್ದರಿಂದ ಈ ಬಾರಿಯ ಚುನಾವಣೆಯೂ ಕರ್ನಾಟಕ ವಿಕಾಸಕ್ಕಾಗಿ, ರಾಷ್ಟ್ರ ನಿರ್ಮಾಣಕ್ಕಾಗಿ ನಡೆಯುತ್ತಿದೆ. ಹಾಗಾಗಿ ಪುತ್ತೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಘೋಷಿಸಿರುವ ಕಾಂಗ್ರೆಸ್‌, ಅವಸಾನದತ್ತ ಸಾಗಲಿದೆ. ಬಿಜೆಪಿ ವಿಜಯದತ್ತ ಸಾಗುತ್ತಿದ್ದು, ಪುತ್ತೂರಿನ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗೆಲ್ಲಲಿದ್ದಾರೆ. ಭಯೋತ್ಪಾದಕರ ಹುಟ್ಟಡಗಿಸಿದ ಯೋಗಿ ಆದಿತ್ಯನಾಥ್‌ ಅವರು ಪುತ್ತೂರಿಗರ ಆಶೀರ್ವಾದ ಪಡೆಯಲು ನಿಮ್ಮ ಮುಂದೆ ಬಂದಿದ್ದು ಕ್ಷೇತ್ರದಲ್ಲಿ ಅಪೂರ್ವ ಸ್ವಾಗತ ನೀಡಿದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮತಯಾಚಿಸಿದರು. ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು. ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್‌ ರಾವ್‌ ವಂದಿಸಿದರು.

ರಸ್ತೆ ಇಕ್ಕೆಲಗಳಲ್ಲಿ ಕಿಕ್ಕಿರಿದ ಕಾರ್ಯಕರ್ತರು
ಪುತ್ತೂರು ನಗರದಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಂಡ ಯೋಗಿ ಆದಿತ್ಯನಾಥ್‌ ಅವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಚೆಂಡೆವಾದನ, ಗೊಂಬೆ ಕುಣಿತದೊಂದಿಗೆ ಹೂ ಅರ್ಪಿಸುತ್ತಾ ದಾರಿಯುದ್ದಕ್ಕೂ ಮೆರವಣಿಗೆ ಸಾಗಿತ್ತು. ರಸ್ತೆ ಇಕ್ಕೆಲಗಳಲ್ಲಿ, ಕಟ್ಟಡಗಳಲ್ಲಿ ನೆರೆದಿದ್ದ ಸಾವಿರಾರು ಮಂದಿ ಕಾರ್ಯಕರ್ತರು ಯೋಗಿ ಅವರನ್ನು ಕಣ್ತುಂಬಿಕೊಂಡರು. ಈ ವೇಳೆ ಯೋಗಿ ಅವರು ಕೈ ಮುಗಿದು ಮತ ಯಾಚನೆ ಮಾಡಿದರು. ಶನಿವಾರದ ಯೋಗಿ ಆದಿತ್ಯನಾಥ್‌ ಅವರ ಭೇಟಿ ಬಿಜೆಪಿ ಕಾರ್ಯಕರ್ತರಲ್ಲಿ ನವೋಲ್ಲಾಸ ಮೂಡಿಸುವಲ್ಲಿ ಯಶ ಕಂಡಿತು.

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.