ಫಲಿತಾಂಶ ನಿರೀಕ್ಷೆಯಲ್ಲಿ ಮತದಾರರು- ಅಭ್ಯರ್ಥಿಗಳು


Team Udayavani, Sep 2, 2018, 11:57 AM IST

2-september-10.jpg

ಬಂಟ್ವಾಳ : ಪುರಸಭೆ ಚುನಾವಣೆ ಫಲಿತಾಂಶ ಯಾರ ಪರ ಬರಬಹುದು ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ-ಕಾಂಗ್ರೆಸ್‌ ತಮಗೆ ಬಹುಮತ ಬರುವುದಾಗಿ ಅಭಿಪ್ರಾಯ ನೀಡಿದ್ದು, ಆ ಬಗ್ಗೆ ಪೂರ್ಣ ವಿಶ್ವಾಸ ಹೊಂದಿಲ್ಲ. ಬಹುಮತ ಬಾರದಿದ್ದರೆ ವಿಪಕ್ಷವಾಗಿ ಕೂರುತ್ತೇವೆ ಹೊರತು ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂಬ ಸ್ಪಷ್ಟವಾಗಿ ತಿಳಿಸಿದ್ದರೂ ಈ ಹೇಳಿಕೆಗೆ ಎಷ್ಟು ಬದ್ಧವಾಗುತ್ತಾರೆ ಎನ್ನುವುದು ಸೆ. 3ರ ಅನಂತರದ ತಿಳಿಯಲಿದೆ. ಆಡಳಿತಕ್ಕೆ ನಾವೇ ಬರುವುದಾಗಿ ಹೇಳಿಕೊಂಡಿರುವ ಎಸ್‌ಡಿಪಿಐ ಯಾವ ರೀತಿ ಬಹುಮತ ಪಡೆಯಬಹುದು ಎಂಬುದು ಕುತೂಹಲ ಸೃಷ್ಟಿಸಿದೆ. ಬಂಟ್ವಾಳ ಪುರಸಭೆಯಲ್ಲಿ ನಾಲ್ಕು ಪಕ್ಷಗಳ ಉಮೇದ್ವಾರರು, ಒಬ್ಬರು ಪಕ್ಷೇತರ ಸಹಿತ ಒಟ್ಟು 71 ಮಂದಿ ಕಣದಲ್ಲಿದ್ದರು.

ಶೇ. 72.36 ಮತದಾನ
ಪುರಸಭೆಯ ಒಟ್ಟು 34,102 ಮತದಾರರಲ್ಲಿ 24,676 ಮಂದಿ ಮತ ಚಲಾಯಿಸಿದ್ದು, ಒಟ್ಟು ಶೇ. 72. 36 ಮತದಾನ ಆಗಿದೆ. ಇದರಲ್ಲಿ 11,840 ಮಂದಿ ಪುರುಷರು, 12,836 ಮಂದಿ ಮಹಿಳೆಯರು ಮತದಾನ ಮಾಡಿದ್ದಾರೆ.

ಶೇ. 27.64 ಮತದಾನ ವಂಚಿತರು
ಮತದಾನದಲ್ಲಿ 5,007 ಪುರುಷರು, 4,419 ಮಹಿಳೆಯರು ಸಹಿತ ಒಟ್ಟು 9,426 ಮಂದಿ ಭಾಗವಹಿಸಿಲ್ಲ. ಇವರಲ್ಲಿ ಬಹುತೇಕ ಮಂದಿ ವಿದೇಶದಲ್ಲಿ ಇದ್ದವರು. ಕೆಲವರು ಕರ್ತವ್ಯದ ನಿಮಿತ್ತ ಹೊರ ಜಿಲ್ಲೆ, ರಾಜ್ಯಗಳಲ್ಲಿ ನೆಲೆಸಿದವರಾಗಿದ್ದಾರೆ.  ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ನೇತೃತ್ವದಲ್ಲಿ ಬಿ.ಸಿ. ರೋಡ್‌ ಮಿನಿ ವಿಧಾನಸೌಧದಲ್ಲಿ ಡಿಮಸ್ಟರಿಂಗ್‌ ಬಳಿಕ ಎಲ್ಲ ಇವಿಎಂ ಯಂತ್ರಗಳನ್ನು ಸುರಕ್ಷಿತವಾಗಿಡಲಾಗಿದೆ. ಸೆ. 3ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ನಡೆಯಲಿದ್ದು, 10ರ ಸುಮಾರಿಗೆ ಎಲ್ಲ ಫಲಿತಾಂಶ ಪ್ರಕಟವಾಗಲಿದೆ ಎಂದು ತಹಶೀಲ್ದಾರ್‌ ಅಭಿಪ್ರಾಯಪಟ್ಟಿದ್ದಾರೆ.

ಬಹುಮತಕ್ಕೆ 14 ಸ್ಥಾನ 
ಒಟ್ಟು 27 ಸ್ಥಾನಗಳಲ್ಲಿ ಯಾವುದೇ ಪಕ್ಷ ಬಹುಮತ ಸಾಬೀತು ಮಾಡಲು ಕನಿಷ್ಠ 14 ಸ್ಥಾನ ಬಲವನ್ನು ಹೊಂದಿರಬೇಕು. ಎಸ್‌ಡಿಪಿಐ ಸ್ಪರ್ಧಿಸಿರುವುದು ಕೇವಲ 12 ಸ್ಥಾನಗಳಿಗೆ. ಕಾಂಗ್ರೆಸ್‌ 25 ಸ್ಥಾನದಲ್ಲಿ ಸ್ಪರ್ಧಿಸಿದೆ. ಒಂದೊಂದು ಸ್ಥಾನದಲ್ಲಿ ಸಿಪಿಐ ಮತ್ತು ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲಿಸಿದೆ. ಬಿಜೆಪಿ ಎಲ್ಲ 27 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆದಾಗ ಒಬ್ಬರು ಶಾಸಕ ಮತ್ತು ಸಂಸದರ ಮತವು ಬಿಜೆಪಿಗೆ ಸಿಗಲಿದೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.