ಪಕ್ಷಗಳು, ಅಧಿಕಾರಿಗಳಿಗೆ ತಲೆನೋವಾದ ಮತದಾನ ಬಹಿಷ್ಕಾರ!


Team Udayavani, May 8, 2023, 7:10 AM IST

ಪಕ್ಷಗಳು, ಅಧಿಕಾರಿಗಳಿಗೆ ತಲೆನೋವಾದ ಮತದಾನ ಬಹಿಷ್ಕಾರ!

ಸುಳ್ಯ: ಅಭಿವೃದ್ಧಿ ವಿಷಯ ಸಂಬಂಧವಾಗಿ ಗ್ರಾಮಸ್ಥರು ರಾಜಕೀಯ ನಾಯಕರ ಮುಂದೆ ನಾನಾ ತೆರನಾದ ಬೇಡಿಕೆಗಳನ್ನಿಡುವುದು ಸಾಮಾನ್ಯ. ಆ ಬೇಡಿಕೆಗಳು ಈಡೇರದೇ ಇದ್ದಲ್ಲಿ ಆಕ್ರೋಶ, ಅಸಮಾಧಾನ ತೋರ್ಪಡಿಸುತ್ತಾರೆ. ಕೆಲವರು ಚುನಾವಣೆ ಸಂದರ್ಭದಲ್ಲೇ ಮತದಾನ ಬಹಿ ಷ್ಕಾರದ ನಿರ್ಧಾರ ಕೈಗೊಳ್ಳುತ್ತಾರೆ. ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರದರ್ಶಿ ಸಲು ಗ್ರಾಮದಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್‌ಗಳು ಹಲವು ಗ್ರಾಮಗಳಲ್ಲಿ ಕಂಡುಬಂದಿವೆ. ವಿಧಾನಸಭೆ ಚುನಾವಣೆಗೆ ವರ್ಷ ಬಾಕಿ ಇರುವಾಗಲೇ ಕ್ಷೇತ್ರದ ಅಲ್ಲಲ್ಲಿ ರಸ್ತೆ, ಸೇತುವೆ, ಕುಡಿಯುವ ನೀರು, ಹಕ್ಕುಪತ್ರ ಮತ್ತಿತರ ಸಮಸ್ಯೆಗಳನ್ನು ಮುಂದಿಟ್ಟು ಮತದಾನ ಬಹಿಷ್ಕಾರ ನಿರ್ಧಾರದ ಬ್ಯಾನರ್‌ ಅಳವಡಿಸಲಾಗಿತ್ತು. ಇಂದಿನವರೆಗೂ ಅದು ಮುಂದುವರಿದಿದೆ.

ನಾಯಕರು, ಅಧಿಕಾರಿಗಳಿಗೆ ತಲೆನೋವು
ಆರಂಭದಲ್ಲಿ ಈ ಬಗ್ಗೆ ಹೆಚ್ಚು ತಲೆಕೆಡಿಸಿ ಕೊಳ್ಳದ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಚುನಾವಣೆ ಘೋಷಣೆಯಾ ಗುತ್ತಿದ್ದಂತೆಯೇ ಎಚ್ಚೆತ್ತು ಈ ಗ್ರಾಮಗಳತ್ತ ದೃಷ್ಟಿ ಹರಿಸಿದ್ದಾರೆ. ಇನ್ನು ಬಹಿಷ್ಕಾರದ ಬ್ಯಾನರ್‌ಗಳು ಮತ್ತಷ್ಟು ಗ್ರಾಮಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿದ ಬಳಿಕವಂತೂ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಇದರ ಬಿಸಿ ತಟ್ಟತೊಡಗಿತು. ಆ ಬಳಿಕ ಇಂತಹ ಗ್ರಾಮಗಳಿಗೆ ತೆರಳಿ, ಅಲ್ಲಿನ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಡುವ ಮತ್ತು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡತೊಡಗಿದ್ದಾರೆ. ಕೆಲವು ಗ್ರಾಮಸ್ಥರು ಈ ಭರವಸೆಗಳಿಂದ ತೃಪ್ತರಾಗಿ ಬಹಿಷ್ಕಾರ ನಿರ್ಧಾರವನ್ನು ವಾಪಸ್‌ ಪಡೆದುಕೊಂಡರೆ ಮತ್ತೆ ಕೆಲವು ಗ್ರಾಮಗಳ ಸ್ಥಳೀಯರು ಯಾವುದಕ್ಕೂ ಮಣಿಯದೇ “ಕೆಲಸ ಆದರೆ ಬ್ಯಾನರ್‌ ತೆಗೆಯುತ್ತೇವೆ’ ಎಂದು ಪಟ್ಟು ಹಿಡಿಯುತ್ತಾರೆ. ಈ ಚುನಾವಣೆಯಲ್ಲೂ ಇಂಥ ಪ್ರಸಂಗಗಳು ನಡೆದಿವೆ. ಇದೀಗ ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ.

ಇನ್ನು ಕೆಲವೆಡೆ ಗ್ರಾಮಸ್ಥರು ಅಧಿಕಾರಿಗಳು ಮತ್ತು ರಾಜಕೀಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ಘಟನೆಗಳೂ ನಡೆದಿವೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮತದಾನ ಬಹಿಷ್ಕಾರ ಕೂಗಿನಿಂದಲೇ ಒಂದು ಹಂತದಲ್ಲಿ ಪ್ರಚಾರ ಪಡೆದಿದೆ ಎನ್ನಬಹುದು.

ಮತದಾನಕ್ಕೆ 2 ದಿನ ಮಾತ್ರವೇ ಉಳಿದಿದ್ದು ಸುಳ್ಯದ ಹಲವೆಡೆ ಬಹಿಷ್ಕಾರದ ಕೂಗು ಕೇಳಿ ಬರುತ್ತಿದೆ.ಆಡಳಿತ ನಡೆಸುವವರ ನಿರ್ಲಕ್ಷ್ಯವೇ ಇಂಥ ಘಟನೆಗಳು ನಡೆಯಲು ಕಾರಣ ಎಂಬುದು ಕ್ಷೇತ್ರದಾರರ ಅಂಬೋಣ.

ಎಲ್ಲರೂ ಮತ ಚಲಾಯಿಸುವಂತೆ ಅಧಿಕಾರಿಗಳು, ರಾಜಕೀಯ ಪಕ್ಷಗಳು ಪ್ರಯತ್ನ ಪಡುತ್ತಿರುವುದು ಉತ್ತಮ ಕೆಲಸವೇ. ಆದರೆ ಚುನಾವಣೆ ಬಳಿಕ, ಅಧಿಕಾರ ಸಿಕ್ಕ ಮೇಲೂ ಜನರ ಸಮಸ್ಯೆ ನಿವಾರಣೆ, ಅಭಿವೃದ್ಧಿ ವಿಚಾರದಲ್ಲೂ ಇದೇ ಪ್ರಯತ್ನ ಇರಲಿ ಎಂಬ ಮಾತು ನಾಗರಿಕರದ್ದು.

 - ದಯಾನಂದ ಕಲ್ನಾರ್

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.