ನಾಡಕಚೇರಿಗೆ ಕೂಡಿಬಾರದ ಕಟ್ಟಡ ಭಾಗ್ಯ!

Waiting for the building to stay in the room!

Team Udayavani, May 14, 2019, 5:31 AM IST

34

ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡ ಕಚೇರಿ ಕಟ್ಟಡ ಸ್ಥಳಾಂತರಗೊಂಡರೂ ಸ್ವಂತ ಕಟ್ಟಡ ರಚನೆಗೆ ಇನ್ನೂ ಕಾಲ ಕೂಡಿ ಬಾರದೆ ಪಾಳು ಬಿದ್ದುಕೊಂಡಿದೆ. ಕಂದಾಯ ಇಲಾಖೆಗೆ ಸೇರಿದ ಕಟ್ಟಡ ಹಲವು ವರ್ಷಗಳಿಂದ ಅಪಾಯದಲ್ಲಿದ್ದು, ಕರ್ತವ್ಯ ನಿಭಾಯಿಸಲು ಕಷ್ಟ ಎಂಬುದನ್ನು ಮನಗಂಡ ಜಿಲ್ಲಾಧಿಕಾರಿಗಳು ಬದಲಿ ಸರಕಾರಿ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಆದೇಶಿಸಿದ್ದರು. ಅದರಂತೆ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ನೂತನ ಪಂಚಾಯತ್‌ ಕಟ್ಟಡದಲ್ಲಿ ಸ್ಥಳಾವಕಾಶ ಕೋರಿ ಮನವಿ ಸಲ್ಲಿಸಿದ್ದರು.

ಮನವಿಗೆ ಸ್ಪಂದಿಸಿದ ಪಂಚಾಯತ್‌ ಆಡಳಿತ ಸ್ಥಳಾವಕಾಶಕ್ಕೆ ಸರ್ವ ಸದಸ್ಯರ ಒಪ್ಪಿಗೆಯಂತೆ ಸಮ್ಮತಿ ಸೂಚಿಸಿದ ಮೇರೆಗೆ ನಾಡಕಚೇರಿಗೆ ಅವಕಾಶ ಕೊಟ್ಟಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಇನ್ನೂ ನಾಡಕಚೇರಿ ನೂತನ ಸ್ವಂತ ಕಟ್ಟಡ ರಚನೆ ಯಾವುದೇ ತಯಾರಿ ನಡೆದಿಲ್ಲ.

ಕಟ್ಟಡ ರಚನೆ ಮಂಜೂರಾತಿ ದೊರಕಿದ ಕುರಿತು ಯಾವುದೇ ಮಾಹಿತಿ ಈತನಕ ಇಲ್ಲ. ಅಧಿಕಾರಿಗಳು ಪಂಚಾಯತ್‌ ಕಟ್ಟಡ ಸ್ಥಳಾಂತರಕ್ಕೆ ಮುನ್ನ ಶೀಘ್ರವೇ ಸರಕಾರದ ಬಜೆಟ್‌ನಲ್ಲಿ 10 ಲಕ್ಷ ರೂ. ಕ್ರೋಡೀಕರಿಸಿ ತತ್‌ಕ್ಷಣವೇ ಕಾಮಗಾರಿ ಆರಂಭಿಸಿ ಸುಸಜ್ಜಿತ ಕಟ್ಟಡ ರಚಿಸುವ ಕುರಿತು ಮಾತುಕತೆ ನಡೆದಿತ್ತು.

ಪ್ರಕ್ರಿಯೆ ಆರಂಭಿಸಿಲ್ಲ
ನಾಡಕಚೇರಿ ಸ್ಥಳಾಂತರಗೊಂಡು ಮೂರು ತಿಂಗಳು ಕಳೆದರೂ ಯಾವುದೇ ಪ್ರಕ್ರಿಯೆ ಆರಂಭಿಸಿಲ್ಲ. ಈ ಮಳೆಗಾಲದಲ್ಲಿ ಹಳೆಯ ಕಟ್ಟಡ ಮುರಿದು ಬೀಳುವ ಅಪಾಯವಿದೆ. ಪುತ್ತೂರು ತಾಲೂಕಿನ ಬಜತ್ತೂರು, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಬನ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ ಸಹಿತ 13 ಗ್ರಾಮ ವ್ಯಾಪ್ತಿ ಹೊಂದಿದೆ. ಮಳೆಗಾಲ ಆರಂಭವಾದರೆ ಈ ಕಟ್ಟಡದ ಪಕ್ಕ ನಡೆದಾಡುವುದೂ ಅಪಾಯಕಾರಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ನಾಡಕಚೇರಿ ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರ ಆಗುವ ಮುನ್ನವೇ ಪಂಚಾಯತ್‌ ಅಧ್ಯಕ್ಷ ಅಬ್ದುಲ್ ರಹಿಮಾನ್‌ ಅವರು, ನೂತನ ಕಟ್ಟಡ ರಚನೆಗೆ ಸರಕಾರದಿಂದ ಮಂಜೂರಾತಿ ಪಡೆಯುವುದು ಕಷ್ಟಸಾಧ್ಯವಾದಲ್ಲಿ, ನೆಲ ಅಂತಸ್ತಿನಲ್ಲಿ ಗ್ರಾ.ಪಂ. ವಾಣಿಜ್ಯ ಕಟ್ಟಡ ರಚನೆಗೆ ಅವಕಾಶ ನೀಡುವುದಾದಲ್ಲಿ 2‌ನೇ ಮಹಡಿಯಲ್ಲಿ ನಾಡಕಚೇರಿ ಕಟ್ಟಡ ನಿರ್ಮಿಸಿಕೊಡುವುದಾಗಿ ತಿಳಿಸಿದ್ದರು. ಆದರೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ, ಪಂಚಾಯತ್‌ ಆಡಳಿತ ಸಾರ್ವಜನಿಕ ಸೇವೆಯಡಿ ನಾಡಕಚೇರಿಗೆ ತಾತ್ಕಾಲಿಕ ಅವಕಾಶ ಕಲ್ಪಿಸಿತ್ತು. ತತ್‌ಕ್ಷಣವೇ ಅವರು ಸ್ವಂತ ಕಟ್ಟಡ ರಚನೆಗೆ ಚಾಲನೆ ನೀಡದಿದ್ದಲ್ಲಿ ಪಂಚಾಯತ್‌ ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ಉಪ್ಪಿನಂಗಡಿ ನಾಡ ಕಚೇರಿಯ ನಿವೇಶನದಲ್ಲಿ ಕಟ್ಟಡವು ಅಪಾಯದ ಸ್ಥಿತಿಯಲ್ಲಿದ್ದು, ಈಗಾಗಲೇ ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆದರೆ, ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ರಚನೆಗಾಗಿ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಮಂಜೂರಾತಿ ದೊರಕಿದ ತತ್‌ಕ್ಷಣವೇ ಸ್ವಂತ ಕಟ್ಟಡ ರಚನೆಯಾಗಲಿದೆ.
– ಡಾ| ಪ್ರದೀಪ್‌ ಕುಮಾರ್‌ ಪುತ್ತೂರು ತಾಲೂಕು ದಂಡಾಧಿಕಾರಿ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.