ಮುರದಮೇಲುವಿನಲ್ಲಿ ಇಂದು ಲೋಕಾರ್ಪಣೆ

ಸ್ವಚ್ಛ ಗ್ರಾಮಕ್ಕಾಗಿ ತ್ಯಾಜ್ಯ ಸಂಕೀರ್ಣ ಘಟಕ

Team Udayavani, Oct 23, 2021, 5:59 AM IST

ಮುರದಮೇಲುವಿನಲ್ಲಿ ಇಂದು ಲೋಕಾರ್ಪಣೆ

ವಿಶೇಷ ವರದಿ- ಬೆಳ್ತಂಗಡಿ: ತ್ಯಾಜ್ಯ ನಿರ್ವಹಣೆಗಾಗಿ ಪಂಚಾಯತ್‌ ರಾಜ್‌ ವ್ಯವಸ್ಥೆಯಡಿ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾ.ಪಂ. ವ್ಯಾಪ್ತಿಯ ಮುರದಮೇಲುವಿನಲ್ಲಿ ನಿರ್ಮಾಣಗೊಂಡ 15 ಲಕ್ಷ ರೂ. ವೆಚ್ಚದ ಸ್ವಚ್ಛ ಸಂಕೀರ್ಣಘಟಕ ಲೋಪಾರ್ಪಣೆಗೆ ಸಿದ್ಧಗೊಂಡಿದೆ.

ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆಗೆ ಪ್ರಾಮುಖ್ಯತೆ ನೀಡುವ ಸಲುವಾಗಿ ಜಿ.ಪಂ. ನಿವೇಶನ ಕಾಯ್ದಿರಿಸಲು ಸೂಚಿಸಲಾಗಿದೆ. ಬಹುತೇಕ ಗ್ರಾ.ಪಂ.ಗಳು ನಿವೇಶನ ಗುರುತಿಸಿದ್ದಲ್ಲದೆ ಘಟಕ ಸ್ಥಾಪನೆಗೂ ಮುಂದಾಗಿವೆ. ಬೆಳ್ತಂಗಡಿ ತಾಲೂಕಿನಲ್ಲಿ ಧರ್ಮಸ್ಥಳ, ಉಜಿರೆ, ಲಾೖಲದಲ್ಲಿ ಮಾದರಿ ತ್ಯಾಜ್ಯ ವಿಂಗಡಣೆ ಘಟಕ ಸ್ಥಾಪಿಸಿ ಗ್ರಾಮ ಪಂಚಾಯತ್‌ಗೆ ಆದಾಯ ತರುವ ರೀತಿ ವ್ಯವಸ್ಥೆ ಮಾಡಲಾಗಿದೆ.

ಸ್ವಚ್ಛ ಭಾರತ್‌ ಮಿಷನ್‌(ಗ್ರಾಮೀಣ)ಯೋಜನೆ “ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಎಂಬ ಧ್ಯೇಯದೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ. ಜಿ.ಪಂ., ತಾ.ಪಂ. ಸಹಭಾಗಿತ್ವದಲ್ಲಿ ಮುರದಮೇಲುವಿನಲ್ಲಿ 15 ಲಕ್ಷ ರೂ. ಅನುದಾನದಲ್ಲಿ ಘಟಕ ಸ್ಥಾಪಿಸಲಾಗಿದೆ. ಕಸ ಸಂಗ್ರಹಣೆಗೆ 5 ಲಕ್ಷ ರೂ. ಮೊತ್ತದ ವಾಹನ ಖರೀದಿಸಲಾಗಿದೆ.

ಇದನ್ನೂ ಓದಿ:ಜನತಾ ಬಜಾರ್‌ ಜಾಗದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕೃಷಿ ವಿಭಾಗದ ಕಟ್ಟಡ ನಿರ್ಮಾಣ

ಸದ್ಯ ಒಣಕಸ ಸಂಗ್ರಹಕ್ಕಷ್ಟೆ ಆದ್ಯತೆ ನೀಡಿದ್ದು, ಕ್ರಮೇಣ ತ್ಯಾಜ್ಯ ಸಂಸ್ಕರಣೆಗೂ ಆದ್ಯತೆ ನೀಡಲಾಗುವುದು. ವಾರಕ್ಕೊಂದು ದಿನ ಒಣಕಸ ಸಂಗ್ರಹಕ್ಕೆ ಮುಂದಾಗಿದ್ದು ಸಾರ್ವಜನಿಕರು, ಗ್ರಾ.ಪಂ. ಸದಸ್ಯರು, ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿವೆ.

ಶಾಸಕರಿಂದ ಲೋಕಾರ್ಪಣೆ
ತ್ಯಾಜ್ಯ ಘಟಕವನ್ನು ಅ. 23ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಹರೀಶ್‌ ಪೂಂಜ ಲೋಕಾರ್ಪಣೆಗೊಳಿಸುವರು. ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್‌ ಸ್ವತ್ಛತ ವಾಹನಕ್ಕೆ ಚಾಲನೆ ನೀಡಲಿದ್ದಾರೆ. ವಿ.ಪ. ಸದಸ್ಯ ಹರೀಶ್‌ ಕುಮಾರ್‌ ಭಾಗವಹಿಸುವರು. ಗ್ರಾ.ಪಂ. ಅಧ್ಯಕ್ಷ ಪ್ರಸನ್ನ ಎ.ಪಿ. ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಸಿಇಒ ಡಾ| ಕುಮಾರ್‌ ಭಾಗವಹಿಸಲಿದ್ದಾರೆ.

ಸ್ವಚ್ಛ ಗ್ರಾಮದ ಸಂಕಲ್ಪ
ಸರಕಾರವು ಈಗಾಗಲೆ ಒಣಕಸ ನಿರ್ವಹಣೆಗಷ್ಟೆ ಅವಕಾಶ ಕಲ್ಪಿಸಿದೆ. ಪ್ರತೀ ವಾರ ಗ್ರಾಮದ ಪ್ರಮುಖ ವಾರ್ಡ್‌ ಹಾಗೂ ಅಂಗಡಿಗಳ ಸುತ್ತಮುತ್ತ ಕಸ ಎಸೆಯದಂತೆ ಜಾಗೃತಿ ಮೂಡಿಸಿ ಕಸ ಸಂಗ್ರಹಿಸುವ ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತದೆ. ನಮ್ಮ ಗ್ರಾಮವನ್ನು ಸ್ವಚ್ಛ
ಗ್ರಾಮವಾಗಿಸುವ ಸಂಕಲ್ಪ ಇದಾಗಿದೆ.
-ಪ್ರಸನ್ನ ಎ.ಪಿ.,
ಅಧ್ಯಕ್ಷರು ಗ್ರಾ.ಪಂ. ಕಳೆಂಜ

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.