ತ್ಯಾಜ್ಯ ವಿಲೇವಾರಿ: ಪುತ್ತೂರು: ಪ್ರಥಮ ಸ್ಥಾನದ ಗುರಿ


Team Udayavani, Feb 5, 2022, 4:16 PM IST

ತ್ಯಾಜ್ಯ ವಿಲೇವಾರಿ: ಪುತ್ತೂರು: ಪ್ರಥಮ ಸ್ಥಾನದ ಗುರಿ

ಪುತ್ತೂರು: ತ್ಯಾಜ್ಯ ವಿಂಗಡನೆಯಲ್ಲಿ ರಾಜ್ಯದಲ್ಲೇ 6ನೇ ಸ್ಥಾನದಲ್ಲಿರುವ ನಗರಸಭೆ ಮುಂಬರುವ ದಿನಗಳಲ್ಲಿ ನಂಬರ್‌ ವನ್‌ ಸ್ಥಾನಕ್ಕೇರಿಸಲು ತ್ಯಾಜ್ಯ ಶೂನ್ಯ ವಲಯ ನಿರ್ಮಾಣಕ್ಕೆ ಮುಂದಡಿ ಇಟ್ಟಿದೆ.

ಜಿಲ್ಲಾಕೇಂದ್ರವಾಗಿ ರೂಪುಗೊಳ್ಳುವ ಪುತ್ತೂರಿನಲ್ಲಿ ತ್ಯಾಜ್ಯವನ್ನು ವೈಜ್ಞಾಕವಾಗಿ ನಿರ್ವಹಿಸಲು ನಾಲ್ಕೂವರೆ ಕೋ. ರೂ.ಗಳ ಮೆಗಾ ಯೋಜನೆಯ ಕಾರ್ಯ ಆರಂಭಗೊಂಡಿದೆ.

ಹಸಿಕಸ, ಒಣಕಸ ವಿಂಗಡಣೆ
ಈ ಹಿಂದೆ ನಗರಸಭೆ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ತ್ಯಾಜ್ಯ ರಾಶಿ ಹಾಕಿ ಅಲ್ಲಿಂದ ತ್ಯಾಜ್ಯ ಆಯ್ದು ಬನ್ನೂರಿನ ಲ್ಯಾಂಡ್‌ಫಿಲ್‌ ಸೈಟ್‌ನಲ್ಲಿ ಸುರಿಯಲಾಗುತ್ತಿತ್ತು. ಈ ತ್ಯಾಜ್ಯದಿಂದ ಪರಿಸರ ಹಾನಿ ಯಾಗುತ್ತಿದೆ ಎಂದು 1 ಕೋಟಿ ರೂ. ವ್ಯಯಿಸಿ ನಗರಸಭೆಯಿಂದ ಬನ್ನೂರು ಡಂಪಿಂಗ್‌ ಯಾರ್ಡ್‌ನಲ್ಲಿ ಎರೆಹುಳ ಘಟಕ ನಿರ್ಮಿಸಲಾಗಿತ್ತು. ಆದರೆ ಎರೆಹುಳ ಗೊಬ್ಬರ ನಿರ್ಮಾಣ ಘಟಕ ದಲ್ಲಿ ಗೊಬ್ಬರವನ್ನೂ ಉತ್ಪಾದನೆ ಮಾಡಲಾಗಿಲ್ಲ.

ಅವೈಜ್ಞಾನಿಕ ತ್ಯಾಜ್ಯ ಸಂಗ್ರಹ, ನಿರ್ವಹಣೆ, ಸಂಸ್ಕರಣೆಯಿಲ್ಲದ ವ್ಯವಸ್ಥೆ, ಪಾಳು ಬಿದ್ದಿರುವ ಎರ ಗೊಬ್ಬರ ತಯಾರಿ ವ್ಯವಸ್ಥೆ, ಸ್ಥಳೀಯರಿಗೆ ಪದೇ ಪದೆ ಕಾಡುತ್ತಿರುವ ಅನಾರೋಗ್ಯ ಹೀಗೆ ಸಮಸ್ಯೆಗಳ ಸರಮಾಲೆಯೇ ಇದರ ಹಿಂದೆ ಬೆಳೆದು ನಗರಾಡಳಿತಕ್ಕೂ ತಲೆನೋವಾಗಿ ಪರಿಣಮಿಸಿತ್ತು.

ತ್ಯಾಜ್ಯವನ್ನು ಹಸಿಕಸ ಮತ್ತು ಒಣಕಸ ವಿಂಗಡಿಸಿ ನೀಡುವಂತೆ ಸಾರ್ವಜನಿಕ ಅಭಿಯಾನ, ಮನವರಿಕೆ ಮಾಡಿತು. ಪರಿಣಾಮ ಶೇ. 75ರಷ್ಟು ಮಂದಿ ಹಸಿಕಸ-ಒಣಕಸ ವಿಭಜಿಸಿ ನೀಡುತ್ತಿದ್ದಾರೆ.

ತ್ಯಾಜ್ಯ ವಿಂಗಡನೆ ಯಶಸ್ವಿ
ನಗರಸಭೆಯು ತ್ಯಾಜ್ಯ ವಿಲೇಗೆ ಕೈಗೊಂಡ ಕ್ರಮದಿಂದ ತ್ಯಾಜ್ಯ ವಿಲೇ ವಾರಿಯಲ್ಲಿ ರಾಜ್ಯದಲ್ಲಿ 36ನೇ ಸ್ಥಾನದಲ್ಲಿದ್ದ ಪುತ್ತೂರು ನಗರಸಭೆ 6ನೇ ಸ್ಥಾನಕ್ಕೇರಿದೆ. 82 ಪೌರಕಾರ್ಮಿಕರ ಹುದ್ದೆ ಬೇಕಾಗಿದ್ದರೂ 42 ಪೌರಕಾರ್ಮಿಕರಿಂದ ತ್ಯಾಜ್ಯ ವಿಲೇವಾರಿ ಕಾರ್ಯ ನಡೆಯುತ್ತಿದ್ದು, ನಗರದ 15 ಸಾವಿರಕ್ಕೂ ಮಿಕ್ಕಿದ ಮನೆ, ಕಟ್ಟಡಗಳಿಂದ ದಿನಂಪ್ರತಿ 8 ಟನ್‌ಗಿಂದ ಅಧಿಕ ತ್ಯಾಜ್ಯ ವಿಂಗಡನೆಯಾಗಿಯೇ ಬನ್ನೂರು ಡಂಪಿಂಗ್‌ ಯಾರ್ಡ್‌ ಸೇರುತ್ತಿದೆ.

ಸಿದ್ಧತೆ ಆರಂಭ
ತ್ಯಾಜ್ಯ ವಿಲೇವಾರಿಯಲ್ಲಿ ಪುತ್ತೂರು ರಾಜ್ಯದಲ್ಲೇ ಮೊದಲ ಸ್ಥಾನ ಪಡೆಯಲು ಈಗಾಗಲೇ ಸಿದ್ಧತೆ ನಡೆಸಿದೆ. ನಗರಸಭೆ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ನಿರ್ವಹಿಸುವ ಈ ಬೃಹತ್‌ ಯೋಜನೆಗೆ 4.49 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಶೇ. 35 ಅನ್ನು ಕೇಂದ್ರ ಸರಕಾರ (1.57 ಕೋಟಿ ರೂ.) ಭರಿಸಲಿದೆ. ಶೇ. 23.30(1.04 ಕೋಟಿ ರೂ.) ರಾಜ್ಯ ಸರಕಾರ, ಶೇ. 41.70 (1.87 ಕೋಟಿ ರೂ. ) ನಗರಸಭೆ ಭರ್ತಿ ಮಾಡಲಾಗಿದೆ. ತ್ಯಾಜ್ಯ ಸಂಗ್ರಹ ಮತ್ತು ಸಾಗಾಟ ಯೋಜನೆಗೆ 1.19 ಕೋಟಿ ರೂ., ಸಂಸ್ಕರಣೆ ಮತ್ತು ನಿರ್ವಹಣೆಗೆ 3.30 ಕೋಟಿ ರೂ. ನಿಗದಿ ಮಾಡಲಾಗಿದೆ.

ವಿಂಗಡಿಸಿ ಸಂಗ್ರಹ
ಶೇ. 75ರಷ್ಟು ಹಸಿಕಸ ಮತ್ತು ಒಣಕಸ ವಿಂಗಡನೆಯಾಗಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಪುತ್ತೂರು ನಗರಸಭೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ.
-ಜೀವಂಧರ್‌ ಜೈನ್‌,
ಪುತ್ತೂರು ನಗರಸಭೆ ಅಧ್ಯಕ್ಷ

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.