ಕಂಚಿನಡ್ಕಪದವು ತ್ಯಾಜ್ಯ ವಿಲೇವಾರಿ ಘಟಕ; ಮುಗಿಯದ ಗೊಂದಲ


Team Udayavani, Aug 10, 2021, 3:00 AM IST

ಕಂಚಿನಡ್ಕಪದವು ತ್ಯಾಜ್ಯ ವಿಲೇವಾರಿ ಘಟಕ; ಮುಗಿಯದ ಗೊಂದಲ

ಕಂಚಿನಡ್ಕಪದವು ಕಸ ವಿಲೇವಾರಿ ಘಟಕ ನಿರ್ಮಾಣದಲ್ಲಿನ ಗೊಂದಲ ಬಂಟ್ವಾಳ ಪುರಸಭೆ ಹಾಗೂ ಸಜೀಪನಡು ಗ್ರಾಮಸ್ಥರ ನಡುವೆ ಗುದ್ದಾಟಕ್ಕೆ ಕಾರಣವಾಗುತ್ತಲೇ ಇದೆ. ಜತೆಗೆ ಕೋಣೆಮಾರು ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು ಹಲವು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಹೀಗೆ ಸಜೀಪನಡು ಗ್ರಾಮ ಎದುರಿಸುವ ಸಮಸ್ಯೆಗಳ ಚಿತ್ರಣ ಇಂದಿನ “ಒಂದು ಊರು; ಹಲವು ದೂರು’ ಸರಣಿಯಲ್ಲಿ.

ಬಂಟ್ವಾಳ:  ಹಲವು ವರ್ಷಗಳಿಂದ ಗೊಂದಲದ ಗೂಡಾಗಿರುವ ಕಂಚಿನಡ್ಕಪದವು ತ್ಯಾಜ್ಯ ವಿಲೇವಾರಿ ಘಟಕವು ಸಜೀಪನಡು ಗ್ರಾಮದಲ್ಲಿ ಬಲುದೊಡ್ಡ ಸಮಸ್ಯೆಯಾಗಿದ್ದು, ಬಂಟ್ವಾಳ ಪುರಸಭೆ ಹಾಗೂ ಸಜೀಪನಡು ಗ್ರಾಮಸ್ಥರ ನಡುವೆ ಗುದ್ದಾಟಕ್ಕೆ ಕಾರಣವಾಗುತ್ತಲೇ ಇದೆ. ತಮ್ಮ ಹಲವು ಬೇಡಿಕೆಗೆ ಸ್ಪಂದನೆ ಸಿಗದೆ ಇಲ್ಲಿ ಹಸಿ ಕಸವನ್ನು ವಿಲೇವಾರಿ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿತ್ತಲೇ ಬಂದಿದ್ದಾರೆ.

ಬಂಟ್ವಾಳ ಪುರಸಭೆ ವ್ಯಾಪ್ತಿಯ ಕಸ ವಿಲೇವಾರಿ ಮಾಡುವುದಕ್ಕೆ ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ಘಟಕ ನಿರ್ಮಿಸಲಾಗಿದ್ದು, ಕಳೆದ ವರ್ಷದಿಂದ ಪುರಸಭೆಯು ಅಲ್ಲಿ ಕಸ ವಿಲೇವಾರಿಯನ್ನು ಪ್ರಾರಂಭಿಸಿತ್ತು. ಆದರೆ ಘಟಕದಲ್ಲಿ ಹಸಿ ಕಸ ವಿಲೇವಾರಿ ಮಾಡುವುದಕ್ಕೆ ಸ್ಥಳೀಯ ಗ್ರಾ.ಪಂ. ಸೇರಿದಂತೆ ಗ್ರಾಮಸ್ಥರಿಂದ ವಿರೋಧಗಳು ವ್ಯಕ್ತವಾಗಿ 2020ರ ಮಾರ್ಚ್‌ 18ರಂದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿ ಕಸ ವಿಲೇವಾರಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು.

ವಿಲೇವಾರಿ ಘಟಕದಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೆ ದುರ್ನಾತದಿಂದ ಕುಳಿತುಕೊಳ್ಳಲಾಗುವುದಿಲ್ಲ. ಸ್ಥಳೀಯ ಮನೆಗಳು ಹಾಗೂ ಶಾಲೆಗೆ ಪರ್ಯಾಯ ವ್ಯವಸ್ಥೆಯಾಗಿಲ್ಲ ಎಂಬುದು ಸ್ಥಳೀಯರ ವಾದವಾಗಿದ್ದು, ಇರಾ ಗ್ರಾಮದಲ್ಲಿ ಸ್ಥಳೀಯರಿಗೆ ಪರ್ಯಾಯ ಜಾಗ ಗುರುತಿಸಲಾಗಿದೆ. ಆದರೆ ಅವರು ಅಲ್ಲಿಗೆ ಹೋಗುತ್ತಿಲ್ಲ ಎಂದು  ಪುರಸಭೆ ಹೇಳುತ್ತಿದೆ.

ಪ್ರಸ್ತುತ ಪುರಸಭೆಗೆ ಹಸಿ ಕಸವನ್ನು ಸಾಗಾಟ ಮಾಡುವುದಕ್ಕೆ ಸ್ಥಳವೇ ಇಲ್ಲದಾಗಿದ್ದು, ಘಟಕದಲ್ಲಿ ಸಮರ್ಪಕ ವ್ಯವಸ್ಥೆ ಮಾಡುವಲ್ಲಿಯೂ ಪುರಸಭೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಹೀಗಾಗಿ ಕಂಚಿನಡ್ಕಪದವು ತ್ಯಾಜ್ಯ ಘಟಕದ ವಿಚಾರದಲ್ಲಿ ಗ್ರಾಮದಲ್ಲಿ ಪದೇ ಪದೆ ಸಂಘರ್ಷದ ವಾತಾವರಣ ಸೃಷ್ಟಿಯಾಗುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸಲು ಯಾರೂ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ.

ಕೋಣೆಮಾರು ಗುಡ್ಡ ಕುಸಿಯುವ ಭೀತಿ:

ಸಜೀಪನಡು ಗ್ರಾಮದ ಕೋಣೆಮಾರು ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು, ಹಲವು ಮನೆಗಳು ಅಪಾಯದಲ್ಲಿವೆ. ಈ ಭಾಗದಲ್ಲಿನ ಮನೆಯ ಸದಸ್ಯರಿಗೆ ಬೇರೆ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ನೋಟಿಸ್‌ ನೀಡಲಾಗಿದೆಯೇ ಹೊರತು ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕೆಲಸ ಆಗಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಅಪಾಯದಲ್ಲಿರುವ ಗುಡ್ಡದ ಮೇಲ್ಭಾಗದಲ್ಲಿ 7 ಮನೆಗಳು, ಕೆಳ ಭಾಗದಲ್ಲಿ 2 ಮನೆಗಳಿವೆ. ಪ್ರಸ್ತುತ ಸ್ವಲ್ಪ ಸ್ವಲ್ಪ ಕುಸಿಯುತ್ತಿದ್ದು, ಒಮ್ಮೆಲೆ ಕುಸಿದರೆ ಹೆಚ್ಚಿನ ಅಪಾಯವಾಗುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯ ಮನೆಗಳಿಗೆ ನೋಟಿಸ್‌ ನೀಡಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದು, ಪರ್ಯಾಯ ವ್ಯವಸ್ಥೆಯಿಲ್ಲದೆ ಈ ರೀತಿ ನೋಟಿಸ್‌ ನೀಡುವುದು ಸರಿಯಾದ ಕ್ರಮವಲ್ಲ ಎಂಬ ಆರೋಪಗಳೂ ಕೇಳಿಬಂದಿದೆ.

ಬೈಲಗುತ್ತು ಕೃತಕ ನೆರೆಯ ಭೀತಿ:

ಗ್ರಾಮದ ಬೈಲಗುತ್ತು ಪ್ರದೇಶದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಕೃತಕ ನೆರೆಯ ಭೀತಿ ಇದ್ದು, ಎರಡು ವರ್ಷಗಳ ಹಿಂದೆ ಸ್ಥಳೀಯ ಮನೆಗಳಿಗೆ ನೆರೆ ನೀರು ನುಗ್ಗಿತ್ತು. ಈಗಲೂ ಜೋರು ಮಳೆ ಬಂದಾಗ ನೀರು ನಿಲ್ಲುವ ಸ್ಥಿತಿ ಇದ್ದು, ಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕರೆ ಮಾತ್ರ ಕೃತಕ ನೆರೆಯ ಭೀತಿ ದೂರವಾಗಬಹುದು.

ವಿಧಾನಸಭೆಯಲ್ಲೂ ಚರ್ಚೆ :

ಕಂಚಿನಡ್ಕಪದವು ತ್ಯಾಜ್ಯ ಘಟಕದ ವಿಚಾರ ವಿಧಾನಸಭೆಯಲ್ಲೂ ಚರ್ಚೆಯಾಗಿದ್ದು, ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಕ್ಷೇತ್ರ ಶಾಸಕ ಯು.ಟಿ.ಖಾದರ್‌ ವಿಚಾರ ಪ್ರಸ್ತಾಪಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದು ಕೇವಲ ಒಣ ಕಸವನ್ನು ಮಾತ್ರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು. ಈ ನಡುವೆ 2021, ಮಾರ್ಚ್‌ 13ರಂದು ಹಸಿ ಕಸವನ್ನು ತರುತ್ತಾರೆ, ರಸ್ತೆಯಲ್ಲಿ ಚೆಲ್ಲಿಕೊಂಡು ಹೋಗುತ್ತಾರೆ ಎಂದು ಆರೋಪಿಸಿ ಮತ್ತೆ ಗ್ರಾಮಸ್ಥರು ಕಸದ ವಾಹನ ತಡೆದಿದ್ದರು. ಹೀಗಾಗಿ ಸದ್ಯಕ್ಕೆ ಪುರಸಭೆಯು ಹಸಿ ಕಸವನ್ನು ಅಲ್ಲಿಗೆ ಸಾಗಿಸದೇ ಇರುವುದರಿಂದ ವಿಚಾರ ಸಣ್ಣಗಾಗಿದ್ದು, ಹಸಿ ಕಸವನ್ನು ಘಟಕಕ್ಕೆ ಸಾಗಿಸಿದರೆ ಮತ್ತೆ ಗೊಂದಲ ಸೃಷ್ಟಿಯಾಗುವ ಆತಂಕವಿದೆ.

ಇತರ ಸಮಸ್ಯೆಗಳೇನು? :

  • ಅಸಮರ್ಪಕ ಗ್ರಾಮದ ಒಳರಸ್ತೆ
  • ಕುಡಿಯುವ ನೀರಿನ ಸಮಸ್ಯೆ
  • ನಿವೇಶನ/ವಸತಿ ರಹಿತರ ಸಮಸ್ಯೆ
  • ಉಳ್ಳಾಲ ತಾಲೂಕು ಸೇರುವುದಕ್ಕೆ ವಿರೋಧ

 

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.