ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ  


Team Udayavani, Jun 29, 2022, 11:32 AM IST

3

ಬಂಟ್ವಾಳ: ನಗರದ ಜನತೆಗೆ ಕುಡಿಯುವ ನೀರು ಪೂರೈಕೆ ಮಾಡುವ ಜಕ್ರಿಬೆಟ್ಟಿನ ಜಲ ಶುದ್ಧೀಕರಣ ಘಟಕದ ಸುತ್ತಲೂ ಪೊದೆಗಳು ಬೆಳೆದುಕೊಂಡಿದ್ದು, ಅದರ ತೆರವಿಗಾಗಿ ಪುರಸಭೆಗೆ ಮನವಿ ನೀಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ. ಘಟಕದ ಸುತ್ತಲೂ ಆವರಣ ಗೋಡೆ ಇದ್ದು, ಅದರ ಒಳಭಾಗದಲ್ಲಿ ಪೂರ್ತಿ ಪೊದೆಗಳು ತುಂಬಿಕೊಂಡಿವೆ.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೂಲಕ ಅನುಷ್ಠಾನಗೊಂಡಿರುವ 24.16 ಎಂಎಲ್‌ಡಿ ಸಾಮರ್ಥ್ಯದ ಜಲ ಶುದ್ಧೀಕರಣ ಘಟಕ ಜಕ್ರಿಬೆಟ್ಟಿನ ಎತ್ತರದ ಪ್ರದೇಶದಲ್ಲಿದ್ದು, ನೋಡುವುದಕ್ಕೆ ಸುಂದರವಾಗಿದ್ದರೂ, ಘಟಕದ ಆವರಣ ಗೋಡೆಯೊಳಗೆ ಪೂರ್ತಿಯಾಗಿ ಪೊದೆಗಳು ತುಂಬಿಕೊಂಡಿದೆ.

ಇಲ್ಲಿಯ ಸ್ಥಿತಿಯನ್ನು ಕಂಡಾಗ ಸಂಬಂಧಪಟ್ಟ ಅಧಿಕಾರಿಗಳು ಘಟಕಕ್ಕೆ ಭೇಟಿ ನೀಡುತ್ತಿಲ್ಲವೇ ಎಂಬ ಸಂಶಯವೂ ಕಾಡುತ್ತಿದೆ.

ಘಟಕಕ್ಕೆ ಬಾಗಿ ಕೊಂಡಿರುವ ಗಿಡ ಗಳು, ಬೃಹದಾಕಾರದಲ್ಲಿ ಬೆಳೆದಿರುವ ಅನಗತ್ಯ ಗಿಡಗಳು ಘಟಕದ ನೀರಿನ ಭಾಗಕ್ಕೆ ಬಾಗಿಕೊಂಡಿದ್ದು, ಅದರ ಮೂಲಕ ಹಾವುಗಳು ನೀರಿಗೆ ಬೀಳುತ್ತವೆ ಎಂಬ ಆರೋಪಗಳೂ ಇವೆ. ಜತೆಗೆ ಗಿಡಗಳ ಒಣಗಿದ ಎಲೆಗಳು ಕೂಡ ನೀರಿಗೆ ಬಿದ್ದು, ತೊಂದರೆಯಾಗುತ್ತಿದೆ. ನದಿಯಿಂದ ಜಾಕ್‌ ವೆಲ್‌ ಮೂಲಕ ಯಾವುದೇ ಕಸಗಳಿಲ್ಲದೆ ನೀರು ಘಟಕವನ್ನು ಸೇರಿದರೆ ಘಟಕದಲ್ಲಿ ನೀರಿಗೆ ತರಗೆಲೆಗಳು ಬೀಳುತ್ತಿವೆ.

ಪ್ರಸ್ತುತ ಮಳೆಗಾಲ ಆರಂಭ ಗೊಂಡಿದ್ದು, ಇನ್ನೂ ಕೂಡ ಗಿಡಗಳ ತೆರವು ಕಾರ್ಯ ನಡೆದಿಲ್ಲ. ಈಗ ಮಳೆಯಾಗುತ್ತಿ ರುವುದರಿಂದ ಗಿಡಗಳು ಶೀಘ್ರದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯುತ್ತದೆ. ಘಟಕದ ಪ್ರವೇಶ ದ್ವಾರದ ಬಳಿ ಒಂದಷ್ಟು ಗಿಡಗಳು ತೆರವುಗೊಂಡದ್ದು, ಬಿಟ್ಟರೆ ಉಳಿದಂತೆ ಎಲ್ಲ ಭಾಗದಲ್ಲೂ ಪೊದೆಗಳು ತುಂಬಿಕೊಂಡಿವೆ. ನೆಟ್ಟಿರುವ ಆಲಂಕಾರಿಕ ಗಿಡಗಳು, ಹೂವಿನ ಗಿಡಗಳನ್ನೂ ಪೊದೆಗಳು ಆವರಿಸಿಕೊಂಡಿದೆ.

ಪುರಸಭೆ ಸಭೆಯಲ್ಲೂ ಪ್ರಸ್ತಾವ

ಜಕ್ರಿಬೆಟ್ಟಿನ ಜಲ ಶುದ್ಧೀಕರಣ ಘಟಕದ ಅವ್ಯವಸ್ಥೆ ವಿಚಾರವನ್ನು ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್‌ ಪುರಸಭೆಯ ಸಾಮಾನ್ಯ ಸಭೆಯಲ್ಲೂ ಪ್ರಸ್ತಾವ ಮಾಡಿದ್ದು, ಅಲ್ಲಿನ ಪೊದೆಗಳನ್ನು ತೆರವು ಮಾಡುವಂತೆ ಆಗ್ರಹಿಸಿದ್ದರು. ಸಭೆಯಲ್ಲಿ ಚರ್ಚೆಯಾಗಿ ತಿಂಗಳಾಗುತ್ತಾ ಬಂದರೂ ಇನ್ನೂ ಪೊದೆ ತೆರವುಗೊಳಿಸದೆ ಇರುವುದು ಯಾಕೆ ಎಂಬ ಪ್ರಶ್ನೆಯೂ ಎದ್ದಿದೆ.

ತೆರವಿಗೆ ಸೂಚನೆ: ಜಕ್ರಿಬೆಟ್ಟಿನ ಜಲ ಶುದ್ಧೀಕರಣ ಘಟಕದಲ್ಲಿ ಬೆಳೆದಿರುವ ಪೊದೆಗಳ ಕುರಿತು ಸಂಬಂಧಪಟ್ಟ ಸಿಬಂದಿಯಿಂದ ಮಾಹಿತಿ ಪಡೆದು ಅದನ್ನು ತೆರವು ಮಾಡುವುದಕ್ಕೆ ಸೂಚನೆ ನೀಡಲಾಗುವುದು.  -ಎಂ.ಆರ್‌.ಸ್ವಾಮಿ, ಮುಖ್ಯಾಧಿಕಾರಿಗಳು, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.