ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ
ಹಾರ ಹಾಕುವಾಗ ಕೈ ತಾಗಿಸಿದನೆಂದು ಹಾರವನ್ನೇ ಎಸೆದ ವಧು!
Team Udayavani, May 28, 2022, 12:50 AM IST
ಸಾಂದರ್ಭಿಕ ಚಿತ್ರ.
ವೇಣೂರು: ಮದುವೆ ಶಾಸ್ತ್ರದ ವೇಳೆ ಹಾರ ಬದಲಿಸುವಾಗ ವರನ ಕೈ ತಾಗಿತೆಂದು ವಧು ಹಾರವನ್ನೇ ಎಸೆದು ಮದುವೆ ನಿರಾಕರಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಮೇ 25ರಂದು ನಡೆದಿದೆ.
ಮೂಡುಕೊಣಾಜೆಯ ಯುವತಿಗೆ ನಾರಾವಿಯ ಯುವಕನೊಂದಿಗೆ ಮದುವೆ ನಿಶ್ಚಯ ಆಗಿ ನಾರಾವಿ ಸಭಾ ಭವನವೊಂದರಲ್ಲಿ ಮೇ 25ಕ್ಕೆ ಮದುವೆ ನಿಗದಿಯಾಗಿತ್ತು. ಸುಮಾರು 500ಕ್ಕೂ ಹೆಚ್ಚು ಮಂದಿಗೆ ಸಿಹಿಯೂಟದ ವ್ಯವಸ್ಥೆ ಮಾಡಲಾಗಿತ್ತು.
ಮದುವೆ ಶಾಸ್ತ್ರ ನಡೆಯುತ್ತಿದ್ದಂತೆ ಅರ್ಚಕರು ಹಾರ ಬದಲಿಸುವಂತೆ ಸೂಚಿಸಿದ್ದಾರೆ. ಅದರಂತೆ ವರ ಹಾರವನ್ನು ವಧುವಿನ ಕುತ್ತಿಗೆಗೆ ಹಾಕುತ್ತಿದ್ದಂತೆ ವಧು ರೊಚ್ಚಿಗೆದ್ದಿದ್ದಾಳೆ. ವರ ಹಾರ ಹಾಕುವಾಗ ವಧುವಿನ ಕೊರಳಿಗೆ ಕೈ ತಾಗಿದೆಯೆಂದು ಸಿಟ್ಟಿಗೆದ್ದ ವಧು ಮಂಟಪದಿಂದ ಹೊರನಡೆಯಲು ಮುಂದಾಗುತ್ತಿದ್ದಂತೆ ಸಂಬಂಧಿ ಕರು ಸಮಾಧಾನಪಡಿಸಿದ್ದಾರೆ. ಆದರೆ ಘಟನೆಯಿಂದ ಅವಮಾನಕ್ಕೊಳಗಾದ ವರನ ಕಡೆ ಯವರು ಮದುವೆಯನ್ನು ನಿರಾಕರಿಸಿದ್ದಾರೆ.
ಹೆಣ್ಣು ಗಂಡಿನ ಕಡೆಯವರು ಮಾತಿಗೆ ಮಾತು ಬೆಳೆಸಿಕೊಂಡಿದ್ದು, ಸಣ್ಣ ಮಟ್ಟಿನ ಜಗಳ ಪ್ರಾರಂಭ ಆದಾಗ ವೇಣೂರು ಪೊಲೀಸರು ಆಗಮಿಸಿದ್ದಾರೆ. ಎರಡೂ ಕಡೆಯವರಿಗೆ ಮಾತುಕತೆಗೆ ಪೊಲೀಸರು ಅವಕಾಶ ಮಾಡಿಕೊಟ್ಟರೂ ಸಂಬಂಧ ಬೆಸೆಯದೆ ಮದುವೆ ಮುರಿದುಬಿದ್ದಿದೆ. ತಯಾರಾಗಿದ್ದ ಊಟವನ್ನು ಸ್ಥಳೀಯ ಶಾಲೆಗಳಿಗೆ ನೀಡಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ