Sullia ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ
Team Udayavani, Jan 7, 2024, 12:22 AM IST
ಸುಳ್ಯ: ತಾಲೂಕಿನ ಜಾಲ್ಸೂರು ಗ್ರಾಮದ ಕೆಮನಬಳ್ಳಿ ಪರಿಸರದಲ್ಲಿ ಒಂಟಿ ಸಲಗವೊಂದು ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಸ್ಥಳೀಯರ ಕೃಷಿ ನಾಶಗೊಳಿಸಿದ ಘಟನೆ ಜ. 5ರಂದು ರಾತ್ರಿ ಸಂಭವಿಸಿದೆ.
ಕೆಮನಬಳ್ಳಿಯ ಜಯಾನಂದ ಅವರ ತೋಟಕ್ಕೆ ಕಾಡಾನೆ ಲಗ್ಗೆ ಇಟ್ಟು, ಆರು ತೆಂಗಿನ ಸಸಿಗಳನ್ನು ಹಾನಿಗೊಳಿಸಿದ್ದು, ಚ ಜಯಾನಂದರ ತಂದೆಯ ಸ್ಮಾರಕವನ್ನು ತುಳಿದು ಹಾನಿಗೊಳಿಸಿದೆ.
ಸ್ಥಳೀಯ ಸದಾನಂದ ಮಣಿಯಾಣಿ ಅವರ ತೋಟದಲ್ಲಿ ಬೇಲಿ, ಜ್ಯೋತಿರಾಣಿ ಅವರ ಮನೆಯ ತಂತಿಬೇಲಿ ನಾಶಮಾಡಿದೆ.
ಪಂಜಿಕಲ್ಲು, ಮುರೂರು ಹಾಗೂ ಬೆಳ್ಳಿಪ್ಪಾಡಿ ಭಾಗದಲ್ಲಿ ಕೃಷಿಕರ ತೋಟಕ್ಕೆ ಹಾನಿ ಮಾಡುತ್ತಿದ್ದ ಒಂಟಿ ಸಲಗ ಅಲ್ಲಿಂದ ಕನಕಮಜಲು ದೇರ್ಕಜೆ, ಕುಧ್ಕುಳಿ, ಕಾಪಿಲ, ಮುಗೇರು , ಪೆರ್ನಾಜೆ, ಪೆರ್ಲಂಪಾಡಿ, ಕೊಳ್ತಿಗೆ ಮೂಲಕ ಇದೀಗ ಕೆಮನಬಳ್ಳಿಗೆ ತಲುಪಿದ್ದು, ಅಲ್ಲಿ ಕೃಷಿಕರ ನಿದ್ದೆಗೆಡಿಸುತ್ತಿದೆ. ಕೆಮನಬಳ್ಳಿ ಫಾಲ್ಸ್ ಸಮೀಪದ ಕಾಡಿನಲ್ಲಿ ಹಗಲು ಹೊತ್ತಿನಲ್ಲಿ ಈ ಒಂಟಿ ಆನೆ ಬಿಡಾರ ಹೂಡಿದ್ದು, ರಾತ್ರಿ ವೇಳೆ ಕೃಷಿಕರ ತೋಟಕ್ಕೆ ದಾಳಿ ನಡೆಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ