ಶಾಲೆಯ ಬಿಸಿಯೂಟ ತಯಾರು ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಹಿಳೆ: ಚಿಕಿತ್ಸೆ ಫಲಿಸದೆ ಸಾವು


Team Udayavani, Jun 14, 2022, 6:42 PM IST

ಶಾಲೆಯ ಬಿಸಿಯೂಟ ತಯಾರು ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಹಿಳೆ: ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು : ಬಿಸಿಯೂಟ ತಯಾರಿಯ ಅಡುಗೆ ಕೋಣೆಯ ಬಳಿ ಶಾಲಾ ಮಕ್ಕಳಿಗೆಂದು ಸಿದ್ದಪಡಿಸಿ ಇರಿಸಿದ್ದ ಸಾಂಬಾರು ಪಾತ್ರೆಗೆ ಕಾಲು ಜಾರಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಡುಗೆ ಸಹಾಯಕಿ ಮೃತಪಟ್ಟ ಘಟನೆ ಕುರಿತಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕುರಿಯ ಗ್ರಾಮದ ಮಲಾರು ನಿವಾಸಿ, ಪುತ್ತೂರಿನ ಸೈಂಟ್‌ ವಿಕ್ಟರ್ನ ಅಡುಗೆ ಸಹಾಯಕಿ ಅಗ್ನೇಸ್‌ ಪ್ರಮೀಳಾ ಡಿ’ಸೋಜಾ (37) ಮೃತಪಟ್ಟವರು. ಮೃತರು ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ಅಗ್ನೇಸ್‌ ಪ್ರಮೀಳಾ ಅವರು ಬಿಸಿಯೂಟದ ಸಾಂಬಾರು ಬಿದ್ದು ಸಾವನ್ನಪ್ಪಿಲ್ಲ, ವಿಪರೀತ ಮದ್ಯ ಸೇವನೆಯೇ ಸಾವಿಗೆ ಕಾರಣ ಎಂದು ಶಾಲೆಯವರು ಪ್ರತಿಕ್ರಿಯಿಸಿದ್ದಾರೆ.

ದೂರಿನಲ್ಲಿ ಏನಿದೆ..?
ಮೇ 30ರಂದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಅಡುಗೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಡುಗೆ ಮನೆಯ ಬಾಗಿಲು ಬಳಿ ತಯಾರು ಮಾಡಿ ಇಟ್ಟಿದ್ದ ಬಿಸಿ ಸಾಂಬಾರಿನ ಪಾತ್ರೆಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಸಾಂಬಾರು ಅಗ್ನೇಸ್‌ ಪ್ರಮೀಳಾ ಅವರ ಮೈ ಮೇಲೆ ಬಿದ್ದಿದೆ. ಸುಟ್ಟ ಗಾಯಗೊಂಡ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅಗ್ನೆಸ್‌ ಪ್ರಮೀಳಾ ಡಿ’ಸೋಜಾ ಅವರು ಜೂ. 12ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಶಾಲೆಯಿಂದ ನಿರಾಕರಣೆ
ಅಗ್ನೇಸ್‌ ಪ್ರಮೀಳಾ ಅವರು ಮೇ 30ರಂದು ಬೆಳಗ್ಗೆ 11 ಗಂಟೆಗೆ ಶಾಲೆಗೆ ಬಂದಿದ್ದರು. ಅವರು ಕೆಲಸಕ್ಕೆ ಹಾಜರಾಗಿರಲಿಲ್ಲ. ಪಾನಮತ್ತರಾಗಿದ್ದ ಅವರನ್ನು ಅಡುಗೆ ಕೊಠಡಿಗೆ ಕಡೆಗೆ ಹೋಗದಂತೆ ಸೂಚಿಸಿದ್ದು ಪಾತ್ರೆ ತೊಳೆಯುವ ಕೆಲಸ ಆಗಿರುವುದಾಗಿಯು ತಿಳಿಸಲಾಗಿತ್ತು. ಅದಾಗ್ಯೂ ಅಡುಗೆ ಮನೆ ಪಕ್ಕದ ಮೈದಾನದ ಬಳಿ ಕುಳಿತಿದ್ದ ಅವರು ಗಂಜಿ ಬೇಕೆಂದು ಅಡುಗೆ ಕೊಠಡಿಯತ್ತ ತೆರಳಲು ಮುಂದಾಗಿದ್ದಾರೆ. ಜತೆಗೆ ಸಿಬಂದಿಯು ಹೋಗಿದ್ದಾರೆ. ಈ ವೇಳೆ ಅರ್ಧ ತಾಸು ಮೊದಲೇ ತಯಾರು ಮಾಡಿ ಇಟ್ಟಿದ್ದ, 50 ಮಂದಿ ವಿದ್ಯಾರ್ಥಿಗಳಿಗೆ ಸಾಂಬಾರು ಮಾಡುವ ಪಾತ್ರೆಗೆ ಅವರ ಕಾಲು ತಗಲಿ ಬಿದ್ದಿದ್ದು ಅವರ ದೇಹದ ಎರಡು ಕಡೆಗೆ ಗಾಯ ಉಂಟಾಗಿತ್ತು. ಪ್ರಮೀಳಾ ಅವರು ಸ್ವತಃ ಆಸ್ಪತ್ರೆಗೆ ಹೋಗುವುದು ಬೇಡ ಎಂದು ಹೇಳಿದ್ದರೂ ಒತ್ತಾಯಪೂರ್ವಕವಾಗಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಬರ್ನಿಂಗ್‌ಗೆ ಹೆಚ್ಚಿನ ಚಿಕಿತ್ಸೆಗೋಸ್ಕರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿಂದ ಪುನಃ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಶೇ. 18 ಸುಟ್ಟ ಗಾಯ ಉಂಟಾಗಿದ್ದು ಒಂದು ವಾರದೊಳಗೆ ಗುಣಮುಖರಾಗುತ್ತಾರೆ ಎಂಬ ಉತ್ತರ ನೀಡಿದ ದಾಖಲೆಯು ಇದೆ. ಆದರೆ ಪ್ರಮೀಳಾ ಅವರು ಚಿಕಿತ್ಸೆಯ ಜತೆಗೆ ಮದ್ಯ ಸೇವನೆ ಮಾಡಿ¨ªಾರೆ. ಪರಿಣಾಮ ಚಿಕಿತ್ಸೆ ಫ‌ಲಕಾರಿ ಆಗಿಲ್ಲ. ಬಿಸಿಯೂಟ ಸಾಂಬಾರು ಬಿದ್ದು ಪ್ರಾಣಕ್ಕೆ ಹಾನಿ ಆಗಿಲ್ಲ. ವಿಪರೀತ ಕುಡಿತವೇ ಸಾವಿಗೆ ಕಾರಣ. ಅವರ ಕುಡಿತ ಬಿಡಿಸಲು ಹಲವು ಪ್ರಯತ್ನ ಮಾಡಿದ್ದರೂ ಪ್ರಯೋಜನ ಆಗಿರಲಿಲ್ಲ. ಹಾಗಾಗಿ ಈ ತಿಂಗಳಲ್ಲಿ ಅವರನ್ನು ಕೆಲಸದಿಂದ ಕೈ ಬಿಡಲು ನಿರ್ಧರಿಸಲಾಗಿತ್ತು ಎಂದು ಶಾಲಾ ಮುಖ್ಯಗುರು ರೋಸಲಿನ್‌ ಲೋಬೋ ಉದಯವಾಣಿಗೆ ತಿಳಿಸಿದ್ದಾರೆ.

ವರದಿ ಸಂಗ್ರಹ
ಶಾಲೆಯವರಿಂದ ಪ್ರಾಥಮಿಕ ಮಾಹಿತಿ ಪಡೆಯಲಾಗಿದೆ. ಅವರ ಹೇಳಿಕೆಯ ಪ್ರಕಾರ ಘಟನೆಯ ದಿನ ಅಡುಗೆ ಸಹಾಯಕಿ ಕೆಲಸ ಮಾಡಿರಲಿಲ್ಲ. ಅಂದು ಮದ್ಯ ಸೇವಿಸಿ ಬಂದಿದ್ದರು. ಅಡುಗೆ ಕೋಣೆ ಬಳಿಗೆ ತೆರಳಿದ ವೇಳೆ ಸಾಂಬಾರು ಪಾತ್ರ ಬಿದ್ದು ಶೇ.18 ರಷ್ಟು ಗಾಯ ಸಂಭವಿಸಿದೆ. ಇದು ವಿಪರೀತ ಮದ್ಯ ಸೇವನೆಯಿಂದ ಉಂಟಾದ ಸಾವು ಎನ್ನುವ ಉತ್ತರ ಸಿಕ್ಕಿದೆ. ಘಟನೆಯ ಬಗ್ಗೆ ಸಮಗ್ರ ವಿವರ ಪಡೆದು ವರದಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ಅಕ್ಷರ ದಾಸೋಹ ಅಧಿಕಾರಿ ವಿಷ್ಣುಪ್ರಸಾದ್‌ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.