ಮಹಿಳಾ ಸಶಕ್ತೀಕರಣ – ಮಹಿಳಾ ಉದ್ದಿಮೆದಾರರ ಕಾರ್ಯಾಗಾರ

ಸ್ವಾವಲಂಬನೆಗೆ ಸೌರತಂತ್ರ ಜ್ಞಾನ ಸಹಕಾರಿ: ಡಾ| ಹೆಗ್ಗಡೆ

Team Udayavani, Mar 18, 2024, 11:15 AM IST

4-belthangady

ಬೆಳ್ತಂಗಡಿ: ಅನಾದಿ ಕಾಲದಿಂದ ಸೂರ್ಯನನ್ನು ಪೂಜಿಸಿ ಕೊಂಡು ಬಂದ ಪರಂಪರೆ ನಮ್ಮದು. ಇಂದು ಸೂರ್ಯನ ಶಕ್ತಿಯನ್ನು ಅಭಿವೃದ್ಧಿಯಲ್ಲಿ ಬಳಸಿಕೊಳ್ಳಬಹುದಾದ ಅನೇಕ ಸಾಧ್ಯತೆಗಳಿವೆ. ಮಹಿಳೆಯರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಗಳಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಮತ್ತು ಸೆಲ್ಕೋ ಫೌಂಡೇಶನ್‌ ಆಶ್ರಯದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ಹಮ್ಮಿಕೊಂಡಿದ್ದ “ಸಮೃದ್ಧಿ-ಸಂತೃಪ್ತಿ, ಸಬಲೀಕರಣ’ಎಂಬ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಸೌರಶಕ್ತಿ ಚಾಲಿತ ಜೀವನೋಪಾಯ ಪರಿಕರಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೌರಶಕ್ತಿಯ ಸದ್ಬಳಕೆಗಾಗಿ ತನ್ನ ಬದುಕನ್ನು ಮುಡಿಪಾಗಿಟ್ಟಿರುವ ಡಾ| ಹರೀಶ ಹಂದೆ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸುವ ವ್ಯಕ್ತಿಯಾಗಿ ಬೆಳೆದಿದ್ದಾರೆ ಎಂದು ಶ್ಲಾಫಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಎಸ್‌ ಕೆಡಿಆರ್‌ಡಿಪಿಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಡಾ| ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಸೌರ ತಂತ್ರಜ್ಞಾನವನ್ನು ಅಗತ್ಯವಿರುವ ವರಿಗೆ ತಲುಪಿಸುವಲ್ಲಿ ಸೆಲ್ಕೋ ಸಂಸ್ಥೆ ಮಾಡುತ್ತಿರುವ ಕೆಲಸ ಅನನ್ಯವಾದುದು. ಇಂತಹ ಅವಕಾಶವನ್ನು ಮಹಿಳೆಯರು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಸೆಲ್ಕೋ ಫೌಂಡೇಶನ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಹರೀಶ್‌ ಹಂದೆ ಮಾತನಾಡಿ, ಸೆಲ್ಕೋದ ಪ್ರಯತ್ನದಿಂದ ಈವರೆಗೆ ಜಾಗತಿಕವಾಗಿ 1 ಕೋಟಿ ಜನರು ವಿವಿಧ ರೀತಿಯ ಸೌರಶಕ್ತಿಯ ಪ್ರಯೋಜನಗಳನ್ನು ಪಡೆದಿದ್ದಾರೆ. 2028ರ ಹೊತ್ತಿಗೆ ಇದೇ ರೀತಿಯಲ್ಲಿ ಆಫ್ರಿಕಾ ಮತ್ತು ಏಷ್ಯಾದ ದಕ್ಷಿಣ-ಪೂರ್ವ ದೇಶಗಳ ಒಂದು ಲಕ್ಷ ಮಹಿಳೆಯರೂ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಒಂದು ಕೋಟಿ ಜನರಿಗೆ ಜೀವನೋಪಾಯ ಕ್ಷೇತ್ರದಲ್ಲಿ ಸೌರಶಕ್ತಿಯ ಪ್ರಯೋಜನಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ ಎಂದರು.

25 ವರ್ಷಗಳ ಹಿಂದೆ ಆರಂಭವಾದ ಸೆಲ್ಕೋ ಸಂಸ್ಥೆ ಮತ್ತು ಎಸ್‌ಕೆಡಿಆರ್‌ ಡಿಪಿಯ ಸಹಯೋಗವನ್ನು ಡಾ| ಹಂದೆ ಸ್ಮರಿಸಿಕೊಂಡರು.

ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ನ ಸಿಇಒ ಸವಿತಾ ಸುಳುಗೋಡು ಮಾತನಾಡಿ, ಸೌರಶಕ್ತಿಚಾಲಿತ ಫ್ರಿಜ್‌ ಜೀವ ಉಳಿಸುವ ಲಸಿಕೆಗಳ ಸಂರಕ್ಷಣೆ ಸೇರಿದಂತೆ ಬುಡಕಟ್ಟು ಜನರ ಜೀವನದಲ್ಲಿ ತಂದ ಬದಲಾವಣೆಯನ್ನು ವಿವರಿಸಿದರು. ಸೆಲ್ಕೋ ಸೋಲಾರ್‌ ಲೈಟ್‌ ಪ್ರ„. ಲಿ. ಸಿಇಒ ಮೋಹನ್‌ ಭಾಸ್ಕರ್‌ ಹೆಗಡೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಯಶಸ್ವೀ ಮಹಿಳಾ ಉದ್ಯಮಿಗಳಾದ ಧಾರವಾಡದ ರೂಪಾ ರೆಡ್ಡಿ, ಬೆಳಗಾವಿಯ ಶೈಲಾ ಪ್ರಮೋದಾ ದೇವಿ ತಮ್ಮ ಯಶೋಗಾಥೆಯನ್ನು ಹಂಚಿಕೊಂಡರು. ಎಸ್‌ಕೆಡಿಆರ್‌ಡಿಪಿ ಸಿಇಒ ಅನಿಲ್‌ ಕುಮಾರ್‌ ಎಸ್‌.ಎಲ್‌. ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.