ಪುತ್ತೂರು: ಮಹಿಳಾ ಸಾಂತ್ವನ ಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲ

ಹದಿನಾಲ್ಕು ವರ್ಷಗಳ ಹಿಂದೆ ಕೇಂದ್ರ ಪ್ರಾರಂಭ; ಮಹಿಳೆಯರ ಸಶಕ್ತೀಕರಣದ ಉದ್ದೇಶ

Team Udayavani, Aug 8, 2022, 11:48 AM IST

3

ಪುತ್ತೂರು: ಮಹಿಳಾ ದೂರು ದುಮ್ಮಾನಗಳಿಗೆ ನ್ಯಾಯ ಕಲ್ಪಿಸಲೆಂದು ಇರುವ ಪುತ್ತೂರಿನ ಸಾಂತ್ವನ ಕೇಂದ್ರಕ್ಕೆ ಸ್ವಂತ ಸೂರಿಲ್ಲದ ಸ್ಥಿತಿ.

ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ, ನ್ಯಾಯ ಕಂಡುಕೊಳ್ಳುವ ದೃಷ್ಟಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸಾಂತ್ವನ ಕೇಂದ್ರವೀಗ ಸೂರಿನ ನಿರೀಕ್ಷೆಯಲ್ಲಿ ಕಾಯುತ್ತಿದೆ.

ಬಂಟ್ವಾಳದಲ್ಲೂ ಆರಂಭ

ಪುತ್ತೂರಿನಲ್ಲಿ 2008ರಲ್ಲಿ ಜನಶಿಕ್ಷಣ ಟ್ರಸ್ಟ್‌ನಡಿ ಮಹಿಳಾ ಸಾಂತ್ವನ ಕೇಂದ್ರ ಆರಂಭಗೊಂಡಿತ್ತು. ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಅವರ ಸಮಸ್ಯೆ, ಸಂಕಷ್ಟ, ದೌರ್ಜನ್ಯಗಳಿಗೆ ಧ್ವನಿಯಾಗಿ ಆಪ್ತ ಸಮಾಲೋಚನೆ, ಸಶಕ್ತೀಕರಣ, ಸಮಾನತೆ, ನ್ಯಾಯ, ಕಾನೂನು ನೆರವುಗಳನ್ನು ನೀಡುವ ಕಾರ್ಯ ನಡೆಯುತ್ತಿದೆ. ಇದರ ಪ್ರೇರಣೆಯಾಗಿ ಬಂಟ್ವಾಳದಲ್ಲೂ ಜನಶಿಕ್ಷಣ ಟ್ರಸ್ಟ್‌ ಮೂಲಕ ಕೇಂದ್ರ ಆರಂಭಗೊಂಡು ಕಾರ್ಯ ನಿರ್ವಹಿಸುತ್ತಿದೆ.

ನಗರ ಸಭೆಯಿಂದ ಸ್ಥಳಾಂತರ

ಪುತ್ತೂರು ಮಿನಿ ವಿಧಾನಸೌಧದ ಬಳಿಯ ನಗರಸಭೆಯ ಹಳೆಯ ಕಟ್ಟಡದ ಸನಿಹದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಾಂತ್ವನ ಕೇಂದ್ರ ಕಚೇರಿಯನ್ನು ಸ್ಥಳಾಂತರಿಸುವಂತೆ ನಗರಸಭೆ ಸೂಚಿಸಿತ್ತು. ನಗರ ಸಭೆಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸ ಗಳಿಗೆ ಆ ಜಾಗ ಬೇಕಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ತಿಳಿಸಿದೆ. ಆದರೆ ಆ ಕಟ್ಟಡ ನೆಲಸಮ ಮಾಡದೆ ಹಾಗೆಯೇ ಇದ್ದು, ಸುತ್ತಲೂ ಪೊದೆಗಳು ಬೆಳೆದು ಕಟ್ಟಡ ಶಿಥಿಲಗೊಳ್ಳುತ್ತಿದೆ. ಸದ್ಯಕ್ಕೆ ಮಹಿಳಾ ಸಾಂತ್ವನ ಕೇಂದ್ರವು ತಾ.ಪಂ. ಸಾಮರ್ಥ್ಯ ಸೌಧಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿದೆ.

ಮಹಿಳಾ ಸಾಂತ್ವನಕ್ಕೆ ಸಂಬಂಧಿಸಿದ ಚಟುವಟಿಕೆಗಳು ಗೌಪ್ಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ಈಗ ಇರುವ ಸ್ಥಳ ಪ್ರಕ್ರಿಯೆಗಳಿಗೆ ಅಷ್ಟು ಸೂಕ್ತವಾದದ್ದು ಅಲ್ಲ. ಮಹಿಳೆಗೆ ತೊಂದರೆಯಾದ ಸಂದರ್ಭದಲ್ಲಿ ಕೌನ್ಸೆಲಿಂಗ್‌, ವಿಚಾರಣೆ ಸೇರಿದಂತೆ ನಾಲ್ಕು ಗೋಡೆಗಳ ಮಧ್ಯೆ ಪ್ರಕ್ರಿಯೆಗಳನ್ನು ನಡೆಸಬೇಕಾಗಿರುವುದರಿಂದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಪ್ರತ್ಯೇಕ ಕಚೇರಿಯ ಅನಿವಾರ್ಯ ಇದೆ.

ಜನ ದಟ್ಟಣೆಯಿಂದ ದೂರ ಇರುವ ಸ್ಥಳವಾಗಿದ್ದರೆ ಕಾರ್ಯ ನಿರ್ವಹಣೆಗೆ ಹೆಚ್ಚು ಅನುಕೂಲ. ಜನಶಿಕ್ಷಣ ಟ್ರಸ್ಟ್‌ ಮೂಲಕ ನಡೆಯುತ್ತಿರುವುದರಿಂದ ಸರಕಾರದ ದೊಡ್ಡ ಮೊತ್ತದ ಅನುದಾನ ಸಿಗುತ್ತಿಲ್ಲ. ಅಲ್ಪ ಅನುದಾನದಲ್ಲಿ ಪ್ರತ್ಯೇಕ ಜಾಗ, ಕಟ್ಟಡ ನಿರ್ಮಾಣ ಸಾಧ್ಯವಿಲ್ಲ. ಸದ್ಯ ಸರಕಾರದ ಅನುದಾನ ನಿರ್ವಹಣೆ, ಸಿಬಂದಿ ವೇತನಕ್ಕೆ ಮಾತ್ರ ಸಾಧ್ಯವಾಗುತ್ತಿದೆ. ಈ ಕಾರಣದಿಂದ ಶಾಸಕ, ಸಂಸದರ ಮೂಲಕ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಲಭಿಸಬೇಕಿದೆ.

ಸಹಕಾರ ಅಗತ್ಯ: ಸಾಂತ್ವನ ಕೇಂದ್ರ ಸಮುದಾಯಕ್ಕೆ ಮತ್ತಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಹೆಚ್ಚಿನ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ, ಸ್ವಂತ ಕಟ್ಟಡಕ್ಕಾಗಿ ಜನ ಪ್ರತಿನಿಧಿಗಳು, ಸಮಾಜದ ದಾನಿಗಳು ಸಹಕಾರ ನೀಡುವ ಅಗತ್ಯವಿದೆ. –ಕೃಷ್ಣ ಮೂಲ್ಯ, ನಿರ್ದೇಶಕರು, ಜನಶಿಕ್ಷಣ ಟ್ರಸ್ಟ್‌.

ಪ್ರತ್ಯೇಕ ಕಟ್ಟಡ ಅಗತ್ಯ: ಮಹಿಳಾ ಸಾಂತ್ವನ ಕೇಂದ್ರದ ಮೂಲಕ ಸುಮಾರು 1,800 ಪ್ರಕ ರಣ ಗಳು ಇತ್ಯರ್ಥಗೊಂಡಿವೆ. 18 ವರ್ಷ ಮೇಲ್ಪಟ್ಟ ಮಹಿಳೆಯರು ಎದುರಿಸುತ್ತಿರುವ ತೊಂದರೆಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿ ಸರಿ ಪಡಿಸುವ ಕೆಲಸ ಆಗಿದೆ. ಪ್ರತ್ಯೇಕ ಕಟ್ಟಡವಿದ್ದರೆ ಕೇಂದ್ರದ ಚಟುವಟಿಕೆಗಳಿಗೆ ಅನುಕೂಲ. –ನಿಶಾ ಪ್ರಿಯ, ಸಾಂತ್ವನ ಕೇಂದ್ರದ ಮೇಲ್ವಿಚಾರಕರು.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.