ನಿಧಾನಗತಿಯಲ್ಲಿ ಸಾಗಿದ ಕಾಮಗಾರಿ: ಬೊಂಡಾಲ: ಬಾಲಕಿಯರ ಹಾಸ್ಟೆಲ್‌ ನಿರ್ಮಾಣ


Team Udayavani, Jun 21, 2023, 4:05 PM IST

ನಿಧಾನಗತಿಯಲ್ಲಿ ಸಾಗಿದ ಕಾಮಗಾರಿ: ಬೊಂಡಾಲ: ಬಾಲಕಿಯರ ಹಾಸ್ಟೆಲ್‌ ನಿರ್ಮಾಣ

ಬಂಟ್ವಾಳ: ಬಂಟ್ವಾಳ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (ಬಿಸಿಡಬ್ಲ್ಯುಡಿ)ಯ ಮೂಲಕ ಬೊಂಡಾಲದಲ್ಲಿ ಸುಮಾರು ರೂ. 2 ಕೋ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಾಲಕಿಯರ ಹಾಸ್ಟೆಲ್‌ ಕಟ್ಟಡ ಕಾಮಗಾರಿ ಇನ್ನೂ ನಿಧಾನಗತಿಯಲ್ಲಿ ಸಾಗಿದ್ದು, ಕಳೆದ ಡಿಸೆಂಬರ್‌ನಲ್ಲೇ ಕಾಮಗಾರಿ ಪೂರ್ಣಗೊಳ್ಳ ಬೇಕಿತ್ತಾದರೂ ಇನ್ನೂ ಕೂಡ 2-3 ತಿಂಗಳು ಕಾಮಗಾರಿ ವಿಳಂಬ ಸಾಧ್ಯತೆ ಇದೆ.

ಬಿ.ಸಿ. ರೋಡ್‌ಗೆ ಮಂಜೂರುಗೊಂಡು ಪ್ರಸ್ತುತ ಪಾಣೆಮಂಗಳೂರಿನಲ್ಲಿ ಕಾರ್ಯಾ ಚರಿಸುತ್ತಿರುವ ದೇವರಾಜ ಅರಸು ಮೆಟ್ರಿಕ್‌ ಅನಂತರದ ಬಾಲಕಿಯರ ಹಾಸ್ಟೆಲ್‌ಗೆ ಈ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹಾಸ್ಟೆಲ್‌ ನಿರ್ಮಾಣಕ್ಕಾಗಿ ಬೊಂಡಾಲದಲ್ಲಿ ಮೀಸಲಿರಿಸಲಾದ ಒಂದು ಎಕ್ರೆ ಪ್ರದೇಶದಲ್ಲಿ ದ.ಕ.ಜಿಲ್ಲಾ ನಿರ್ಮಿತಿ ಕೇಂದ್ರದವರು ಕಟ್ಟಡ ಕಾಮಗಾರಿ ನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಕಟ್ಟಡ ನಿರ್ಮಾಣದ ಕಾಮ ಗಾರಿ ಬಹುತೇಕ ಪೂರ್ಣಗೊಂಡಿದ್ದು, ಒಳಾಂಗಣ ಗೋಡೆಯ ಪ್ಲಾಸ್ಟರಿಂಗ್‌ ಕೂಡ ಪೂರ್ತಿಯಾಗಿದೆ. ನೆಲದ ಕಾಮಗಾರಿ ಪ್ರಗತಿಯಲ್ಲಿದೆ. ನೆಲಅಂತಸ್ತಿನ ಕಾಮಗಾರಿ ಪೂರ್ತಿಗೊಂಡರೆ ಈ ಭಾಗದಲ್ಲಿ ಹಾಸ್ಟೆಲ್‌ ಆರಂಭಕ್ಕೆ ಅನುಕೂಲವಾಗಲಿದ್ದು, ಇನ್ನೂ ಒಂದಷ್ಟು ತಿಂಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಿದೆ.

7,500 ಚ.ಅಡಿ ವಿಸ್ತೀರ್ಣದ ಕಟ್ಟಡ
ಪ್ರಸ್ತುತ ಲಭ್ಯ ಅನುದಾನದಲ್ಲಿ ಒಟ್ಟು 7,500 ಚದರ ಅಡಿ ವಿಸ್ತೀರ್ಣದ ಕಟ್ಟಡ ನಿರ್ಮಾಣವಾಗಲಿದ್ದು, ಸ್ಥಳಾವಕಾಶದ ದೃಷ್ಟಿಯಿಂದ ಇಲಾಖೆಯು ಒಂದು ಅಂತಸ್ತಿನ ಕಟ್ಟಡ (ಜಿ ಪ್ಲಸ್‌ ವನ್‌) ನಿರ್ಮಿ ಸುವಂತೆ ಪ್ರಾರಂಭದಲ್ಲೇ ಸಂಬಂಧಪಟ್ಟ ಎಂಜಿನಿಯರಿಂಗ್‌ ವಿಭಾಗಕ್ಕೆ ಮನವಿ ಮಾಡಿತ್ತು. ರೂ. 2 ಕೋ. ಮಂಜೂರಾತಿಯ ಜತೆಗೆ ಹೆಚ್ಚುವರಿಯಾಗಿ ಇನ್ನೊಂದು ಕೋ.ರೂ.ಗಳಿಗೂ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇಲಾಖೆಗೆ ಈ ಭಾಗದಲ್ಲಿ ಸದ್ಯ ಒಂದು ಎಕ್ರೆ ಪ್ರದೇಶ ಮಾತ್ರ ಲಭ್ಯವಿರುವುದರಿಂದ ಕಡಿಮೆ ಸ್ಥಳದಲ್ಲಿ ಒಂದು ಹಾಸ್ಟೆಲ್‌ ನಿರ್ಮಾಣಗೊಂಡರೆ, ಉಳಿದ ಸ್ಥಳದಲ್ಲಿ ಮುಂದಿನ ದಿನಗಳಲ್ಲಿ ಮತ್ತೂಂದು ಕಟ್ಟಡ ನಿರ್ಮಾಣಕ್ಕೆ ಸ್ಥಳಾವಕಾಶ ಸಿಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಜಿ ಪ್ಲಸ್‌ ವನ್‌ ಕಟ್ಟಡಕ್ಕೆ ಆದ್ಯತೆ ನೀಡಲಾಗಿದೆ.

ಇನ್ನಷ್ಟು ಅನುದಾನದ ಅಗತ್ಯ
ಬೊಂಡಾಲದ ನಿವೇಶನದಲ್ಲಿ 2020ರಲ್ಲಿ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಜಾಗದ ಸಮತಟ್ಟಿನ ವಿಚಾರಕ್ಕೆ ಸಂಬಂಧಿಸಿ ಪ್ರಾರಂಭದಲ್ಲೇ ಕಾಮಗಾರಿ ವಿಳಂಬವಾಗಿತ್ತು. ಜಿಲ್ಲಾ ನಿರ್ಮಿತಿ ಕೇಂದ್ರದ ಮಾಹಿತಿ ಪ್ರಕಾರ ಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಅನುದಾನದ ಅಗತ್ಯ ಇದ್ದು, ಅದಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ನಿವೇಶನದ ಮಧ್ಯೆ ಇದ್ದ ಬೃಹತ್‌ ಬಂಡೆ ಕಲ್ಲನ್ನು ತೆರವು ಮಾಡುವುದಕ್ಕೆ ಹೆಚ್ಚಿನ ಮೊತ್ತ ಖರ್ಚಾಗಿದ್ದು, ಅದು ಕ್ರಿಯಾಯೋಜನೆಯಲ್ಲಿ ಸೇರಿರಲಿಲ್ಲ. ಮುಂದಿನ ಬಜೆಟ್‌ ಘೋಷಣೆಯ ಬಳಿಕ ಅನುದಾನ ಬರುವ ಸಾಧ್ಯತೆ ಇದ್ದು, ಬಿಡುಗಡೆಗೊಂಡ ತತ್‌ಕ್ಷಣ ಕಾಮಗಾರಿ ಪೂರ್ತಿಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಹಲವು ಕಾರಣಕ್ಕೆ ವಿಳಂಬ
ಹಲವು ಕಾರಣಕ್ಕೆ ಕಟ್ಟಡ ನಿರ್ಮಾಣ ವಿಳಂಬವಾಗಿದ್ದು, ಬೇಗ ಪೂರ್ಣಗೊಳಿಸುವಂತೆ ಇಲಾಖೆಯಿಂದ ಒತ್ತಡ ಹಾಕುತ್ತಲೆ ಇದ್ದೇವೆ. ಹೆಚ್ಚುವರಿ ಅನುದಾನದ ಅಗತ್ಯದ ಕುರಿತು ನಿರ್ಮಿತಿ ಕೇಂದ್ರದವರು ಹೇಳುತ್ತಿದ್ದು, ಅದಕ್ಕಾಗಿ ಪ್ರಸ್ತಾವನೆಯೂ ಸಲ್ಲಿಕೆಯಾಗಿದೆ. ಪ್ರಾರಂಭದಲ್ಲಿ ಜಾಗದಲ್ಲಿ ಬಂಡೆಕಲ್ಲು ಇದ್ದ ಪರಿಣಾಮ ಅದರ ತೆರವಿಗೆ ಬಹಳ ಸಮಯ ತೆಗೆದುಕೊಂಡಿತ್ತು.
-ಬಿಂದಿಯಾ ನಾಯಕ್‌, ತಾಲೂಕು
 ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಂಟ್ವಾಳ

ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ
ಪ್ರಸ್ತುತ ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ಅದು ಬಿಡುಗಡೆಯಾದ 2-3 ತಿಂಗಳಲ್ಲಿ ಕಾಮಗಾರಿ ಪೂರ್ತಿಗೊಳಿಸಲಿದ್ದೇವೆ. ಬಂಡೆಕಲ್ಲು ಒಡೆಯುವ ಮೊತ್ತ ನಮ್ಮ ಎಸ್ಟಿಮೇಟ್‌ನಲ್ಲಿ ಒಳಗೊಳ್ಳದ ಪರಿಣಾಮ ಹೆಚ್ಚುವರಿ ಮೊತ್ತದ ಅಗತ್ಯ ಬಂದಿದೆ.
-ನವೀನ್‌, ಎಂಜಿನಿಯರ್‌, ನಿರ್ಮಿತಿ ಕೇಂದ್ರ, ಮಂಗಳೂರು

 

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.