ಕಾರ್ಮಿಕರ ಸಂಘಟನೆ ಉತ್ತಮ ಬೆಳವಣಿಗೆ’


Team Udayavani, May 5, 2019, 6:14 AM IST

24

ಕಡಬ: ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸುತ್ತಿದ್ದ ಕಾಲ ಇಂದು ಮುಗಿದು ಹೋದ ಕಹಿ ನೆನಪು ಮಾತ್ರ. ಕಾರ್ಮಿಕರು ಕೂಡ ಸಂಘಟಿತರಾಗುತ್ತಿದ್ದಾರೆ. ತಮ್ಮ ಹಕ್ಕುಗಳ ಕುರಿತು ಜಾಗೃತರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕೊಕ್ಕಡ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ಪೆರ್ಲ ಹೇಳಿದರು.

ಅವರು ಕಡಬ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮರ್ದಾಳದ ಸೈಂಟ್ ಮೇರಿಸ್‌ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕರ ದಿನಾಚರಣೆ ಮತ್ತು ಕ್ರೀಡೋತ್ಸವ ಸಮಾರಂಭದ ಸಮಾರೋಪದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.

ಕಾರ್ಲ್ ಮಾರ್ಕ್ಸ್ ವಿಶ್ವದಲ್ಲಿಯೇ ಕಾರ್ಮಿಕರ ಪರವಾಗಿ ದನಿ ಎತ್ತಿದ ಮಹಾನ್‌ ವ್ಯಕ್ತಿಯಾಗಿದ್ದಾರೆ. ದುಡಿಯುವ ಕೈಗಳು ಮತ್ತು ದುಡಿಸುವವರ ನಡುವಿನ ತಾರತಮ್ಯ ಹಾಗೂ ದುಡಿಯವರ ಜನರು ಶೋಷಣೆಗೊಳಗಾಗುತ್ತಿರುವ ಪರಿಯನ್ನು ಬೆಳಕಿಗೆ ತಂದ ಕಾರ್ಲ್ ಮಾರ್ಕ್ಸ್ ಕಾರ್ಮಿಕರ ಸಂಘಟನೆಗೆ ಪಥವನ್ನು ತೋರಿಸಿಕೊಟ್ಟರು. ಮುಂದೆ ಜಗತ್ತಿನಾದ್ಯಂತ ಕಾರ್ಮಿಕ ಸಂಘಟನೆ ಗಳು ಹುಟ್ಟಿಕೊಂಡವು. ಅದರ ಪರಿಣಾಮವಾಗಿ ಕಾರ್ಮಿಕರು ಕೂಡ ತಮ್ಮ ಶ್ರಮಕ್ಕೆ ಸಮನಾದ ಪ್ರತಿಫಲವನ್ನು ಪಡೆದುಕೊಳ್ಳುವಂತಾಗಿದೆ ಎಂದರು.

ಸರಕಾರವೂ ಕಾರ್ಮಿಕರ ಕಲ್ಯಾಣ ಕ್ಕಾಗಿ ಹಲವಾರು ಸವಲತ್ತುಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳುವಲ್ಲಿ ಸಂಘಟನೆಯಿಂದ ಕಾರ್ಮಿಕರಿಗೆ ಮಾರ್ಗದರ್ಶನ ದೊರೆಯಲಿ. ಕಡಬ ತಾಲೂಕು ಮಟ್ಟದಲ್ಲಿ ರಚನೆಗೊಂಡಿರುವ ಕಾರ್ಮಿಕ ಸಂಘಟನೆಯು ಇನ್ನಷ್ಟು ಬಲ ಪಡೆದುಕೊಂಡು ಯಶಸ್ಸಿನ ಹಾದಿಯಲ್ಲಿ ಸಾಗಲಿ ಎಂದವರು ತಿಳಿಸಿದರು.

ಸವಲತ್ತು ಪಡೆಯೋಣ
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಉಪಾಧ್ಯಕ್ಷ ಅರುಣ್‌ ರೈ ಕಳಾರ, ಕಾರ್ಮಿಕ ಸಂಘಟನೆಗಳ ಹೋರಾಟದ ಫಲವಾಗಿ ಕಾರ್ಮಿಕರಿಗೆ ಸರಕಾರದಿಂದ ಹಲವು ಸೌಲಭ್ಯಗಳು ಸಿಗುತ್ತಿವೆ. ಮುಖ್ಯವಾಗಿ ಕಾರ್ಮಿಕರಿಗೆ ಈ ಕುರಿತು ಅರಿವು ಇಲ್ಲದೇ ಇರುವುದು ಸವಲತ್ತುಗಳು ಸಮರ್ಪಕವಾಗಿ ಆರ್ಹ ಫಲಾನುಭವಿಗಳಿಗೆ ತಲುಪದೇ ಇರಲು ಕಾರಣವಾಗಿದೆ. ಕಾರ್ಮಿಕರನ್ನು ಸಂಘಟಿಸಿ ಸರಕಾರದ ಕಾರ್ಮಿಕ ಇಲಾಖೆಯ ಮೂಲಕ ನೋಂದಾಯಿಸಿ ಕೊಂಡು ಅವರಿಗೆ ಸಿಗಬೇಕಾದ ಸವಲತ್ತುಗಳನ್ನು ಸಿಗುವಂತೆ ಮಾಡುವ ಉದ್ದೇಶದಿಂದ ಆರಂಭಗೊಂಡಿರುವ ತಾಲೂಕುಮಟ್ಟದ ಈ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲ ಕಾರ್ಮಿಕರು ಕೈಜೋಡಿಸಬೇಕು ಎಂದವರು ಮನವಿ ಮಾಡಿದರು.

ಸಂಘದ ಗೌರವಾಧ್ಯಕ್ಷ ಮೋಹನ್‌ ಕೆ.ಪಿ. ಅವರು ವಿಶೇಷ ಅತಿಥಿಯಾಗಿದ್ದರು. ಸಂಘದ ಉಪಾಧ್ಯಕ್ಷ ಉಮೇಶ್‌ ಕೋಕಳ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಗೌಡ ಬಿಳಿನೆಲೆ, ಜತೆ ಕಾರ್ಯದರ್ಶಿ ವಿದ್ಯಾಧರ ಕೋಕಳ, ಕೋಶಾಧಿಕಾರಿ ಗಿರಿಯಪ್ಪ ಗೌಡ ಬಿಳಿನೆಲೆ ಉಪಸ್ಥಿತರಿದ್ದರು.

ಮಹೇಶ್‌ ಕುಂಬಾರ ದೊಡ್ಡಕೊಪ್ಪ ಕೋಡಿಂಬಾಳ ಅವರು ಸ್ವಾಗತಿಸಿ, ಲೋಕನಾಥ ಗೌಡ ಕೈಕಂಬ ಬಿಳಿನೆಲೆ ಅವರು ವಂದಿಸಿದರು. ಕಮಲಾಕ್ಷಿ ಮೋಹನ್‌ ಕಾರ್ಯಕ್ರಮ ನಿರೂಪಿಸಿದರು. ಪ್ರಸಾದ್‌ ಮೂಜೂರು ಅತಿಥಿಗಳನ್ನು ಪರಿಚಯಿಸಿದರು.

ಹಿರಿಯ ಕಾರ್ಮಿಕರಾದ ತಂಗಪ್ಪ ನ್‌ ಮೇಸ್ತ್ರಿ ಐತ್ತೂರು (ನುರಿತ ಗಾರೆ ಕೆಲಸಗಾರ), ಪರಮೇಶ್ವರ ಆಚಾರಿ ನೆಟ್ಟಣ (ಮರದ ಶಿಲ್ಲಿ ಹಾಗೂ ವಾಸ್ತು ತಜ್ಞ) ಹಾಗೂ ಬಾಬು ಥಾಮಸ್‌ ಕುಟ್ರಾಪ್ಪಾಡಿ ಹೊಸಮಠ (ಪೈಂಟರ್‌) ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ಕಾರ್ಮಿಕರಿಗೆ ಸಮ್ಮಾನ

ಹಿರಿಯ ಕಾರ್ಮಿಕರಾದ ತಂಗಪ್ಪ ನ್‌ ಮೇಸ್ತ್ರಿ ಐತ್ತೂರು (ನುರಿತ ಗಾರೆ ಕೆಲಸಗಾರ), ಪರಮೇಶ್ವರ ಆಚಾರಿ ನೆಟ್ಟಣ (ಮರದ ಶಿಲ್ಲಿ ಹಾಗೂ ವಾಸ್ತು ತಜ್ಞ) ಹಾಗೂ ಬಾಬು ಥಾಮಸ್‌ ಕುಟ್ರಾಪ್ಪಾಡಿ ಹೊಸಮಠ (ಪೈಂಟರ್‌) ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.