3ಜಿ, 4ಜಿ ಬದಲು ಉತ್ತಮ ಗುರೂಜಿ ಅಗತ್ಯ


Team Udayavani, Aug 25, 2019, 5:00 AM IST

r-9

ಉಪ್ಪಿನಂಗಡಿ: ಶ್ರೀ ಕೃಷ್ಣನ ತತ್ತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳದೇ ಹೋದಲ್ಲಿ ಭಗವದ್ಗೀತೆಯ ಸಾರವನ್ನು ನಮ್ಮ ನಡೆ- ನುಡಿಗಳಲ್ಲಿ ಅನುಸರಿಸದೇ ಹೋದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಅರ್ಥವಿಲ್ಲ ಎಂದು ನಿವೃತ್ತ ಅಧ್ಯಾಪಕ ನಾರಾಯಣ ಭಟ್ ಹೇಳಿದರು.

ಅವರು ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನ ಮಂದಿರದಲ್ಲಿ ನಡೆದ 39ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವದ ಬಹುಮಾನ ವಿತರಣ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.

ಸಂಬಂಧ ಗಟ್ಟಿಗೊಳ್ಳುತ್ತದೆ
ಶ್ರೀ ದುರ್ಗಾಪರಮೇಶ್ವರಿ ಭಜನ ಮಂದಿರದ ಅಧ್ಯಕ್ಷ ಸುರೇಶ್‌ ಗೌಂಡತ್ತಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗಿಗಳಾಗಬೇಕು. ಆಗ ಉತ್ತಮ ಸಂಸ್ಕಾರ, ಸಂಸ್ಕೃತಿ ನಮ್ಮದಾಗುವುದು. ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಸಂಘಟನ ಮನೋಭಾವದಿಂದ ಎಲ್ಲರೂ ಒಗ್ಗೂಡುವ ಮೂಲಕ ಧಾರ್ಮಿಕ ಸಂಸ್ಕೃತಿಯನ್ನು ಉಳಿಸಬೇಕು ಎಂದರು.

ಬಹುಮಾನ ವಿತರಣೆ
ಬಿಎಂಎಸ್‌ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದ ಉಪ್ಪಿನಂಗಡಿ ವಲಯಾಧ್ಯಕ್ಷರಾಗಿ ಆಯ್ಕೆಯಾದ ಹರೀಶ್‌ ಕುಮಾರ್‌ ಪಟ್ಲ ಹಾಗೂ ಯೋಧ ಸಂದೀಪ್‌ ನೆಡ್ಚಿಲ್ ಅವರನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ಶ್ರೀಕೃಷ್ಣ ವೇಷ ಹಾಕಿದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಮುಖರಾದ ಪ್ರತಾಪ್‌ ಪೆರಿಯಡ್ಕ, ಪ್ರಸನ್ನ, ರಾಧಾಕೃಷ್ಣ ಭಟ್ ಬೊಳ್ಳಾವು, ಸುರೇಶ್‌ ಪಲ್ಲಿಗದ್ದೆ, ಪ್ರಶಾಂತ್‌ ಪೆರಿಯಡ್ಕ, ಸದಾನಂದ ಶೆಟ್ಟಿ, ಚಿದಾನಂದ ಪಂಚೇರು, ಜತ್ತಪ್ಪ ನಾಯ್ಕ ಬೊಳ್ಳಾವು, ಮಹಾಲಿಂಗೇಶ್ವರ ಭಟ್ ಮಧುವನ, ಆನಂದ ಪೂಜಾರಿ ನೆಡ್ಚಿಲ್, ಸಚಿನ್‌ ಪೆರಿಯಡ್ಕ, ಸೇಸಪ್ಪ ಗೌಡ, ಶೀನಪ್ಪ ಗೌಡ ಬೊಳ್ಳಾವು, ಬಾಲಕೃಷ್ಣ ಪೆರಿಯಡ್ಕ, ಸುಧಾಕರ ಕಣಿಯ ಉಪಸ್ಥಿತರಿದ್ದರು.

ಅಕ್ಷಯ ಶಂಕರಿ ಪ್ರಾರ್ಥಿಸಿದರು. ಭಜನ ಮಂದಿರದ ಗೌರವ ಸಲಹೆಗಾರ ಶಂಕರನಾರಾಯಣ ಭಟ್ ಬೊಳ್ಳಾವು ಸ್ವಾಗತಿಸಿದರು. ಕಾರ್ಯದರ್ಶಿ ಅವಿನಾಶ್‌ ಭಟ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಮುಖ್ಯ ಅತಿಥಿಯಾಗಿದ್ದ ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಆಚಾರ್ಯ ಮಾತನಾಡಿ, ಪುಟ್ಟ ಮಕ್ಕಳಲ್ಲಿ ಶ್ರೀಕೃಷ್ಣನ ಬಾಲ್ಯದ ತುಂಟಾಟಗಳು ಕಾಣುತ್ತವೆ. ಪುಟ್ಟ ಮಕ್ಕಳಲ್ಲಿ ದೇವರನ್ನು ಕಾಣುವ ಕೆಲಸವಾಗುತ್ತಿದೆ. ಭಾರತೀಯ ಸಂಸ್ಕೃತಿಯನ್ನು ಮಕ್ಕಳಿಗೆ ಉಣಬಡಿಸುವ ಮೂಲಕ ಅದನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕಿದೆ. ಇಂತಹ ಸಾರ್ವಜನಿಕ ಕಾರ್ಯಕ್ರಮಗಳಿಂದ ಅದು ಸಾಧ್ಯವಾಗುತ್ತಿದೆ ಎಂದರು.

ಜೀವನದ ಜಂಜಾಟದಲ್ಲಿ ಮಕ್ಕಳಿಗೊಂದಿಷ್ಟು ಸಮಯವನ್ನು ನಾವು ಮೀಸಲಿಡಬೇಕು. ನಮಗಿಂದು 3ಜಿ, 4ಜಿಯ ಬದಲು ಉತ್ತಮ ಗುರೂಜಿಯ ಅಗತ್ಯವಿದೆ. ಮಕ್ಕಳಿಗೆ ಉತ್ತಮ ವಿಚಾರವನ್ನು ಬೋಧನೆ ಮಾಡುವ ಮೊದಲು ನಾವು ಅದನ್ನು ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು. ಭಗವದ್ಗೀತೆಯನ್ನು ತಂದು ಮನೆಯಲ್ಲಿಡುವುದು ಮುಖ್ಯ ಅಲ್ಲ. ಅದನ್ನು ಓದಿ ಅದರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾಗಬೇಕು. ಆಗ ಮಾತ್ರ ಮಕ್ಕಳನ್ನು ಸುಂದರ ಆಕೃತಿಯನ್ನಾಗಿ ನಿರ್ಮಿಸಲು ಸಾಧ್ಯ ಎಂದು ನಾರಾಯಣ ಭಟ್ ಹೇಳಿದರು.

ಭಗವದ್ಗೀತೆ ಓದಿಕೊಳ್ಳಿ
ಜೀವನದ ಜಂಜಾಟದಲ್ಲಿ ಮಕ್ಕಳಿಗೊಂದಿಷ್ಟು ಸಮಯವನ್ನು ನಾವು ಮೀಸಲಿಡಬೇಕು. ನಮಗಿಂದು 3ಜಿ, 4ಜಿಯ ಬದಲು ಉತ್ತಮ ಗುರೂಜಿಯ ಅಗತ್ಯವಿದೆ. ಮಕ್ಕಳಿಗೆ ಉತ್ತಮ ವಿಚಾರವನ್ನು ಬೋಧನೆ ಮಾಡುವ ಮೊದಲು ನಾವು ಅದನ್ನು ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು. ಭಗವದ್ಗೀತೆಯನ್ನು ತಂದು ಮನೆಯಲ್ಲಿಡುವುದು ಮುಖ್ಯ ಅಲ್ಲ. ಅದನ್ನು ಓದಿ ಅದರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾಗಬೇಕು. ಆಗ ಮಾತ್ರ ಮಕ್ಕಳನ್ನು ಸುಂದರ ಆಕೃತಿಯನ್ನಾಗಿ ನಿರ್ಮಿಸಲು ಸಾಧ್ಯ ಎಂದು ನಾರಾಯಣ ಭಟ್ ಹೇಳಿದರು.

ಸಂಸ್ಕೃತಿ ಉಣಬಡಿಸೋಣ
ಮುಖ್ಯ ಅತಿಥಿಯಾಗಿದ್ದ ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಆಚಾರ್ಯ ಮಾತನಾಡಿ, ಪುಟ್ಟ ಮಕ್ಕಳಲ್ಲಿ ಶ್ರೀಕೃಷ್ಣನ ಬಾಲ್ಯದ ತುಂಟಾಟಗಳು ಕಾಣುತ್ತವೆ. ಪುಟ್ಟ ಮಕ್ಕಳಲ್ಲಿ ದೇವರನ್ನು ಕಾಣುವ ಕೆಲಸವಾಗುತ್ತಿದೆ. ಭಾರತೀಯ ಸಂಸ್ಕೃತಿಯನ್ನು ಮಕ್ಕಳಿಗೆ ಉಣಬಡಿಸುವ ಮೂಲಕ ಅದನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕಿದೆ. ಇಂತಹ ಸಾರ್ವಜನಿಕ ಕಾರ್ಯಕ್ರಮಗಳಿಂದ ಅದು ಸಾಧ್ಯವಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.