ಕನ್ಯಾನ : ಕಂಠಪೂರ್ತಿ ಕುಡಿದ ಚಾಲಕ; ಜೆಸಿಬಿ-ಸೈಕಲಿಗೆ ಢಿಕ್ಕಿ, ಬಾಲಕ ಸಾವು
Team Udayavani, Jun 5, 2022, 7:10 PM IST
ವಿಟ್ಲ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿನ ಉದ್ಯಮಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಜೆಸಿಬಿಯು ಸೈಕಲ್ ಗೆ ಢಿಕ್ಕಿ ಹೊಡೆದಿದ್ದು, ಚಲಾಯಿಸುತ್ತಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ಬಾಲಕನನ್ನು ಕಣಿಯೂರು ನಿವಾಸಿ ಹಸೈನಾರ್ ಅವರ ಪುತ್ರ ಮಹಮ್ಮದ್ ಅಖಿಲ್ ಎಂದು ತಿಳಿದು ಬಂದಿದೆ.
ಜೆಸಿಬಿ ಚಲಾಯಿಸುತ್ತಿದ್ದ ವ್ಯಕ್ತಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಪೆರ್ಲಂಪಾಡಿ : ಚರಣ್ ರಾಜ್ ರೈ ಕೊಲೆ ಪ್ರಕರಣ : ಮೂವರು ಪೊಲೀಸರ ವಶಕ್ಕೆ
ಅಮಲು ಪದಾರ್ಥ ಸೇವಿಸಿದ್ದ ಗದಗ ಮೂಲದ ಚಾಲಕ ತನ್ನ ನಿರ್ಲಕ್ಷ್ಯದ ಚಲಾವಣೆಯಿಂದ ಜೆಸಿಬಿಯು ಬಾಲಕನ ಮೇಲೆರಗಿದೆ. ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕನನ್ನು ಜೆಸಿಬಿಯಿಂದ ಪಕ್ಕಕ್ಕೆ ಸರಿಸಿ, ತಾನು ಕೆಲಸದ ಜಾಗಕ್ಕೆ ತೆರಳಿದ್ದಾನೆ. ಅಲ್ಲಿ ಆತ ಬೇರೊಬ್ಬ ಚಾಲಕ ಬರುತ್ತಾನೆಂದು ಹೇಳಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಿಷಯ ಊರಿನವರಿಗೆ ತಿಳಿದು ಬಂದಿದೆ. ಉದ್ಯಮಿ ಹಾಗೂ ಊರವರು ಒಟ್ಟು ಸೇರಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾದಿಕ್ ಹಾಗೂ ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ