ಬೆಳಕಿಲ್ಲದ ಜೀವನಕ್ಕೆ ನೆರವಾದ ಯುವಕರ ತಂಡ


Team Udayavani, Jun 24, 2021, 3:50 AM IST

ಬೆಳಕಿಲ್ಲದ ಜೀವನಕ್ಕೆ ನೆರವಾದ ಯುವಕರ ತಂಡ

ಪುತ್ತೂರು: ನಗರಸಭೆ ವ್ಯಾಪ್ತಿಯ ತಾರಿಗುಡ್ಡೆಯಲ್ಲಿ ಸೋರುವ ಸೂರಿನೊಳಗೆ ಕನಿಷ್ಠ ಸ್ಥಿತಿಯಲ್ಲಿ ಜೀವನ ನಿರ್ವಹಿಸುತ್ತಿರುವ ಒಂಟಿ ವೃದ್ಧೆಯ ಬದುಕಿಗೆ ಯುವಕರ ತಂಡವೊಂದು ಆಸರೆ ನೀಡಲು ಮುಂದಡಿ ಇಟ್ಟಿದೆ.

ಅಪ್ಪಿ ಎಂಬ ವೃದ್ಧೆಯ ಒಬ್ಬಂಟಿ ಬದುಕಿನ ಬಗ್ಗೆ ಅರಿತುಕೊಂಡ ಪುತ್ತೂರಿನ ಅಭಿರಾಮ್‌ ಫ್ರೆಂಡ್ಸ್‌ ಎಂಬ ಯುವಕರ ತಂಡ ಪ್ರಥಮ ಹಂತದಲ್ಲಿ ಮನೆ ಪರಿಸರ ಸ್ವತ್ಛತೆ, ದುರಸ್ತಿಗೆ ಮುಂದಾಗಿದ್ದು ಮುಂದಿನ ದಿನಗಳಲ್ಲಿ ಅಗತ್ಯ ಸೌಕರ್ಯ ಒದಗಿಸಲು ನಿರ್ಧರಿಸಿದೆ.

ಚಿಮಣಿ ದೀಪ:

ಅಪ್ಪಿ ಒಂಟಿಯಾಗಿ ವಾಸಿಸುತ್ತಿದ್ದು ತನ್ನ ಮುರುಕಲು ಮನೆಯೇ ಇವರಿಗೆ ಆಸರೆ. ವಿದ್ಯುತ್‌ ಸಂಪರ್ಕ ಇಲ್ಲದೆ ಚಿಮಣಿ ದೀಪವೇ ಬೆಳಕಿನ ದೀವಿಗೆ. ವಯೋಸಹಜ ಹಿನ್ನೆಲೆಯಲ್ಲಿ ದೃಷ್ಟಿ ಮಂದವಾಗಿದ್ದು ನಿತ್ಯದ ಬದುಕು ನರಕ ಸದೃಶವಾಗಿತ್ತು. ಪರಿಸ್ಥಿತಿ ಹೇಗಿದೆಯಂದರೆ ಈ ಮನೆಯಲ್ಲಿ ಶ್ವಾನಗಳು ಬಿಟ್ಟರೆ ಬೇರೆ ಯಾರೂ ಇಲ್ಲ. ಅಪ್ಪಿ ಅವರ ಬದು ಕಿನ ಸ್ಥಿತಿ ಮನಕಲಕುವಂತಹದು. ಮುಪ್ಪಿನ ಕಾಲದಲ್ಲಿ ಆರೈಕೆಗೆ ಯಾರೂ ಇಲ್ಲದ ಪರಿಸ್ಥಿತಿ ಅವರದ್ದು.

ಸ್ಪಂದಿಸಿದ ಯುವಕರ ತಂಡ:

ಚುನಾವಣೆ ಸಂದರ್ಭದಲ್ಲಿ ಮನೆ ಭೇಟಿ ಬಿಟ್ಟರೆ ಉಳಿದ ಸಂದರ್ಭದಲ್ಲಿ ಯಾರೂ ಬರುವವರಿಲ್ಲ ಅನ್ನುವುದಕ್ಕೆ ಈ ಮನೆ ಪರಿಸ್ಥಿತಿಯೇ ಉದಾಹರಣೆ. ತಾರಿಗುಡ್ಡೆ ಭಾಗದವರು, ಸ್ಥಳೀಯರು ಅಪ್ಪಿ ಅಕ್ಕ ಎಂದೇ ಕರೆಯಲ್ಪಡುವ ಈ ಅಜ್ಜಿಗೆ ಜತೆಗಾರರೇ ಇಲ್ಲದೆ ಒಂಟಿಯಾಗಿ ದಿನ ದೂಡುವ ಸ್ಥಿತಿ. ಈ ವಿಚಾರವನ್ನು ಅರಿತ 25ಕ್ಕೂ ಅಧಿಕ ಇರುವ ಯುವಕರ ಕ್ರೀಡಾ ತಂಡ ಅಭಿರಾಮ್‌ ಫ್ರೆಂಡ್ಸ್‌ನ ಸದಸ್ಯರು ಮನೆ ಭೇಟಿ ಮಾಡಿ ವೃದ್ಧೆಯ ಅಳಲು ಆಲಿಸಿದ್ದಾರೆ. ಸೋರುವ ಮಾಡು, ನೇತಾಡುತ್ತಿರುವ ಗೋಡೆ, ಕತ್ತಲು ವಾತಾ ವರಣಕ್ಕೆ ಬೆಳಕು ನೀಡುವ ಕಾರ್ಯ ಪ್ರಾರಂ ಭಿಸಿದ್ದಾರೆ. ಮನೆ ಛಾವಣಿಗೆ ಟಾರ್ಪಾಲು ಹಾಸಿ ತಾತ್ಕಾಲಿಕ ರಕ್ಷಣೆ ನೀಡಲಾಗಿದೆ.

ನಗರಸಭೆ ವ್ಯಾಪ್ತಿಯೊಳಗಿರುವ ಅಪ್ಪಿ ಅವರ ಮನೆ ಪರಿಸ್ಥಿತಿ ಕಂಡು ನೆರವಾಗಲು ನಿರ್ಧರಿಸಿದ್ದೇವೆ. ಮೊದಲ ಹಂತದಲ್ಲಿ ಸ್ವತ್ಛತೆ, ದುರಸ್ತಿ ಕಾರ್ಯ ನಡೆಸಿದ್ದು, ಸಾರ್ವಜನಿಕರ ಸಹಕಾರ ಪಡೆದು ಮುಂದಿನ ಹಂತದ ಕೆಲಸ ಕಾರ್ಯಗಳನ್ನು ಮಾಡಲು ತೀರ್ಮಾನಿಸಿದ್ದೇವೆ. ನವೀನ್‌ ರೈ ಪಂಜಳ, ಅಧ್ಯಕ್ಷರು, ಅಭಿರಾಮ್‌ ಫ್ರೆಂಡ್ಸ್‌ ಪುತ್ತೂರು

ಅಪ್ಪಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸಮಸ್ಯೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ದಾಖಲೆ ಪತ್ರ ನೀಡುವಂತೆ ತಿಳಿಸಿದ್ದೇನೆ. ದಾಖಲೆ ಗಳಿದ್ದರೆ ನಗರಸಭೆಯಿಂದ ಮನೆ ದುರ ಸ್ತಿಗೆ ನೆರವು ನೀಡಲಾಗುತ್ತದೆ. ದಾಖಲೆ ಪತ್ರ ಸಮರ್ಪಕವಾಗಿಲ್ಲದಿದ್ದರೆ ಸಂಘ ಸಂಸ್ಥೆಗಳ ನೆರವು ಪಡೆದು ಸ್ಪಂದಿಸ ಲಾಗುವುದು. ಜೀವಂಧರ್‌ ಜೈನ್‌, ಅಧ್ಯಕ್ಷರು, ನಗರಸಭೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.