ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್ಗೆ ಗುದ್ದಿದ ಬೈಕ್; ಸವಾರ ಸ್ಥಳದಲ್ಲೇ ಸಾವು
Team Udayavani, Sep 4, 2022, 12:50 PM IST
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ( ಸೆ.3 ರಂದು) ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ.
ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡವರು.
ಘಟನೆ ವಿವರ:
ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್ ಶನಿವಾರ ಬೈಕ್ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯ ಭಾಗಕ್ಕೆ ಗುದ್ದಿದೆ. ಪರಿಣಾಮ ಭರತ್ ರಾಜ್ ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಬೈಕ್ನಲ್ಲಿದ್ದ ಇನ್ನೋರ್ವ ಧನುಷ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕುಟುಂಬಕ್ಕೆ ಆಧಾರವಾಗಿದ್ದ:
ಐಟಿಐ ಶಿಕ್ಷಣದ ಜೊತೆಗೆ ಅಡಿಕೆ ಸುಲಿಯುವ ಕೆಲಸ ನಿರ್ವಹಿಸುತ್ತಿದ್ದ ಭರತ್ ರಾಜ್ ಕುಟುಂಬಕ್ಕೆ ಆಧಾರವಾಗಿದ್ದ. ಇದ್ದ ಒಬ್ಬ ಪುತ್ರನನ್ನು ಕಳೆದುಕೊಂಡು ತಂದೆ – ತಾಯಿ ದುಖಃಕ್ಕೊಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ