ಬಂಟ್ವಾಳ: ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು
Team Udayavani, Sep 12, 2022, 5:21 PM IST
ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತ ಯುವಕ.
ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ಅಜ್ಜನ ಮನೆಯಲ್ಲಿ ವಾಸವಿರುವ ಮುಹಮ್ಮದ್ ಶರೀಫ್ ಮರ ಕಡಿಯುವ ಕೆಲಸ ಮಾಡುತ್ತಿದ್ದರು. ರವಿವಾರ ಅಮ್ಟೂರಿನಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕ್ಸಿಗೆ ಪಡೆಯುತ್ತಿದ್ದ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ