ಜೋಕಾಲಿ ಫ್ರೆಂಡ್ಸ್ ತಂಡದಿಂದ ಕಿಡ್ನಿ ವೈಫಲ್ಯದ ಚಿಕಿತ್ಸೆಗೆ 1.5 ಲಕ್ಷ ರೂ ಸಹಾಯಧನ


Team Udayavani, Sep 22, 2021, 10:10 AM IST

hjhjghgfd

ಕಟಪಾಡಿ : ಜೋಕಾಲಿ ಫ್ರೆಂಡ್ಸ್ ಪಳ್ಳಿಗುಡ್ಡೆ ಅಷ್ಟಮಿಯಂದು ವೇಷ ಧರಿಸಿ ಸಂಗ್ರಹಿಸಿದ ಮೊತ್ತದಲ್ಲಿ ಅನಾರೋಗ್ಯ ಪೀಡಿತ ಬಡ ಅಶಕ್ತ ರಿಕ್ಷಾ ಚಾಲಕನ ಪುತ್ರ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೆ.ಎನ್.ನಗರದ ಸಂಜಯ್ ಕೋಟ್ಯಾನ್ ಅವರ ವೈದ್ಯಕೀಯ ವೆಚ್ಚಕ್ಕಾಗಿ 1.5 ಲಕ್ಷ ರೂ. ಸಹಾಯಧನವನ್ನು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಅವರು ಹಸ್ತಾಂತರಿಸಿದರು.

ಬಳಿಕ ಆಶೀರ್ವಚನ ನೀಡಿ, ಸಂಕಷ್ಟಕ್ಕೆ ಸ್ಪಂದಿಸುವ ಶ್ರೇಷ್ಠ ಧರ್ಮದ ಮೂಲಕ ಮನಸ್ಸು ಕಟ್ಟುವ ಕೆಲಸ ಮಾಡಿದ ಜೋಕಾಲಿ ಫ್ರೆಂಡ್ಸ್ ಜೀವನ ಧರ್ಮ ಪಾಲಿಸಿದೆ. ಧರ್ಮ ಎಂಬುದು ಆಚಾರ, ನಡೆನುಡಿಗಳಲ್ಲಿ ಅನುಷ್ಠಾನವಾಗಬೇಕು. ನಾಟಕೀಯ ಬದುಕಿನ ನಡುವೆ ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪುತ್ತಿರುವ ಸಮಾಜದ ಬಗ್ಗೆ ಕಟ್ಟೆಚ್ಚರ ಅವಶ್ಯ ಎಂದರು

ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಬಡವರ ಕಣ್ಣೀರೊರೆಸುವ ಕಾಯಕದ ಮೂಲಕ ಜೋಕಾಲಿ ಫ್ರೆಂಡ್ಸ್ ಸಮಾಜಮುಖಿ ಕಾರ್ಯವು ನಿರಂತರವಾಗಿರಲಿ ಎಂದರು.

ಕಟಪಾಡಿ ಜಾಮಿಯಾ ಮಸ್ಜಿದ್  ಧರ್ಮಗುರು ಯೂಸುಫ್ ಝಹಾರಿ, ಅಂಬಾಡಿ ಸಿಎಸ್ಐ ಚರ್ಚ್ ಧರ್ಮಗುರು ರೆ|ಜಾನ್ ವೆಸ್ನಿ ಕುಂದರ್ ತಮ್ಮ ಆಶೀರ್ವಚನದಲ್ಲಿ ಜಾತಿ ಧರ್ಮಗಳ ಎಲ್ಲೆಯನ್ನು ಮೀರಿ ಸಾಂತ್ವನ ಪದ್ಧತಿ ನಡೆಯುತ್ತಿದ್ದು, ಕಳೆದ ಮೂರು ವರ್ಷಗಳಿಂದ ಜೋಕಾಲಿ ಫ್ರೆಂಡ್ಸ್ ತಂಡವು ಅಗತ್ಯವುಳ್ಳ ನೊಂದವರಿಗೆ ಬೆಳಕಾಗುವ ಶ್ರೇಷ್ಠ ಕಾಯಕ ನಡೆಸಿದ್ದಾರೆ ಎಂದರು.

ಸಮಾರಂಭದಲ್ಲಿ ಕೋಟೆಗ್ರಾಮದ 6 ಆಶಾ ಕಾರ್ಯಕರ್ತರಿಗೆ ನಗದು ಸಹಿತ ಪುರಸ್ಕಾರ, ಕೋಟೆ ಗ್ರಾ.ಪಂ. ಅಧ್ಯಕ್ಷ ಕಿಶೋರ್ ಅಂಬಾಡಿ, ಪೋಸ್ಕೋ ವಿಶೇಷ ಸರಕಾರಿ ಅಭಿಯೋಜಕ ರಾಘವೇಂದ್ರ ವೈ. ಟಿ, ನೋಟರಿ, ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ಡಾ|ಯು.ಕೆ. ಶೆಟ್ಟಿ, ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್,  ವೇಷಧಾರಿ ನಿತಿನ್ ಜೆ.ಅಂಚನ್, ಪತ್ರಕರ್ತರಾದ ಬಾಲಕೃಷ್ಣ ಪೂಜಾರಿ ಉಚ್ಚಿಲ, ಪ್ರಕಾಶ್ ಸುವರ್ಣ, ವಿಜಯ ಆಚಾರ್ಯ ಉಚ್ಚಿಲ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಶ್ರೀಕ್ಷೇತ್ರ ಪೇಟೆಬೆಟ್ಟುವಿನ ತುಕಾರಾಮ ಎಸ್, ಗರಡಿ ಜವನೆರ್ ಮುಖ್ಯಸ್ಥ ಸುಧೀರ್ ರಾಜ್ ಪೂಜಾರಿ, ಮಲಬಾರ್ ಗೋಲ್ಡ್,ಡೈಮಂಡ್ಸ್ನ ಹಫೀಸ್ ರೆಹ್ಮಾನ್, ಶ್ರೀ ಕ್ಷೇತ್ರ ಪೇಟೆಬೆಟ್ಟುವಿನ ತುಕಾರಾಮ ಎಸ್. ಉರ್ವ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಕಟಪಾಡಿ ಗ್ರಾ.ಪಂ. ಸದಸ್ಯ ಸುಭಾಸ್ ಬಲ್ಲಾಳ್, ಜೋಕಾಲಿ ಫ್ರೆಂಡ್ಸ್ ಸಲಹೆಗಾರರಾದ ಭಾಸ್ಕರ್ ಕಾಂಚನ್, ಮಂಜುನಾಥ ಪೂಜಾರಿ ಖಂಡಿಗ, ಸತೀಶ್ ಅಂಚನ್, ಶರತ್ ಕೋಟೆ ಉಪಸ್ಥಿತರಿದ್ದರು.

ಜೋಕಾಲಿ ಫ್ರೆಂಡ್ಸ್ ತಂಡವು ಕಳೆದ ಮೂರು ವರ್ಷಗಳಿಂದ ಗುರುತಿಸಿದ ಆಯ್ದ ಅಶಕ್ತ ಬಡಕುಟುಂಬಗಳಿಗೆ ಸುಮಾರು 7 ಲಕ್ಷ ರೂ. ಸಹಾಯ ಹಸ್ತವನ್ನು ನೀಡಿರುತ್ತದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.