ಕಣ್ಣಂಗಾರು ಬೈಪಾಸ್ ಮತ್ತು ಹೆಜಮಾಡಿ ಕೋಡಿಯಲ್ಲಿ 14 ಜನರಿಗೆ ಸೋಂಕು ದೃಢ
Team Udayavani, Jun 27, 2020, 2:00 PM IST
ಪಡುಬಿದ್ರಿ: ಇಲ್ಲಿನ ನಡ್ಸಾಲು ಗ್ರಾಮದ ಕಣ್ಣಂಗಾರು ಬೈಪಾಸ್ ಮತ್ತು ಹೆಜಮಾಡಿ ಕೋಡಿಯಲ್ಲಿ ಒಟ್ಟು 14 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ಇಂದು ದೃಢವಾಗಿದೆ.
ನಡ್ಸಾಲು ಗ್ರಾಮದ ಕಣ್ಣಂಗಾರು ಬೈಪಾಸ್ ನ ಸಹೋದರರಿಬ್ಬರಿಗೆ ಈ ಮೊದಲು ಕೋವಿಡ್-19 ಸೋಂಕು ಪತ್ತೆಯಾಗಿತ್ತು. ಹೆಜಮಾಡಿ ಕೋಡಿಯ ವ್ಯಕ್ತಿಯೂ ಜ್ವರ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ. ಪರೀಕ್ಷೆ ವೇಳೆ ಈತನಿಗೂ ಕೋವಿಡ್-19 ಸೋಂಕು ಇರುವುದು ದೃಢವಾಗಿತ್ತು.
ಸದ್ಯ ಕಣ್ಣಂಗಾರು ಬೈಪಾಸ್ ಸಹೋದರರ ಸಂಪರ್ಕಕ್ಕೆ ಬಂದಿರುವ ನಾಲ್ಕು ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇವರು ತಮ್ಮ ಪ್ರಯಾಣದ ಮಾಹಿತಿಯನ್ನು ಸರಿಯಾಗಿ ನೀಡದೇ ಸೋಂಕು ಹರಡಲು ಕಾರಣವಾಗಿದ್ದಾರೆ ಎನ್ನಲಾಗಿದೆ.
ಈ ಸಹೋದರರು ತಾವು ಎಲ್ಲಿಗೂ ಪ್ರಯಾಣ ಬೆಳೆಸಿಲ್ಲವೆಂದು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದರು. ಆದರೆ ಕಾಲ್ ಡಿಟೇಲ್ಸ್ ಪರಿಶೀಲನೆಗೆ ಒಳಪಡಿಸಿದಾಗ ಇವರಲ್ಲಿ ಒಬ್ಬಾತ ಪಾಣೆಮಂಗಳೂರು, ಬಿಸಿ ರೋಡ್, ಬಂಟ್ವಾಳ, ಉಳ್ಳಾಲಗಳಿಗೆ ಹೋಗಿಬಂದಿರುವ ವಿವರ ಲಭ್ಯವಾಗಿದೆ ಎಂದು ವರದಿಯಾಗಿದೆ. ಸದ್ಯ ಈ ಸಹೋದರರ ಮನೆಯಲ್ಲಿ 69 ವರ್ಷದ ಪುರುಷ, 62 ವರ್ಷ ಮತ್ತು 31 ವರ್ಷದ ಮಹಿಳೆ, 1 ವರ್ಷ ಏಳು ತಿಂಗಳ ಹೆಣ್ಣು ಮಗು ಸೋಂಕಿಗೀಡಾಗಿದ್ದಾರೆ.
ಹೆಜಮಾಡಿ ಕೋಡಿಯ ಯುವಕ ಇತ್ತೀಚೆಗೆ ಕೇರಳದ ಕೊಚ್ಚಿನ್ ನಿಂದ ಆಗಮಿಸಿದ್ದ. ನಂತರ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲಿ ಆತನಿಗೆ ಸೋಂಕು ಇರುವುದು ದೃಢವಾಗಿತ್ತು. ಸದ್ಯ ಆತನ ಸಂಪರ್ಕದಿಂದ 10 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಒಂದು ವರ್ಷದ ಇಬ್ಬರು ಮಕ್ಕಳು, 12 ವರ್ಷದ ಬಾಲಕಿ, 27 ವರ್ಷದ ಯುವಕ, 45 ವರ್ಷ, 23 ವರ್ಷ, 56 ವರ್ಷ, 33 ವರ್ಷ, 22 ವರ್ಷ, 32 ವರ್ಷದ ಮಹಿಳೆಯರಿಗೆ ಕೋವಿಡ್-19 ಸೋಂಕು ದೃಢವಾಗಿದೆ..
ಸೋಂಕನ್ನು ಹರಡಲು ಕಾರಣರಾದವರ ವಿರುದ್ಧ ಎಫ್ಐಆರ್ ದಾಖಲಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?