ಇನ್ನಂಜೆ: 14ನೇ ಶತಮಾನದ ಶಾಸನ ಪತ್ತೆ
Team Udayavani, Apr 21, 2022, 12:51 PM IST
ಕಾಪು: ಕಾಪುವಿನ ಇನ್ನಂಜೆ ಗ್ರಾಮದ ಕುಂಜರ್ಗ ರಾಜೇಂದ್ರ ಪ್ರಭು ಅವರ ಗದ್ದೆಯ ಬದುವಿನಲ್ಲಿರುವ ಶಾಸನವನ್ನು ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ – ಉಡುಪಿ ಇದರ ಅಧ್ಯಯನ ನಿರ್ದೇಶಕ ಪ್ರೊ| ಎಸ್. ಎ. ಕೃಷ್ಣಯ್ಯ ಅವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನ ನಡೆಸಿರುತ್ತಾರೆ.
ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದಲ್ಲಿ ಗೋಚರಿಸುವ 28 ಸಾಲುಗಳಲ್ಲಿ ಹೆಚ್ಚಿನ ಅಕ್ಷರಗಳು ತ್ರುಟಿತಗೊಂಡಿದ್ದು, ಶಾಸನದ ಕೆಳ ಭಾಗವು ನೆಲದಲ್ಲಿ ಹುದುಗಿರುವುದರಿಂದ ಉಳಿದ ಸಾಲುಗಳನ್ನು ಓದಲು ಸಾಧ್ಯವಾಗಿಲ್ಲ. ಶಾಸನದ ಮೇಲ್ಭಾಗದಲ್ಲಿ ಶಿವಲಿಂಗವಿದ್ದು ಇದರ ಎಡಭಾಗದಲ್ಲಿ ಬಸವನ ಉಬ್ಬು ಕೆತ್ತನೆಯಿದೆ.
ಸ್ವಸ್ತಿ ಶ್ರೀಮತು ಎಂದು ಪ್ರಾರಂಭವಾಗುವ ಈ ಶಾಸನದಲ್ಲಿ ಕಾಲಮಾನ ಅಳಿಸಿ ಹೋಗಿದೆ. ಶಾಸನವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಗುರುವಾರ, ಮಂಗಳೂರು ರಾಜ್ಯ ಹಾಗೆಯೇ ತ್ರಿವಿಕ್ರಮ, ಮಹೇಶ್ವರ ಕಾಪಿಂದ, ಹಡಪದ ಸಾವಣ, ನಾಕೂರ ಎರಡು ಬಳಿಯ, ಅರಸಿಂಗೆ ಗದ್ಯಾಣ 10ನು ಎಂಬ ಇನ್ನೂ ಮುಂತಾದ ಪದಗಳ ಉಲ್ಲೇಖ ಕಂಡುಬರುತ್ತದೆ. ಲಿಪಿಯ ಆಧಾರದ ಮೇಲೆ ಈ ಶಾಸನವು ಸುಮಾರು 14 ನೇ ಶತಮಾನಕ್ಕೆ ಸೇರಿದೆ ಎಂದು ಸಂಶೋಧನಾರ್ಥಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕ್ಷೇತ್ರ ಕಾರ್ಯ ಸಂಶೋಧನೆಯ ಸಂದರ್ಭದಲ್ಲಿ ಕಿಶನ್ ಕುಮಾರ್ ಮೂಡುಬೆಳ್ಳೆ, ಕೆ. ಶ್ರೀಧರ್ ಭಟ್ ಮತ್ತು ರವಿ ಸಂತೋಷ್ ಆಳ್ವ ಅವರು ಸಹಕಾರ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
MUST WATCH
ಹೊಸ ಸೇರ್ಪಡೆ
The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್ʼ ಸೀಸನ್ – 3 ಶೂಟ್ ಅರಂಭ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ