ಅಜೆಕಾರು: 14ನೇ ಶತಮಾನದ ಶಿಲಾ ಶಾಸನ ಪತ್ತೆ
Team Udayavani, Sep 23, 2022, 9:57 AM IST
ಅಜೆಕಾರು: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ. ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಈ ಶಾಸನ ಪತ್ತೆಯಾಗಿದ್ದು ಇದು ಸುಮಾರು 1409 ಇಸವಿಯದ್ದಾಗಿರಬಹುದೆಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.
ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಎಸ್. ಎ. ಕೃಷ್ಣಯ್ಯ ಹಾಗೂ ಕಡಿಯಾಳಿ ಯು. ಕಮಲಾಬಾಯಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೆ ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಫ್ಲೀಚ್ ಇಂಡಿಯಾ ಫೌಂಡೇಶನ್ ಹೈದರಾಬಾದ್ ಇದರ ಸಹಾಯಕ ಸಂಶೋಧಕ ಶ್ರುತೇಶ್ ಆಚಾರ್ಯ ಶಿಲಾಶಾಸನವನ್ನು ಓದಿ ಅಧ್ಯಯನ ನಡೆಸಿದ್ದಾರೆ.
ಶಿಲಾ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರ ಹಾಗೂ ಶಂಖ ಚಕ್ರಗಳ ಕೆತ್ತನೆಯನ್ನು ಕೆತ್ತಲಾಗಿದೆ ಇದು ವೈಷ್ಣವ ಪಂಥದ ಶಿಲಾ ಶಾಸನ ವಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ. ಈ ಶಾಸನದಲ್ಲಿ 14ನೇ ಶತಮಾನದ ಕನ್ನಡವನ್ನು ಬಳಕೆ ಮಾಡಲಾಗಿದ್ದು ಇದು ವಿಜಯನಗರ ಕಾಲದ ಕನ್ನಡ ಲಿಪಿಯನ್ನು ಹೋಲುತ್ತದೆ ಎಂದು ಸಂಶೋಧಕ ಶ್ರುತೇಶ್ ಆಚಾರ್ಯ ಹೇಳಿದ್ದಾರೆ.
ಈ ಶಾಸನದಲ್ಲಿ 10 ಸಾಲುಗಳನ್ನು ಬರೆಯಲಾಗಿದ್ದು ಸುಮಾರು ಮೂರು ಅಡಿ ಎತ್ತರ ಎರಡು ಅಡಿ ಅಗಲ ಹೊಂದಿರುವ ಶಾಸನವು ಕಲ್ಲಿನಿಂದ ಕೊರೆಯಲ್ಪಟ್ಟಿದೆ. ಈ ಶಾಸನದಲ್ಲಿ ಮಂಣ್ಣೆ (ಪ್ರಸ್ತುತ ಮರ್ಣೆ ಗ್ರಾಮ)ಯ ಆಜಕಾರ ವಿಷ್ಣು ದೇವರ ದೀವಿಗೆಗೆ ಕಾತು ಮೂಲಿಗ (ಮೊಲಿ ಸಮುದಾಯ ಇರಬಹುದು) ಎಂಬವರು ಬೆಟ್ಟಿಂ ಪ್ರದೇಶ ದಿಂದ (ಗಾಣದಬೆಟ್ಟು) ಎಣ್ಣೆಯನ್ನು ಮತ್ತು 11 ತೆಂಗಿನಕಾಯಿಗಳನ್ನು ದಾನವಾಗಿ (ಉಂಬಳಿ) ಬಿಟ್ಟಿರುವ ಕುರಿತು ಶಾಸನದಲ್ಲಿ ಉಲೇಖವಾಗಿದೆ.
ಈ ಶಾಸನವು ಪತ್ತೆಯಾಗಿರುವ ಸಮೀಪದಲ್ಲಿ ಪುರಾತನ ವಿಷ್ಣುಮೂರ್ತಿ ದೇವಸ್ಥಾನವಿದ್ದು ಶಾಸನದಲ್ಲಿ ದೇವಸ್ಥಾನದ ಉಲ್ಲೇಖ ಇದೆ ಎಂದು ಸಂಶೋಧಕರು ಹೇಳಿದ್ದಾರೆ. ಕ್ಷೇತ್ರಕಾರ್ಯ ಶೋಧನೆ ಸಂದರ್ಭ ಪ್ರಕಾಶ್ ಶೆಟ್ಟಿ, ಸುರೇಶ್ ಶೆಟ್ಟಿ, ರವಿ ಸಂತೋಷ್ ಆಳ್ವ, ಸುಶಾಂತ್ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ