ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ


Team Udayavani, Sep 23, 2020, 1:36 AM IST

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

ಕೊಳಲಗಿರಿ ಪರಾರಿ ಪರಿಸರದಲ್ಲಿ ಭೂ ಕುಸಿತ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ರವಿವಾರ ಮುಂಜಾನೆ ಸುರಿದ ಭಾರೀ ಮಳೆಯಿಂದ 290 ಕೋ.ರೂ.ಗೂ ಅಧಿಕ ನಷ್ಟ ಸಂಭವಿಸಿದೆ. ಜಿಲ್ಲಾಡಳಿತ ನಡೆಸಿದ ಪ್ರಾಥಮಿಕ ಅಂದಾಜು ಇದಾಗಿದೆ. ಇದೇ ವೇಳೆ ತುರ್ತು ಪರಿಹಾರ ಕಾಮಗಾರಿಗಳಿಗೆ 40 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಜಿಲ್ಲಾಡಳಿತ ಸರಕಾರಕ್ಕೆ ಪತ್ರ ಬರೆದಿದೆ.

ಕೃಷಿ, ತೋಟಗಾರಿಕೆ, ಪಿಡಬ್ಲ್ಯುಡಿ, ಮೆಸ್ಕಾಂ ಮೊದಲಾದ ಇಲಾಖೆಗಳಿಂದ ವರದಿಗಳನ್ನು ತರಿಸಿಕೊಳ್ಳಲಾಗುತ್ತಿದೆ. ಅಂತಿಮ ವರದಿ ಇನ್ನೂ ಸಿದ್ಧಗೊಂಡಿಲ್ಲ. ಮಂಗಳವಾರ ಮಳೆ ಪ್ರಮಾಣ ಇನ್ನಷ್ಟು ಕಡಿಮೆಯಾಗಿರುವುದರಿಂದ ಜನಜೀವನ ಸುಸ್ಥಿತಿಗೆ ಬರುತ್ತಿದೆ.

ಪ್ರಸ್ತುತ ಬೆಂಗಳೂರಿನಲ್ಲಿ ವಿಧಾನಸಭಾಧಿವೇಶನ ನಡೆಯುತ್ತಿ ರುವುದರಿಂದ ಜಿಲ್ಲೆಯ ಶಾಸಕರ ಒತ್ತಡದ ಮೇರೆಗೆ ಪರಿಹಾರ ಮೊತ್ತ ಬಿಡುಗಡೆಯಾಗುವ ನಿರೀಕ್ಷೆ ಇದೆ. ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಂಗಳವಾರ ಮಣಿಪಾಲದ ಪ್ರೀಮಿಯರ್‌ ಎನ್‌ಕ್ಲೇವ್‌ ರಕ್ಷಣ ಗೋಡೆ ಕುಸಿದಿರುವ ಪ್ರದೇಶಕ್ಕೆ ಭೇಟಿ ನೀಡಿದರು. ಪೆರಂಪಳ್ಳಿ ಭಾಗದಲ್ಲಿ ಜನರನ್ನು ರಕ್ಷಿಸಿದ ಮನೆಗಳಿಗೆ ಭೇಟಿ ನೀಡಿದರು. ಜನರು ಮನೆಗಳನ್ನು ಶುಚಿ ಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ. ತೆನೆ ಬಂದ ಭತ್ತದ ಕೃಷಿ ಗದ್ದೆಗಳಿಗೆ ತೊಂದರೆಯಾಗಿದೆ.

ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳ ಸುಪರ್ದಿಯಲ್ಲಿ ತಲಾ 1 ಕೋ.ರೂ. ಈಗಾಗಲೇ ಇದ್ದು, ಜಿಲ್ಲಾಧಿ ಕಾರಿಯವರು ಹೆಚ್ಚುವರಿ ಯಾಗಿ ತಲಾ 2 ಕೋ.ರೂ. ತುರ್ತು ಪರಿಹಾರಕ್ಕಾಗಿ ಮಂಜೂರು ಮಾಡಿದ್ದಾರೆ.

ಕೊಳಲಗಿರಿ ಪರಾರಿಯಲ್ಲಿ ಭೂಕುಸಿತ
ಉಡುಪಿ: ಹಾವಂಜೆ ಉಪ್ಪೂರು ಗ್ರಾಮ ಗಳೆರಡಕ್ಕೂ ಸಂಬಂಧ ಪಟ್ಟ ರಿಂಗ್‌ ರೋಡ್‌ ಇರುವ ಕೊಳಲಗಿರಿ ಪರಾರಿ ಪರಿಸರದಲ್ಲಿ ಮಂಗಳವಾರ ಭೂ ಕುಸಿತ ಕಂಡುಬಂದಿದೆ. ಈ ಪ್ರದೇಶ ರಕ್ಷಿತಾರಣ್ಯ ದಿಂದ ಕೂಡಿದೆ. ಮಳೆಯಿಂದ ಭೂಕುಸಿತ ಉಂಟಾಗಿದ್ದು, ಹೆಚ್ಚಿನ ಮರಗಳು ನೆಲಕ್ಕುರುಳಿವೆ. ಎದುರು ಭಾಗದಲ್ಲಿ ಮದಗವಿರುವುದರಿಂದ ನೀರು ತುಂಬಿಕೊಳ್ಳುತ್ತಿದೆ. ಈ ಭೂ ಪ್ರದೇಶದ ಸುತ್ತಮುತ್ತ ಅನೇಕ ಮನೆಗಳಿವೆ. ಈ ಪ್ರದೇಶ ಇನ್ನಷ್ಟು ಕುಸಿತವಾಗುವ ಮತ್ತು ಹಾನಿಯಾಗುವ ಮೊದಲು ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡರೆ ಪರಿಸರವನ್ನುಹಾಗೂ ಜೀವ ಹಾನಿಯನ್ನು ತಪ್ಪಿಸಲು ಸಾಧ್ಯ ಎಂದು ಸ್ಥಳೀಯರಾದ ಕೊಳಲಗಿರಿ ಪೌಲ್‌ ಅಲ್ಮೇಡಾ ಹಾಗೂ ಕೀಳಂಜೆಯ ಜಯಶೆಟ್ಟಿ ಬನ್ನಂಜೆ ತಿಳಿಸಿ¨ªಾರೆ.

ಪ್ರಾಥಮಿಕ ಅಂದಾಜಿನಂತೆ ಜಿಲ್ಲೆಯಲ್ಲಿ 290 ಕೋ.ರೂ.ಗೂ ಅಧಿಕ ನಷ್ಟ ಸಂಭವಿಸಿದೆ. ತುರ್ತಾಗಿ 40 ಕೋ.ರೂ. ನೆರವನ್ನು ಕೋರಿ ಪತ್ರ ಬರೆದಿದ್ದೇನೆ. ತುರ್ತು ನೆರವಿಗೆ ಆಯಾ ತಹಶೀಲ್ದಾರ್‌ ಅವರ ಬಳಿ ತಲಾ 3 ಕೋ.ರೂ. ಇದೆ.
– ಜಿ. ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.