ಉಡುಪಿಯಲ್ಲಿಂದು 17 ಮಕ್ಕಳು ಸೇರಿದಂತೆ 45 ಮಂದಿ ಸೋಂಕಿತರು ಗುಣಮುಖ
Team Udayavani, May 30, 2020, 12:59 PM IST
ಉಡುಪಿ: ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದ ಉಡುಪಿ ಜಿಲ್ಲೆಯಲ್ಲಿ ಇಂದು 45 ಜನರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್, ಇಂದು ಉಡುಪಿಯ ಟಿಎಂಎ ಪೈ ಆಸ್ಪತ್ರೆಯಿಂದ 17 ಮಕ್ಕಳು ಸೇರಿದಂತೆ 45 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದಿದ್ದಾರೆ.
ಶುಕ್ರವಾರ ಸಂಜೆಯ ವರದಿಯವರೆಗೆ ಜಿಲ್ಲೆಯಲ್ಲಿ ಇದುವರೆಗೆ 164 ಸೋಂಕು ಪ್ರಕರಣಗಳು ದೃಢವಾಗಿದೆ. ಶುಕ್ರವಾರ 15 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಸರಕಾರದ ನೂತನ ನಿಯಮದ ಪ್ರಕಾರ ಕೋವಿಡ್ ಲಕ್ಷಣ ಇಲ್ಲದೇ ಇರುವ ಏಳು ದಿನಕ್ಕಿಂದ ಹೆಚ್ಚಿನ ಚಿಕಿತ್ಸೆ ಪೂರೈಸಿದ ಸೋಂಕಿತರಿಗೆ ನೆಗೆಟಿವ್ ವರದಿಯಾದವರನ್ನು ಇಂದು ಬಿಡುಗಡೆ ಮಾಡಲಾಗಿದೆ. ಅವರು ಮುಂದಿನ ದಿನಗಳಲ್ಲಿ ಮನೆಯಲ್ಲಿ ಎಚ್ಚರದಿಂದ ಇರಬೇಕು, ಸೋಂಕು ಲಕ್ಷಣ ಕಂಡುಬಂದರೆ ತಿಳಿಸಬೇಕು ಎಂದಿದ್ದಾರೆ.
ನಾಗರಿಕರು ಮಾಸ್ಕ್ ಧರಿಸಿದೇ ಓಡಾಡಿದರೆ ಅವರಿಗೆ ದಂಡ ವಿಧಿಸಲಾಗುವುದು. ಇದು ಮರುಕಳಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ