8 ಕೋ.ರೂ. ಕಾಮಗಾರಿ: ಸಚಿವ ಪ್ರಮೋದ್‌ ಚಾಲನೆ


Team Udayavani, Feb 8, 2018, 6:00 AM IST

13.jpg

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ 35  ವಾರ್ಡ್‌ಗಳ ಪೈಕಿ 19 ವಾರ್ಡ್‌ಗಳಲ್ಲಿ ಒಟ್ಟು 8 ಕೋ.ರೂ. ವೆಚ್ಚದ 48 ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸವನ್ನು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬುಧವಾರ ನೆರವೇರಿಸಿದರು.

ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಸಚಿವರು ಗೋಪಾಲಪುರ ವಾರ್ಡ್‌ನಲ್ಲಿ 1.5 ಕೋ.ರೂ. ವೆಚ್ಚದ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ತನ್ನ ಕಾರ್ಯಕ್ರಮಗಳ ಉದ್ಘಾಟನೆ/ಶಿಲಾನ್ಯಾಸ ಸರಣಿಗೆ ಚಾಲನೆ ನೀಡಿದರು. ನೂತನ ಕಾಂಕ್ರೀಟ್‌ ರಸ್ತೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳು ಹೆಚ್ಚಾಗಿದ್ದವು. ಸಂತೆಕಟ್ಟೆಯಲ್ಲಿ 1 ಎಕರೆ ಜಾಗದಲ್ಲಿ 1 ಕೋ.ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ, ಕರಾವಳಿ ಬೈಪಾಸ್‌ನಲ್ಲಿ ಒಣ, ಗೃಹೋಪಯೋಗಿ, ಅಪಾಯಕಾರಿ ಮತ್ತು ಎಲೆಕ್ಟ್ರಾನಿಕ್‌ ತ್ಯಾಜ್ಯ ಸಂಗ್ರಹಣ ಕೇಂದ್ರ ಉದ್ಘಾಟನೆ ಮೊದಲಾದವು ಪ್ರಮುಖ ಕಾಮಗಾರಿಗಳಾಗಿದ್ದವು.

10 ಕೋ.ರೂ. ಬಿಡುಗಡೆ
ಉದ್ಘಾಟನ ಕಾರ್ಯಕ್ರಮದ ಅನಂತರ ಪತ್ರಿಕಾಗೋಷ್ಠಿಯಲ್ಲಿ ಸಚಿವ ಪ್ರಮೋದ್‌ ಮಾತನಾಡಿ, “ಮುಖ್ಯಮಂತ್ರಿಯವರು ಉಡುಪಿ ನಗರಕ್ಕೆ ವಿಶೇಷವಾಗಿ ಬಿಡುಗಡೆ ಗೊಳಿಸಿದ 10 ಕೋ.ರೂ. ಅನು ದಾನ ದಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನಡೆಸಲಾಗುತ್ತಿದೆ. ಉಳಿದ 16 ವಾರ್ಡ್‌ ಗಳಲ್ಲಿ ಉದ್ಘಾಟನೆ ಶೀಘ್ರ ನಡೆಯಲಿದೆ. ನಿಗದಿತ ಅವಧಿಯಲ್ಲಿಯೇ ಕಾಮ ಗಾರಿ ಗಳು ಪೂರ್ಣಗೊಳ್ಳಲಿವೆ. ಚುನಾವಣೆ ಅಥವಾ ಚುನಾವಣ ನೀತಿಸಂಹಿತೆಯನ್ನು ಗಮನ ದಲ್ಲಿಟ್ಟು ಕೊಂಡಿಲ್ಲ. ಜನರ ಬೇಡಿಕೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಮೀನುಗಾರರಿಗೆ ಕೇಂದ್ರ ಸರಕಾರ ನೀಡುತ್ತಿದ್ದ ಸೀಮೆ ಎಣ್ಣೆ ಸಬ್ಸಿಡಿ ಸ್ಥಗಿತಗೊಳಿಸಿದೆ. ರಾಜ್ಯ ಮಾತ್ರ ತನ್ನ ನಿಗದಿತ ಕೋಟಾದ ಸೀಮೆ ಎಣ್ಣೆ ನೀಡುತ್ತಿದೆ’ ಎಂದು ಹೇಳಿದರು.  ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌ ಉಪಸ್ಥಿತರಿದ್ದರು.

ಮಠ ಸರಕಾರೀಕರಣ ಗೊತ್ತಿಲ್ಲ
ಮಠಗಳ ಸರಕಾರೀಕರಣ ಕುರಿತಾದ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಧಾರ್ಮಿಕ ದತ್ತಿ ಕಾಯಿದೆ ಪುನಾರೂಪಿಸುವ ಕುರಿತು ಸುಪ್ರೀಂ ಕೋರ್ಟ್‌ ಸಲಹೆ ನೀಡಿತ್ತು. ಮಠಗಳ ಸರಕಾರೀಕರಣ ಸಂದರ್ಭ ಕಾನೂನು ಮತ್ತು ಜನರ ಭಾವನೆ ಎರಡಕ್ಕೂ ಆದ್ಯತೆ ನೀಡುವ ಅಗತ್ಯವಿದೆ’ ಎಂದು ಹೇಳಿದರು. 

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.