ಹಳ್ಳಿ ಮಕ್ಕಳಿಗೆ ದೂರವಾದ ದೂರದರ್ಶನ ಪಾಠ

ವಿದ್ಯೆ ಕಲಿಸುವುದು ಪೋಷಕರಿಗೂ, ಶಿಕ್ಷಕರಿಗೂ ಸವಾಲು!

Team Udayavani, Jul 29, 2020, 12:27 PM IST

ಹಳ್ಳಿ ಮಕ್ಕಳಿಗೆ ದೂರವಾದ ದೂರದರ್ಶನ ಪಾಠ

ಕಾರ್ಕಳ: ಕೋವಿಡ್‌-19 ಶಿಕ್ಷಣದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಿದ್ದು , ಮಕ್ಕಳಿಗೆ ವಿದ್ಯೆ ಕಲಿಸುವುದು ಹೆತ್ತವರಿಗೆ, ಶಿಕ್ಷಕರಿಗೆ ದೊಡ್ಡ ಸವಾಲಾಗಿದೆ. ಖಾಸಗಿ ಶಾಲೆಗಳಲ್ಲಿ ಆನ್‌ಲೈನ್‌ ಶಿಕ್ಷಣ ಆರಂಭವಾಗಿದೆ. ಗ್ರಾಮಾಂತರದ ಬಡ ಮಕ್ಕಳು ಆನ್‌ಲೈನ್‌ ಕ್ಲಾಸ್‌ನಿಂದ ವಂಚಿತರಾಗಿದ್ದಾರೆ. 8, 9, 10 ನೇ ತರಗತಿ ಮಕ್ಕಳಿಗೆ ದೂರದರ್ಶನ ಡಿಡಿ ಚಂದನದಲ್ಲಿ ಸೇತುಬಂಧ ಮೂಲಕ ಪಾಠ ಹೇಳಿ ಕೊಡಲಾಗುತ್ತಿದೆ. ಮುಂದೆ ಇದನ್ನು ಇತರ ತರಗತಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ.

ಟಿವಿ ಇದ್ದರೂ ಕರೆಂಟಿಲ್ಲ
ಗ್ರಾಮೀಣ ಭಾಗದ ಬಡ ಕುಟುಂಬಗಳ ಎಲ್ಲ ಮನೆಗಳಲ್ಲಿ ಮೊಬೈಲ್‌, ಟಿವಿ ಇರುತ್ತವೆ ಎಂದು ಹೇಳಲಾಗುವುದಿಲ್ಲ. ಟಿವಿ ಇಲ್ಲದ ಮನೆಗಳೂ ಇವೆ. ಸಿಡಿಲಿಗೆ ಕೆಲವರ ಟಿವಿ ಕೆಟ್ಟಿರುತ್ತದೆ. ಕೆಲವರು ನಿಗದಿತವಾಗಿ ರೀಜಾರ್ಜ್‌ ಮಾಡಿಸುವುದೂ ಕಡಿಮೆ. ಇಷ್ಟಿದ್ದರೂ ಕೆಲವು ಸಂದರ್ಭ ಕಾಡಿನ ಮಾರ್ಗದಲ್ಲಿ ವಿದ್ಯುತ್‌ ತಂತಿಗಳ ದೋಷದಿಂದ ಆಗಾಗ್ಗೆ ವಿದ್ಯುತ್‌ ವ್ಯತ್ಯಯಗಳಾಗುತ್ತಿರುತ್ತವೆ. ಕಬ್ಬಿನಾಲೆ, ಕೆರ್ವಾಶೆ, ಬೋಳ, ಸಚ್ಚೇರಿಪೇಟೆ, ಮುನಿಯಾಲು, ಮುಂಡ್ಕೂರು ಸಹಿತ ಕೆಲವು ಹಳ್ಳಿಗಳಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಕಲಿಕೆಗೆ ಅಡ್ಡಿಯಾಗಿದೆ.

ಇಲಾಖೆ ಪ್ರಯತ್ನ
ಸೇತುಬಂಧ ಕಾರ್ಯಕ್ರಮವು ಇಲಾಖೆಯ ವೆಬ್‌ಸೈಟ್‌, ಯೂಟ್ಯೂಬ್‌ಗಳಲ್ಲಿಯೂ ದೊರಕುತ್ತದೆ. ಟಿವಿ ಇಲ್ಲದ ಮನೆಗಳಲ್ಲಿ ಆ್ಯಂಡ್ರಾಯಿಡ್‌ ಇಲ್ಲದಿದ್ದರೂ ಕನಿಷ್ಠ ಕುಟುಂಬದ ಒಬ್ಬ ಸದಸ್ಯನಲ್ಲಿ ಕೀ ಬಟನ್‌ ಮೊಬೈಲ್‌ ಆದರೂ ಇರುತ್ತದೆ. ಮಕ್ಕಳನ್ನು ಶಿಕ್ಷಕರು ತಮ್ಮ ಮೊಬೈಲ್‌ ಮೂಲಕ ಸಂಪರ್ಕಿಸಿ ಅವರನ್ನು ಒಂದು ಕಡೆ ಸೇರಿಸಿ, ಸಾಮಾಜಿಕ ಅಂತರದೊಂದಿಗೆ ಪಾಠ ಮಾಡುವಂತಹ ವ್ಯವಸ್ಥೆಯನ್ನು ಕೂಡ ಶಿಕ್ಷಕರು ಅಗತ್ಯಬಿದ್ದರೆ ಮಾಡುತ್ತಾರೆ ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಕಳ ತಾಲೂಕಿನಲ್ಲಿ 29,435 ಮಕ್ಕಳು
ಕಾರ್ಕಳ ತಾ|ನಲ್ಲಿ 166 ಸರಕಾರಿ ಶಾಲಾ-ಕಾಲೇಜು, 42 ಅನುದಾನಿತ, 37 ಖಾಸಗಿ ಶಾಲೆಗಳಿವೆ. ನವೋದಯ ಸಹಿತ ಇತರ 2 ಶಾಲೆ, ಒಟ್ಟು 247 ಶಾಲಾ-ಕಾಲೇಜು, 29,435 ಮಂದಿ ಮಕ್ಕಳಿದ್ದಾರೆ. ಬಹುತೇಕ ಸರಕಾರಿ ಶಾಲೆಗಳಿರುವುದು ಹಳ್ಳಿಯಲ್ಲಿ. ಆನ್‌ಲೈನ್‌, ದೂರದರ್ಶನ ಶಿಕ್ಷಣ ಈ ಮಕ್ಕಳಿಗೆ ಸರಿಯಾಗಿ ಈಗ ಕೈಗೆಟಕುತ್ತಿಲ್ಲ.

ಈ ವ್ಯವಸ್ಥೆ ಅನಿವಾರ್ಯ
ಕಲಿಕೆಯಲ್ಲಿ ನೇರ ತರಗತಿ ಸಂವಹನಕ್ಕೂ ಆನ್‌ಲೈನ್‌ ತರಗತಿಗೂ ಸರಿಸಾಟಿಯಿಲ್ಲ ಎನ್ನುವುದು ನಿಜ. ಎದುರು ಬದುರಿನ ಪಾಠದ ಸಂವಹನ ಶಕ್ತಿಯುತವಾಗಿರುತ್ತದೆ. ಕೊರೊನಾದಂತಹ ಸಂದಿಗ್ಧ ಸ್ಥಿತಿಯಲ್ಲಿ ಈ ವ್ಯವಸ್ಥೆ ಅನಿವಾರ್ಯವಾಗಿದೆ.
-ಜಿ.ಎಸ್‌. ಶಶಿಧರ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಕಳ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.