90 ಟನ್‌ ತ್ಯಾಜ್ಯ ಸಂಗ್ರಹಿಸಿದ ಫ್ಲೋಟಿಂಗ್‌ ಟ್ರ್ಯಾಶ್‌ ಬ್ಯಾರಿಯರ್‌


Team Udayavani, Jul 8, 2023, 4:15 PM IST

90 ಟನ್‌ ತ್ಯಾಜ್ಯ ಸಂಗ್ರಹಿಸಿದ ಫ್ಲೋಟಿಂಗ್‌ ಟ್ರ್ಯಾಶ್‌ ಬ್ಯಾರಿಯರ್‌

ಉಡುಪಿ: ತ್ಯಾಜ್ಯ ವಿಲೇವಾರಿ, ಪರಿಸರ ಸಂರಕ್ಷಣೆ ಬಗ್ಗೆ ಅದೆಷ್ಟೇ ಜಾಗೃತಿ ಮೂಡಿಸಿದರೂ ಅನಾಗರಿಕ ವರ್ತನೆ ನಿಂತಿಲ್ಲ. ಇದಕ್ಕೆ ಉದಾಹರಣೆ ಇಂದ್ರಾಣಿ ನದಿಗೆ ಅಳವಡಿಸಿರುವ ಫ್ಲೋಟಿಂಗ್‌ ಟ್ರ್ಯಾಶ್‌ ಬ್ಯಾರಿಯರ್‌ (ಎಫ್ಟಿಬಿ) ಕಳೆದ ಎರಡು ವರ್ಷಗಳಲ್ಲಿ 90 ಟನ್‌ಗೂ ಅಧಿಕ ತ್ಯಾಜ್ಯವನ್ನು ಸಂಗ್ರಹಿಸಿರುವುದು.

ಕೊಡವೂರು ಸಮೀಪ ಇಂದ್ರಾಣಿ ನದಿ ಹರಿಯುವ ಕಾಲುವೆಗೆ 2021ರಲ್ಲಿ ಎಫ್ಟಿಬಿ ಅಳವಡಿಸಲಾಗಿದ್ದು, ನದಿಯಿಂದ ಸಮುದ್ರ ಸೇರುವ ಸಾಕಷ್ಟು ತ್ಯಾಜ್ಯ ತಡೆಯಲು ಈ ವ್ಯವಸ್ಥೆ ಸಹಕಾರಿಯಾಗಿದೆ.

ಇಂದ್ರಾಣಿ ನದಿಗೆ ಎಸೆಯುವ ಪ್ಲಾಸ್ಟಿಕ್‌ ಬಾಟಲಿ, ಪ್ಲಾಸ್ಟಿಕ್‌ ಬ್ಯಾಗ್‌, ದೇವರ ಫೋಟೋ, ಮನೆಯ ಪ್ಲಾಸ್ಟಿಕ್‌ ಉಪಕರಣಗಳು, ಆಟಿಕೆಗಳು, ಮದ್ಯದ ಬಾಟಲಿ, ಹಳೆಯ ಬಟ್ಟೆಗಳು ಇಲ್ಲಿ ಸಂಗ್ರಹವಾಗುತ್ತಿವೆ. ಜನರು ನಗರದ ಹಲವೆಡೆ ಎಸೆದ ತ್ಯಾಜ್ಯಗಳು ನೀರಿನ ಜತೆಗೆ ಸೇರಿ ಹರಿದುಕೊಂಡು ಸಾಗುತ್ತದೆ. ಟ್ರ್ಯಾಶ್‌ ಬ್ಯಾರಿಯರ್‌ ವ್ಯವಸ್ಥೆ ಅಳವಡಿಸಿರುವುದರಿಂದ ತ್ಯಾಜ್ಯ ಮುಂದಕ್ಕೆ ಚಲಿಸದೆ ಇಲ್ಲಿ ಶೇಖರಣೆಯಾಗುತ್ತದೆ.

ಜಲಮೂಲ ಸಂರಕ್ಷಣೆಗೆ ಎನ್‌ಜಿಟಿ ನಿರ್ದೇಶನ
ಸರಕಾರ, ಸ್ಥಳೀಯಾಡಳಿತ ಸಂಸ್ಥೆಗಳು ಸಮುದ್ರ, ನದಿ, ಕೆರೆ ಸಹಿತ ವಿವಿಧ ಜಲಮೂಲಗಳ ಸಂರಕ್ಷಣೆ ಮತ್ತು ತ್ಯಾಜ್ಯಗಳು ಜಲಮೂಲಗಳಿಗೆ ಸೇರದಂತೆ ಈ ರೀತಿ ವ್ಯವಸ್ಥೆ ಅಳವಡಿಸಿಕೊಳ್ಳಲು ರಾಷ್ಟ್ರೀಯ ಹಸಿರು ಪೀಠ ನಿರ್ದೇಶನ ಮತ್ತು ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಉಡುಪಿ ನಗರಸಭೆ ವತಿಯಿಂದ ಪ್ರಾಯೋಗಿಕ ಯೋಜನೆಯಾಗಿ 2021ರಲ್ಲಿ ಟ್ರ್ಯಾಶ್‌ ಬ್ಯಾರಿಯರ್‌ ಅಳವಡಿಸಲಾಗಿದ್ದು, ಇಲ್ಲಿ ಯಶಸ್ವಿಯಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಸಣ್ಣ ಮಾದರಿಯಲ್ಲಿ ಟ್ರ್ಯಾಶ್‌ ಬ್ಯಾರಿಯರ್‌ ಅಳವಡಿಸುವ ಬಗ್ಗೆ ನಗರಸಭೆ ಚಿಂತಿಸಿದೆ.

ಜಲ ಜೀವ ವೈವಿಧ್ಯತೆಗೆ ಆಪತ್ತು
ಇಂದ್ರಾಣಿ ನದಿ ಮೂಲಕ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ನದಿ, ಸಮುದ್ರ ಸೇರಿ ಜಲ ಜೀವ ವೈವಿಧ್ಯತೆ ಕಂಟಕವಾಗಿ ಪರಿಣಮಿಸುತ್ತಿತ್ತು. ಇದಲ್ಲದೆ ಬೇರೆ ಮೂಲಗಳ ಮೂಲಕವು ತ್ಯಾಜ್ಯವು ಜಲಮೂಲವನ್ನು ಕೆಡಿಸುತ್ತಿದೆ.

ಏನಿದು ಎಫ್ಟಿಬಿ ?
ಜಲಮೂಲಗಳಲ್ಲಿ ತ್ಯಾಜ್ಯ ಹರಡದಂತೆ ಎಫ್ಟಿಬಿ ಕಾರ್ಯನಿರ್ವಹಿಸುತ್ತದೆ. ಸ್ವತ್ಛ ಭಾರತ್‌ ಮಿಷನ್‌ ಯೋಜನೆ ಅಡಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ನದಿಗಳಲ್ಲಿ ಘನತ್ಯಾಜ್ಯ ಮಾಲಿನ್ಯದ ಗಂಭೀರ ಪರಿಸರ ಸಮಸ್ಯೆ ಪರಿಹರಿಸುವಲ್ಲಿ ಈ ವ್ಯವಸ್ಥೆ ಪರಿಣಾಮಕಾರಿಯಾಗಲಿದೆ ಎಂಬುದನ್ನು ತಿಳಿಸಿತ್ತು. ನದಿ, ಕಾಲುವೆಗಳಲ್ಲಿ ತೇಲುವ ತ್ಯಾಜ್ಯವನ್ನು ಸಂಗ್ರಹಿಸುತ್ತದೆ. ಎರಡು ಕಡೆಗಳಲ್ಲಿ ಕಬ್ಬಿಣದ ಪಿಲ್ಲರ್‌ ಅಳವಡಿಸಿ ಟ್ರ್ಯಾಶ್‌ ಬ್ಯಾರಿಯರ್‌ ನಿರ್ಮಿಸಲಾಗುತ್ತದೆ. 3.5 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದ್ದು, ವಾರಕ್ಕೊಮ್ಮೆ ಇದರಿಂದ ತ್ಯಾಜ್ಯವನ್ನು ಪೌರಕಾರ್ಮಿಕರು ವಿಲೇವಾರಿಗೊಳಿಸುತ್ತಾರೆ.

ಫ್ಲೋಟಿಂಗ್‌ ಟ್ರ್ಯಾಶ್‌ ಬ್ಯಾರಿಯರ್‌ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, ಕಾರ್ಯಕ್ಷಮತೆ ಉತ್ತಮವಾಗಿದೆ. ಕಳೆದ ಎರಡು ವರ್ಷದಿಂದ ಇಲ್ಲಿಯವರೆಗೆ ವಾರಕ್ಕೆ ಒಂದರಿಂದ ಒಂದೂವರೆ ಟನ್‌ ತೇಲುವ ತ್ಯಾಜ್ಯವನ್ನು ಇಲ್ಲಿಂದ ಸಂಗ್ರಹಿಸಲಾಗುತ್ತದೆ. ಪ್ರಸ್ತುತ ಮಳೆಗಾಲ ನೀರಿನ ಸೆಳೆತ ಹೆಚ್ಚಿರುವುದರಿಂದ ತ್ಯಾಜ್ಯವನ್ನು ಅಲ್ಲಿಂದ ತೆರವು ಮಾಡಿರಲಿಲ್ಲ. ನಾಲ್ಕು ದಿನಗಳ ಹಿಂದೆ ಅಲ್ಲಿನ ತ್ಯಾಜ್ಯವನ್ನು ಸಂಪೂರ್ಣ ತೆರವು ಮಾಡಲಾಗಿದೆ. ಈ ತ್ಯಾಜ್ಯ ವಿಂಗಡಿಸಿ ಮರು ಬಳಕೆ ಪ್ರಕ್ರಿಯೆಗೆ ನೀಡಲಾಗುತ್ತದೆ.
-ಸ್ನೇಹಾ, ಪರಿಸರ ಎಂಜಿನಿಯರ್‌,
ಉಡುಪಿ ನಗರಸಭೆ

-ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.