10 ಕೆ.ಜಿ. ಗಾಂಜಾ ಸಹಿತ ಓರ್ವನ ಸೆರೆ
Team Udayavani, Dec 22, 2019, 12:55 AM IST
ಉಡುಪಿ: ಇಲ್ಲಿನ ಕಲ್ಪನಾ ಲಾಡ್ಜ್ ಬಿಲ್ಡಿಂಗ್ ಬಳಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿ 10.600 ಕೆ.ಜಿ. ಗಾಂಜಾ ಸಹಿತ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ ನಗರದ ವಿನೋದ್ ರಾಮ್ಸೇವಕ್ ಯಾದವ್ (36) ಬಂಧಿತ ಆರೋಪಿ. ಈತನು 10.600 ಕೆ.ಜಿ. ಗಾಂಜಾವನ್ನು ವಶದಲ್ಲಿಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆತನಿಂದ ಗಾಂಜಾ, 2 ಮೊಬೈಲ್, ನಗದು ಸಹಿತ ಸುಮಾರು 3,23,300 ರೂ. ಮೊತ್ತದ ಸೊತ್ತು ವಶಕ್ಕೆ ಪಡೆದುಕೊಳ್ಳಲಾಗಿದೆ. ಎಸ್ಪಿ ನಿಶಾ ಜೇಮ್ಸ್ ಮಾರ್ಗದರ್ಶನದಲ್ಲಿ ಡಿಸಿಐಬಿ ಎಎಸ್ಐ ರವಿ ಚಂದ್ರ, ಸಿಬಂದಿ ವರ್ಗದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ, ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಅವರು ಕಾರ್ಯಾಚರಣೆ ನಡೆಸಿದ್ದರು.
ನಗದು ಬಹುಮಾನ ಘೋಷಣೆ
ಬೃಹತ್ ಪ್ರಮಾಣದ ಗಾಂಜಾವನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿರುವ ಈ ತಂಡಕ್ಕೆ ಎಸ್ಪಿ ನಿಶಾ ಜೇಮ್ಸ್ ಅವರು 20 ಸಾ.ರೂ. ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ