ಉಡುಪಿಯಲ್ಲಿ ಪೈಲಟ್‌ ಯೋಜನೆ; ತಂಬಾಕು ಮುಕ್ತ ಅಪಾರ್ಟ್‌ಮೆಂಟ್‌


Team Udayavani, Sep 13, 2022, 3:43 PM IST

14

ಉಡುಪಿ: ನಗರದ ಅಪಾರ್ಟ್‌ಮೆಂಟ್‌ ಗಳಲ್ಲಿ ತಂಬಾಕು ಉತ್ಪನ್ನ ಬಳಸುವುದನ್ನು ಅಪಾರ್ಟ್‌ ಮೆಂಟ್‌ ನಿವಾಸಿಗಳೇ ಸ್ವಯಂ ಪ್ರೇರಣೆಯಿಂದ ನಿರ್ಬಂಧಿಸಿ, ತಂಬಾಕು ಮುಕ್ತ ವಸತಿ ಸಮುಚ್ಚಯವನ್ನಾಗಿ ನಿರ್ಮಿಸಬಹುದಾದ ಪ್ರಾಯೋಗಿಕ ಯೋಜನೆಯನ್ನು ಜಿಲ್ಲೆಯಲ್ಲಿ ಪೈಲೆಟ್‌ ಯೋಜನೆಯಾಗಿ ರಾಜ್ಯ ಸರಕಾರ ಕೈಗೊಂಡಿದೆ.

ತಂಬಾಕು ಉತ್ಪನ್ನಗಳನ್ನು ಪ್ರತ್ಯಕ್ಷವಾಗಿ ಬಳಸುವ ಜನರು ಅದರ ಪ್ರಾಥಮಿಕ ಬಳಕೆದಾರರಾದರೆ ಅವರ ಸಮೀಪದವರು ಪರೋಕ್ಷವಾಗಿ ಎರಡನೇ ಬಳಕೆದಾರರಾಗಿತ್ತಾರೆ. ಪ್ರತೀ ವರ್ಷ ವಿಶ್ವದ ಪ್ರಮುಖ ನಗರಗಳಲ್ಲಿ ಸಂಭವಿಸುವ ತಡೆಯಬಹುದಾದ ಸಾವುಗಳ ಪ್ರಮಾಣದಲ್ಲಿ ಇವರಿಗೆ 2ನೇ ಸ್ಥಾನವಾಗಿದೆ. ಬಳಕೆದಾರರಿಗಿಂತಲೂ ಹೆಚ್ಚಿನ ಕಾಯಿಲೆಗಳು ಇವರಲ್ಲಿ ಕಾಣಿಸಿಕೊಳ್ಳುತ್ತವೆ. ಧೂಮಪಾನದಿಂದ 10 ಲಕ್ಷ ಸಾವುಗಳು ಸಂಭವಿಸಿದರೆ ಅದರಲ್ಲಿ 2 ಲಕ್ಷ ಮಂದಿ ಎರಡನೇ ಬಳಕೆದಾರರು ಆಗಿರುತ್ತಾರೆ. ಭಾರತದಲ್ಲಿ ಕಂಡುಬರುವ ಕ್ಯಾನ್ಸರ್‌ ಪ್ರಕರಣಗಳಲ್ಲಿ ಶೇ. 27 ರಷ್ಟು ತಂಬಾಕು ಬಳಕೆ ಕಾರಣವಾಗಿದೆ. ತಂಬಾಕು ಮತ್ತು ಧೂಮಪಾನ ಉತ್ಪನ್ನಗಳ ನೇರ ಸೇವನೆಯಿಂದ ಮೃತಪಡುವವರಿಗಿಂತ, ಇವುಗಳನ್ನು ಬಳಸುವ ಬಳಕೆದಾರರ ಕುಟುಂಬದವರು ಮತ್ತು ಸಮೀಪವರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಾರೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಇದನ್ನು ತಪ್ಪಿಸಲು ತಂಬಾಕು ಮತ್ತು ಧೂಮಪಾನ ಬಳಕೆ ವಿರುದ್ಧ ಹಲವು ನಿರ್ಬಂಧಗಳನ್ನು ವಿಧಿಸಿದ್ದರೂ ಸಹ ಇದರ ನಿರೀಕ್ಷಿತ ಪ್ರಮಾಣ ಕಡಿಮೆಯಾಗಿಲ್ಲ.

ಪ್ರಾಯೋಗಿಕ ಅನುಷ್ಠಾನ

ಉಡುಪಿ- ಮಣಿಪಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಬಂದ ಕುಟುಂಬಗಳು, ವಿದ್ಯಾರ್ಥಿಗಳು, ನೌಕರರು ವಾಸ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಸಮುಚ್ಚಯಗಳಲ್ಲಿ ತಂಬಾಕು ಮತ್ತು ಧೂಮಪಾನ ಮುಕ್ತ ಗೊಳಿಸುವಂತಹ ಚಟುವಟಿಕೆಗಳು ನಡೆದಿರುವುದು ಕಂಡುಬಂದಿಲ್ಲ. ಆದ್ದರಿಂದ ಇಲ್ಲಿನ ವಸತಿ ಸಮುಚ್ಚಯಗಳನ್ನು ತಂಬಾಕು ಮುಕ್ತ ಸಮುಚ್ಚಯಗಳನ್ನಾಗಿ ಮಾರ್ಪಡಿಸುವುದರ ಬಗ್ಗೆ ಪೈಲಟ್‌ ಯೋಜನೆ ರೂಪಿಸಿ ಯಶಸ್ವಿಯಾದಲ್ಲಿ ಈ ಯೋಜನೆಯನ್ನು ರಾಜ್ಯಕ್ಕೆ ವಿಸ್ತರಿಸುವ ಉದ್ದೇಶವಿದೆ. ಜಿಲ್ಲಾ ಸರ್ವೇಕ್ಷಣ ಘಟಕದಿಂದ ಜಿಲ್ಲೆಯಲ್ಲಿ ಈ ಪ್ರಾಯೋಗಿಕ ಯೋಜನೆ ಅನುಷ್ಠಾನಗೊಳ್ಳಲಿದ್ದು, ವಸತಿ ಸಮುಚ್ಚಯಗಳ ಸಮೀಕ್ಷಾ ಕಾರ್ಯ ಮತ್ತು ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅಪಾರ್ಟ್‌ಮೆಂಟ್‌ ಧೂಮಪಾನಿಗಳ ಸಮೀಕ್ಷೆ

ತಂಬಾಕು ಮುಕ್ತ ಅಪಾರ್ಟ್‌ ಮೆಂಟ್‌ ಯೋಜನೆಯಿಂದ ವಸತಿ ಸಮುಚ್ಚಯ ಗಳಲ್ಲಿನ ನಾಗರಿಕರಿಗೆ ಧೂಮಪಾನ ರಹಿತ ಶುದ್ಧಗಾಳಿಯ ಸೇವನೆ ಜತೆಗೆ ತಂಬಾಕು ಉತ್ಪನ್ನಗಳ ಎರಡನೇ ಬಳಕೆ ದಾರರುಗಳನ್ನಾಗುವುದನ್ನು ತಪ್ಪಿಸ ಬಹುದಾಗಿದೆ. ಅವರಿಗೆ ಆರೋಗ್ಯವಂತ ಜೀವನ ನಡೆಸಲು ಅನುವು ಮಾಡಿಕೊಡಲು ತಂಬಾಕು ಮುಕ್ತ ವಸತಿ ಸಮುಚ್ಚಯದ ನಿರ್ಮಾಣವಾಗಲಿದೆ. ಸಮುಚ್ಚಯದಲ್ಲಿರುವ ನಿವಾಸಿಗಳ ಸಮೀಕ್ಷೆ ನಡೆಸಿ ಅವರಲ್ಲಿ ಧೂಮಪಾನ ಮತ್ತು ತಂಬಾಕು ಬಳಸುವವರ ಮತ್ತು ಬಳಸದೆ ಇರುವವರ ಪಟ್ಟಿ ಮಾಡಿ, ಅವರಿಗೆ ತಮ್ಮ ಮನೆಗಳಲ್ಲಿ ಧೂಮಪಾನ ಮುಕ್ತಗೊಳಿಸುವ ಕುರಿತು ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತದೆ.

ಯಶಸ್ವಿ ಅನುಷ್ಠಾನಕ್ಕೆ ಸಿದ್ಧತೆ: ಜಿಲ್ಲೆಯಲ್ಲಿ ಈಗಾಗಲೇ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದೆ. ಕಾರ್ಕಳದ ರೆಂಜಾಳ ಮತ್ತು ಕುಂದಾಪುರದ ಕೊರ್ಗಿ ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳನ್ನು ಸಹ ತಂಬಾಕು ಮುಕ್ತ ಕಚೇರಿಗಳೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಂಡು ದೃಢೀಕರಣ ಪತ್ರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರಾಜ್ಯ ಸರಕಾರ ಸೂಚಿಸಿರುವ ತಂಬಾಕು ಮುಕ್ತ ವಸತಿ ಸಮುಚ್ಚಯದ ಪೈಲಟ್‌ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯನಿರ್ವಹಿಸಲಾಗುವುದು. –ಡಾ| ನಾಗರತ್ನಾ, ಸರ್ವೇಕ್ಷಣಾಧಿಕಾರಿ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.