ಶ್ರೀಕೃಷ್ಣ ಮಠಕ್ಕೆ ಪಾರಂಪರಿಕ ಹೊಸ ರೂಪ

ಆರು ತಿಂಗಳ ಬಳಿಕ ಸೆ. 28ರಿಂದ ಭಕ್ತರ ಆಗಮನಕ್ಕೆ ಶ್ರೀಮಠ ಮುಕ್ತ

Team Udayavani, Sep 24, 2020, 6:25 AM IST

ಶ್ರೀಕೃಷ್ಣ ಮಠಕ್ಕೆ ಪಾರಂಪರಿಕ ಹೊಸ ರೂಪ

ಕನಕ ಮಂಟಪದಿಂದ ಕಾಣಿಸುವ ಮುಖ್ಯಪ್ರಾಣ ದೇವರ ಗುಡಿ ಎದುರು ನಿರ್ಮಿಸಲಾದ ಹೆಂಚಿನ ಛಾವಣಿ.

ಉಡುಪಿ: ಶ್ರೀಕೃಷ್ಣ ಮಠವು 6 ತಿಂಗಳ ಬಂದ್‌ ಬಳಿಕ ಭಕ್ತರ ಪ್ರವೇಶಕ್ಕೆ ಸಿದ್ಧವಾಗಿದೆ. ಪರ್ಯಾಯ ಪೂಜಾದೀಕ್ಷೆಯಲ್ಲಿರುವ ಯುವ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಈ ಆರು ತಿಂಗಳ ಅವಧಿಯನ್ನು ಮಠದಲ್ಲಿ ಹಲವು ನಾಜೂಕಿನ ಪರಿವರ್ತನೆಗಳನ್ನು ತರಲು ಅವಕಾಶವಾಗಿ ಬಳಸಿಕೊಂಡಿದ್ದಾರೆ.

ಶ್ರೀಕೃಷ್ಣ ಮಠದ ಭೋಜನ ಶಾಲೆ, ಬಡಗುಮಾಳಿಗೆಗೆ ನೈಸರ್ಗಿಕ ಬಣ್ಣವನ್ನು ಕೊಡಲಾಗಿದೆ. ಮಾರ್ಚ್‌ಗೆ ಮೊದಲೇ ಭಕ್ತರು ದರ್ಶನಕ್ಕೆ ತೆರ ಳುವ ಮಾರ್ಗವನ್ನು ಬದಲಾಯಿಸಲಾಗಿತ್ತು. ರಾಜಾಂಗಣ ಪ್ರವೇಶದಿಂದಲೇ ಭೋಜನ ಶಾಲೆಯ ಮೇಲೇರಿ, ಅಲ್ಲಿಂದ ಕೃಷ್ಣಮಠದ ಗರ್ಭಗುಡಿ ಪ್ರವೇಶಿಸುವುದು ಹೊಸ ಮಾರ್ಗವಾಗಿದೆ.

ವಿಶೇಷ ಅನುಭವ
ಈ ದಾರಿಯಿಂದ ಸಾಗುವಾಗ ಪ್ರಾಚೀನ ಪರಂಪರೆಗೆ ತೆರಳಿದ ಅನುಭವವಾಗುತ್ತದೆ. ಗಾಳಿ-ಬೆಳಕು ಧಾರಾಳ ಸಿಗುತ್ತದೆ. ದೇವರ ದರ್ಶನಕ್ಕೆ ಇಳಿಯುವ ಮೊದಲೇ ಮೇಲ್ಭಾಗದಲ್ಲಿ ಗರ್ಭಗುಡಿಗೆ ಕಳೆದ ವರ್ಷ ಹೊದೆಸಿದ ಸ್ವರ್ಣ ಗೋಪುರವನ್ನು ವೀಕ್ಷಿಸಬಹುದು.

ಕೆಳಗೆ ಇಳಿದು ದೇವರ ದರ್ಶನ ಮಾಡಿ ಮುಖ್ಯಪ್ರಾಣನ ದರ್ಶನದ ಬಳಿಕ ಅಲ್ಲಿಯೇ ಮೇಲೇರಿ ಹೋಗಲು ಅವಕಾಶ ಕಲ್ಪಿಸಲಾಗಿದೆ. ಮೇಲ್ಭಾಗದಲ್ಲಿ ಬರುವುದು ಮತ್ತು ಹೋಗುವುದು ಎರಡನ್ನೂ ಸೇರಿಸಿದರೆ ಒಂದು ಪ್ರದಕ್ಷಿಣೆ ಬಂದಂತಾಗುತ್ತದೆ. ಭೋಜನ ಶಾಲೆಯ ಮುಖ್ಯ
ಪ್ರಾಣನ ಹೊರಭಾಗದಲ್ಲಿ ಕರಾವಳಿಯ ಸೊಗಡಾದ ಹೆಂಚಿನ ಮಾಡನ್ನು, ಮಧ್ವ ಸರೋವರದ ಮೆಟ್ಟಿಲ ಮೇಲೆ ಬೈಹುಲ್ಲಿನ ಮಾಡನ್ನು ನಿರ್ಮಿಸಲಾಗಿದೆ. ಸೆ. 28ರಿಂದ ಭಕ್ತರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತಿದೆ. ಸದ್ಯ ಅಪರಾಹ್ನ 2ರಿಂದ ಸಂಜೆ 5ರ ವರೆಗೆ ಮಾತ್ರ ಪ್ರವೇಶಾವಕಾಶವಿದೆ. ಪರಿಸ್ಥಿತಿ ಗಮನಿಸಿ ಇತರ ವ್ಯವಸ್ಥೆ ಮಾಡುವುದಾಗಿ ಪರ್ಯಾಯ ಅದಮಾರು ಮಠದ ಆಡಳಿತ ಮಂಡಳಿ ತಿಳಿಸಿದೆ.

ಹಳೆ ಬೇರು-ಹೊಸ ಚಿಗುರು
ಶ್ರೀ ಅದಮಾರು ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವಪ್ರಿಯತೀರ್ಥರ ಮಾರ್ಗದರ್ಶನದಲ್ಲಿ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥರು ಹಲವು ಹೊಸ ಯೋಚನೆಗಳನ್ನು ಕಾರ್ಯರೂಪಕ್ಕೆ ಇಳಿಸುತ್ತಿದ್ದಾರೆ. ಮಠಕ್ಕೆ ಬೇಕಾಗುವ ಬಾಳೆ ಎಲೆಗಳನ್ನು ಸ್ಥಳೀಯ ಕೃಷಿಕರಿಂದ ಪಡೆಯುವ ಪ್ರಯತ್ನಕ್ಕೆ ಬಾಳೆ ಮುಹೂರ್ತ ದಲ್ಲಿಯೇ ಚಾಲನೆ ನೀಡಲಾಗಿತ್ತು. ಕೃಷಿಕರು ಗದ್ದೆಗಳನ್ನು ಪಾಳುಬಿಡುವ ಬದಲು ವ್ಯವಸಾಯ ಮಾಡಬೇಕೆಂಬ ಆಶಯದಿಂದ ಹಲವರಿಗೆ ಪ್ರೋತ್ಸಾಹ ನೀಡಲಾಗಿದೆ. ನೇಕಾರಿಕೆಗೆ ಪ್ರೋತ್ಸಾಹ ಕೊಡುವ ದೃಷ್ಟಿ ಯಿಂದ ಕೈಮಗ್ಗದ ಶಾಲುಗಳನ್ನು ಖರೀದಿಸ ಲಾಗುತ್ತಿದೆ. ಇದೇ ಮೊದಲ ಬಾರಿ ಕೈಮಗ್ಗದ ಸೀರೆಯನ್ನು ಶುಕ್ರವಾರದ ದೇವರ ಅಲಂಕಾರಕ್ಕೆ ಬಳಸಲಾಯಿತು. ಅದಮಾರು ಮಠದಲ್ಲಿ ನೀರಿಂಗಿಸುವಿಕೆ, ಗೋಡೆಗಳಿಗೆ ನೈಸರ್ಗಿಕ ಬಣ್ಣವನ್ನು ಪರ್ಯಾಯದ ಮೊದಲೇ ನಿರ್ವಹಿಸಲಾಗಿತ್ತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.