“ಪರಿಸರಕ್ಕೆ ಹಾನಿಯಾಗದಂತೆ ಕಾರ್ಯ ನಿರ್ವಹಿಸಿ’
ಕಾರ್ಕಳ: ಸಚಿವರಿಂದ ಹವಾಲ್ದಾರಬೆಟ್ಟು ಮ್ಯಾನೇಜ್ಮೆಂಟ್ ಘಟಕ ಪರಿಶೀಲನೆ
Team Udayavani, Sep 26, 2021, 3:01 AM IST
ಕಾರ್ಕಳ: ಪುರಸಭೆ ವ್ಯಾಪ್ತಿಯ ಹವಾಲ್ದಾರಬೆಟ್ಟು ತ್ಯಾಜ್ಯ ಶುದ್ಧೀಕರಣ ಟ್ರೀಟ್ಮೆಂಟ್ ಪ್ಲಾಂಟ್ ಅನ್ನು ಹೊಸ ತಂತ್ರಜ್ಞಾನ ಬಳಸಿಕೊಂಡು ಯಾವುದೇ ಲೋಪವಾಗದಂತೆ, ಪರಿಸರಕ್ಕೂ ಹಾನಿಯಾಗದಂತೆ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಇಂಧನ ಸಚಿವ ವಿ. ಸುನಿಲ್ಕುಮಾರ್ ಸೂಚನೆ ನೀಡಿದರು.
ಪುರಸಭೆ ವ್ಯಾಪ್ತಿಯ ಹವಾಲ್ದಾರಬೆಟ್ಟು ಒಳಚರಂಡಿ ತ್ಯಾಜ್ಯ ವಿಲೇವಾರಿ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಘಟಕದ ಕಾಮಗಾರಿ ವೀಕ್ಷಿಸಿದರು.
ಮಾನವ ತ್ಯಾಜ್ಯ ಇನ್ನಿತರ ಕಲ್ಮಶ ನೀರು ಸಂಗ್ರಹಿಸಿ, ಶುದ್ಧೀಕರಿಸುವ ಟ್ರೀಟ್ಮೆಂಟ್ ಪ್ಲಾಂಟ್ನಿಂದ ನೀರನ್ನು ಎಲ್ಲಿಗೆ ಬಿಡಲಾಗುತ್ತದೆ. ಅದರಿಂದ ಪರಿಸರಕ್ಕೆ ದುಷ್ಪರಿಣಾಮ ಬೀರದಂತೆ ಘಟಕ ಯಾವ ರೀತಿ ಕೆಲಸ ಮಾಡುತ್ತದೆ ಎಂದು ಎಂಜಿನಿಯರ್ ಅವರಿಂದ ಮಾಹಿತಿ ಪಡೆದುಕೊಂಡರು. ಮೈಕ್ರೋ ಬ್ಯಾಕ್ಟೀರಿಯ, ಏರ್ ವ್ಯವಸ್ಥೆಗಳಿಂದ ಶುದ್ಧೀಕರಿಸಿ ನೀರನ್ನು ವ್ಯವಸ್ಥಿತ ರೂಪದಲ್ಲಿ ಹೊರ ಬಿಡುವ ವ್ಯವಸ್ಥೆ ಗಳ ಬಗ್ಗೆ ಎಂಜಿನಿಯರ್ ಮಾಹಿತಿ ನೀಡಿದರು.
ಇದನ್ನೂ ಓದಿ:ತಂದೆ ಹತ್ಯೆ ಮಾಡಿ ಜೈಲು ಪಾಲಾದ ಮಗ:ಅನಾಥಾಶ್ರಮ ಸೇರಿದ ಬುದ್ದಿಮಾಂದ್ಯ ಮಕ್ಕಳು:ತಾಯಿ ಪಾಡು?
ಎಂಜಿನಿಯರ್ ರಕ್ಷಿತ್ ಘಟಕದ ಕುರಿತು ಮಾಹಿತಿ ನೀಡಿದರು. ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಉಪಾಧ್ಯಕ್ಷೆ ಪಲ್ಲವಿ, ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಪುರಸಭೆ ಎಂಜಿನಿಯರ್ ಸೋಮಶೇಖರ್, ಆರೋಗ್ಯ ಅಧೀಕ್ಷಕಿ ಲೈಲಾ ಥಾಮಸ್, ಪುರಸಭೆ ಸದಸ್ಯರಾದ ಯೋಗೀಶ್ ದೇವಾಡಿಗ, ನೀತಾ ಆಚಾರ್ಯ, ಶಶಿಕಲಾ ಶೆಟ್ಟಿ, ಮೀನಾಕ್ಷಿ ಗಂಗಾಧರ್, ಭಾರತಿ ಅಮೀನ್, ಪ್ರದೀಪ್ ಕುಮಾರ್, ಪ್ರವೀಣ್ ಶೆಟ್ಟಿ, ನಾಮನಿರ್ದೇಶಿತ ಸದಸ್ಯರಾದ ಸಂತೋಷ್ ರಾವ್, ಪ್ರಸನ್ನ, ಘಟಕದ ಸೂಪರ್ವೈಸರ್ ಕಮಲಾಕ್ಷ, ಪುರಸಭೆ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ