ಕರಾವಳಿ ಕಲೆಗೆ ಮೆರುಗು ನೀಡಿದ ನಟ ರಮೇಶ್ ಅರವಿಂದ್
Team Udayavani, Oct 13, 2022, 9:08 AM IST
ಉಡುಪಿ: ಮೊತ್ತ ಮೊದಲ ಬಾರಿಗೆ ಯಕ್ಷಗಾನದ ವೇಷ ತೊಟ್ಟ ನನ್ನಲ್ಲೀಗ ದಿವ್ಯತೆಯ ಭಾವ ಬೆಳೆದಿದೆ. ಎಂಟಡಿ ಎತ್ತರ, ನೂರೈವತ್ತು ಕೆ.ಜಿ. ಬೆಳೆದವನಂತೆ ಅನಿಸುತ್ತಿದೆ. ನಾನಿವತ್ತು ಬಹಳವೇ ಶಕ್ತಿ ಶಾಲಿ, ಎದುರಿಗೇನಾದರೂ ರಾಕ್ಷಸರು ಬಂದರೆ ಹೊಡೆದುರುಳಿಸಿ ಬಿಡುತ್ತೇನೆ ಅನ್ನುವಷ್ಟು ಆತ್ಮ ವಿಶ್ವಾಸ ಬೆಳೆಯುತ್ತಿದೆ ಎಂದು ಚಿತ್ರ ನಟ ಡಾ| ರಮೇಶ್ ಅರವಿಂದ್ ಯಕ್ಷಗಾನ ವೇಷ ಧರಿಸಿ ಹೇಳಿದರು.
ರಮೇಶ್ ಅರವಿಂದ್ ಅವರು ಯಕ್ಷಗಾನದ ಬಣ್ಣ ಹಚ್ಚಿದ್ದು ಕೆಮ್ಮಣ್ಣು ಹೋಮ್ ಸ್ಟೇ ಒಂದರಲ್ಲಿ. ಆದರೆ ಇದು ಸಿನೆಮಾಕ್ಕಾಗಿ ಅಲ್ಲ. ಫೋಟೋ ಶೂಟ್ಗಾಗಿ! ಪ್ರಶಸ್ತಿ ಪಡೆಯಲು ಹೋಗಿದ್ದಾಗ ಕೋಟ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಕಾರಂತರು ಸ್ವತಃ ಯಕ್ಷಗಾನ ವೇಷ ಹಾಕಿದ್ದ ಚಿತ್ರ ಕಂಡು ರೋಮಾಂಚಿತನಾದೆ. ಅವರೊಂದು ಬತ್ತದ ಕುತೂಹಲ. ಯಕ್ಷಗಾನ ಕಲಾವಿದರಿಗೆ ಪ್ರತ್ಯೇಕ ಮೇಕಪ್ ಕಲಾವಿದರು ಇರುವುದಿಲ್ಲ. ಸ್ವತಃ ತಾವೇ ಬಣ್ಣ ಹಚ್ಚಿ, ಬಟ್ಟೆ ತೊಟ್ಟು, ಹೆಜ್ಜೆ ಕಟ್ಟುವ ರೀತಿಗೆ ಬೆರಗಾದೆ ಎಂದರು.
ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿಯಾದ್ಯಂತ ಅನೇಕ ಸಿನೆಮಾಗಳನ್ನು ಮಾಡಿದ್ದೇನೆ. ಆ ಹೊತ್ತಿಗೆಲ್ಲ, ಯಕ್ಷಗಾನವನ್ನು ಗಮನಿಸುತ್ತಿದ್ದೆ. ಆರೇಳು ಗಂಟೆ ಏರು ಧ್ವನಿಯಲ್ಲಿ ಹಾಡುವ ಭಾಗವತರ ಶಕ್ತಿಯ ಬಗ್ಗೆ ಆಶ್ಚರ್ಯವಾಗುತ್ತದೆ. ಕಲಾವಿದರನ್ನು ಕಂಡು ನಾನೂ ಒಮ್ಮೆ ಯಕ್ಷಗಾನದ ಬಣ್ಣ ಹಚ್ಚಬೇಕೆಂಬ ಆಸೆ ಇತ್ತು. ಈಗ ಅದು ನನಸಾಗಿದೆ. ಛಾಯಾಚಿತ್ರಗ್ರಾಹಕ ಫೋಕಸ್ ರಾಘು ಅವರ ಚಿತ್ರಗಳನ್ನು ನೋಡಿ ತನ್ನ ಫೋಟೋ ಶೂಟ್ ಮಾಡುವಂತೆ ತಿಳಿಸಿದ್ದರು. ಶೈಲೇಶ್ ತೀರ್ಥಹಳ್ಳಿ ಯಕ್ಷಗಾನದ ವೇಷ ತೊಡಿಸಿದ್ದರು. ಮನೋವೈದ್ಯ, ಲೇಖಕ ಡಾ| ವಿರೂಪಾಕ್ಷ ದೇವರುಮನೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ