ಉಡುಪಿ ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ

ಅದಮಾರು ಮಠ ಹಾಗೂ ಮಠದ ಶಿಕ್ಷಣ ಸಂಸ್ಥೆಗಳ ವತಿಯಿಂದ 55,55,555 ರೂ. ದೇಣಿಗೆ

Team Udayavani, Apr 17, 2020, 5:25 PM IST

ಉಡುಪಿ ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ

ಉಡುಪಿ: ಪ್ರಧಾನ ಮಂತ್ರಿಯವರ ಕೋವಿಡ್ ಸಂತ್ರಸ್ತರ ನಿಧಿಗೆ ಪರ್ಯಾಯ ಶ್ರೀ ಅದಮಾರು ಮಠ ಹಾಗೂ ಮಠದ ಶಿಕ್ಷಣ ಸಂಸ್ಥೆಗಳ ವತಿಯಿಂದ 55,55,555.00 ( ಐವತ್ತೈದು ಲಕ್ಷದ ಐವತ್ತೈದು ಸಾವಿರದ ಐನೂರ ಐವತ್ತೈದು) ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಯಿತು.

ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಜಗದೀಶ್, ಉಡುಪಿ ಶಾಸಕರಾದ ರಘುಪತಿ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಇವರ ಸಮ್ಮುಖದಲ್ಲಿ ಅದಮಾರು ಮಠದಲ್ಲಿ ಇಂದು ದೇಣಿಗೆಯ ಚೆಕ್ ನೀಡಿದರು.

ಕಾಲ ಕಾಲಕ್ಕೆ ಮಳೆ ಬರಬೇಕು ಮಳೆಯಿಂದ ಬೆಳೆ ಬೆಳೆಯಬೇಕು. ಆದರೆ ಪ್ರಸ್ತುತ ಯಾರೋ ಒಬ್ಬರು ಮಾಡಿದ ತಪ್ಪಿನಿಂದ ವಿಶ್ವದ ಪ್ರತೀಯೊಬ್ಬರೂ ಬೆಲೆ ತೆರಬೇಕಾದ ಪ್ರಸಂಗ ಬಂದು ಜಗತ್ತಿಗೆ ದೊಡ್ಡ ಅನಾಹುತ ಬಂದಿದೆ. ನಮ್ಮ ದೇಶದ ಪ್ರಧಾನಿಯವರು ಸಂಕಷ್ಟದಲ್ಲಿರುವ ದೇಶದ ಜನರ ಪರಿಹಾರಕ್ಕಾಗಿ ಮಾಡುತ್ತಿರುವ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು.

ಈ ನಿಟ್ಟಿನಲ್ಲಿ ನಾವು ನಮ್ಮ ಮಠದಿಂದ ದೇವರಲ್ಲಿ ಪ್ರಾರ್ಥಿಸಿ ಮೊತ್ತವನ್ನು ಪ್ರಸಾದ ರೂಪವಾಗಿ ನೀಡಿದ್ದೇವೆ. ಆದಷ್ಟು ಬೇಗ ಎಲ್ಲರೂ ಆರೋಗ್ಯವಂತರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು  ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಈ ಸಂದರ್ಭದಲ್ಲಿ ತಮ್ಮ ಸಂದೇಶವನ್ನು ನೀಡಿದರು.


ದೇಶದ ಈ ಸಂಕಷ್ಟ ಕಾಲದಲ್ಲಿ ಸರ್ಕಾರಕ್ಕೆ ಯಾವುದೇ ಮೂಲಗಳಿಂದ ತೆರಿಗೆ ರೂಪದ ಆದಾಯವಿರುವುದಿಲ್ಲ. ಆದರೆ ವಿವಿಧ ಇಲಾಖೆಗಳ ಖರ್ಚು ಸಾರ್ವಜನಿಕರ ಆರೋಗ್ಯದ ಖರ್ಚುಗಳು ಇದ್ದೆ ಇರುತ್ತದೆ. ಇದಕ್ಕೆ ನಾವು ವಾರದಲ್ಲಿ ಮೂರೂ ಹೊತ್ತಿನ ಊಟವನ್ನು ಬಿಟ್ಟು ಅದರ ಉಳಿತಾಯವನ್ನು ಕಷ್ಟದಲ್ಲಿರುವವರಿಗೆ ನಾವು ಹಂಚಬಹುದು. ಎಲ್ಲರ ಪರಿಶ್ರಮದಿಂದ ವಿಶ್ವದಲ್ಲಿಯೇ ಭಾರತ ದೇಶವು ಪ್ರಥಮ ಕೋವಿಡ್ ಮುಕ್ತ ದೇಶವಾಗಿ ವಿಶ್ವಗುರುವಾಗಿ ಹೊರಹೊಮ್ಮಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಈ ಹಿಂದೆ ಅದಮಾರು ಮಠದ ವತಿಯಿಂದ ಎರಡು ಲಕ್ಷ ರೂಪಾಯಿಗಳನ್ನು ಪ್ರಧಾನ ಮಂತ್ರಿಯವರ ಕೋವಿಡ್ ಪರಿಹಾರ ನಿಧಿಗೆ ನೀಡಲಾಗಿತ್ತು. ಪರ್ಯಾಯ ಶ್ರೀ ಅದಮಾರು ಮಠ ಹಾಗೂ ಶ್ರೀ ಕೃಷ್ಣ ಮಠದ ವತಿಯಿಂದ ದಿನವಹಿ ಸಾಮಗ್ರಿಗಳ 1000 ಕಿಟ್ ಗಳನ್ನೂ ಹಾಗೂ ಅದಮಾರು ಮಠದ ಆಡಳಿತದಲ್ಲಿರುವ ಕುಂಜಾರುಗಿರಿ ಶ್ರೀ ದುರ್ಗಾ ದೇವಾಸ್ಥಾನದಿಂದ 250 ಕಿಟ್ ಗಳನ್ನೂ ನೀಡಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.